ಕ್ಷೇತ್ರ ಪರಿಚಯ : ಬೈಲಹೊಂಗಲ ಕ್ಷೇತ್ರದಲ್ಲಿ ಯಾರಿಗೆ ಗೆಲುವು?
ಬೆಳಗಾವಿ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ ಬೈಲಹೊಂಗಲ. ಒಮ್ಮೆ ಚುನಾವಣೆಯಲ್ಲಿ ಶಾಸಕರು ಸೋತರೆ ಮತ್ತೆ ಈ ಕ್ಷೇತ್ರದಲ್ಲಿ ಗೆದ್ದ ಉದಾಹರಣೆಗಳಿಲ್ಲ, ಇದು ಕ್ಷೇತ್ರದ ವಿಶೇಷ. ಮತ್ತೊಂದು ಚುನಾವಣೆಗೆ ಕ್ಷೇತ್ರ ಸಿದ್ಧವಾಗುತ್ತಿದೆ.
ಜನರ ಸೇವೆ ಮಾಡುವ ಜನ ಪ್ರತಿನಿಧಿಗಳನ್ನು ಜನರು ಆರಿಸುತ್ತಲೇ ಬಂದಿದ್ದಾರೆ. ಒಂದು ವೇಳೆ ಜನರ ಆಶೋತ್ತರಗಳಿಗೆ ಸ್ಪಂದಿಸದಿದ್ದರೆ ಸೋಲು ಕಟ್ಟಿಟ್ಟ ಬುತ್ತಿಯಾಗಿದೆ. ಸ್ವಾತಂತ್ರ್ಯ ನಂತರ ನಡೆದ 14 ಚುನಾವಣೆ ಮತ್ತು ಒಂದು ಉಪ ಚುನಾವಣೆಯಲ್ಲಿ ಒಮ್ಮೆ ಸೋತವರು ಮತ್ತೆ ಆಯ್ಕೆಯಾಗಿಲ್ಲ.
2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿದ್ದ ವಿಶ್ವನಾಥ್ ಪಾಟೀಲ್ 40,709 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಬಾರಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದು, ಟಿಕೆಟ್ ಘೋಷಣೆ ಮಾಡಲಾಗಿದೆ.

ಬೈಲಹೊಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೇ ನೇರ ಪೈಪೋಟಿ ಇದ್ದಂತೆ ಕಾಣುತ್ತದೆ. ಎರಡು ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ನಾಯಕರು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ? ಕಾದು ನೋಡಬೇಕು.
ಜೆಡಿಎಸ್ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಪ್ರಯತ್ನ ನಡೆಸುತ್ತಿದೆ. ಎಚ್.ಡಿ.ದೇವೇಗೌಡ ಅವರ ಪರಮಾಪ್ತರಾದ ಶಂಕರ ಮಾಳಗಿ ಅವರು ಅಭ್ಯರ್ಥಿ ಎಂದು ಜೆಡಿಎಸ್ ಪಕ್ಷ ಘೋಷಣೆ ಮಾಡಿದೆ.
ಕ್ಷೇತ್ರದಲ್ಲಿ ಯಾರು ಎಷ್ಟು ಮತ ಪಡೆಯುತ್ತಾರೆ ಎನ್ನುವುದಕ್ಕಿಂತ, ಯಾರು ಎಷ್ಟು ಮತ ಕಸಿಯುತ್ತಾರೆ? ಎಂಬ ಲೆಕ್ಕಾಚಾರವೇ ಪ್ರಮುಖವಾಗಿದೆ. ಈ ಬಾರಿ ಗೆಲುವು ಯಾರಿಗೆ? ಕಾದು ನೋಡಬೇಕು.
2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿದ್ದ ವಿಶ್ವನಾಥ್ ಐ ಪಾಟೀಲ್ 40,709 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಜಗದೀಶ ಮೆಟಗುಡಿ 37,088, ಜೆಡಿಎಸ್ನ ಶಂಕರ ಮಾಡಲಗಿ 9,475 ಮತಗಳನ್ನು ಪಡೆದಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications