ಕ್ಷೇತ್ರ ಪರಿಚಯ : ಬಸವ ಕಲ್ಯಾಣದಲ್ಲಿ ಗೆಲ್ಲುವವರು ಯಾರು?
ಬೀದರ್ ಜಿಲ್ಲೆಯ ಪ್ರಮುಖ ಕ್ಷೇತ್ರ ಬಸವ ಕಲ್ಯಾಣ. ಲಾರಿಗಳು ಈ ಪಟ್ಟಣದ ಆರ್ಥಿಕತೆ ನಿರ್ಧರಿಸುತ್ತವೆ. ಒಂದು ಅಂದಾಜಿನ ಪ್ರಕಾರ 10 ಸಾವಿರಕ್ಕೂ ಅಧಿಕ ಲಾರಿಗಳು ಇಲ್ಲಿವೆ. ಹೈದರಾಬಾದ್-ಪುಣೆ ರಾಷ್ಟ್ರೀಯ ಹೆದ್ದಾರಿ ಪಟ್ಟಣಕ್ಕೆ ಹತ್ತಿರದಲ್ಲಿದೆ. ವಾಹನಗಳ ಬಿಡಿಭಾಗಗಳ ಉದ್ಯಮವೂ ಇಲ್ಲಿ ಜೋರಾಗಿದೆ.
'ಸಸ್ತಾಪುರ ಬಾಂಗ್ಲಾ' ಬಸವ ಕಲ್ಯಾಣದ ಪ್ರಮುಖ ಆರ್ಥಿಕ ಕೇಂದ್ರ. ಲಾರಿಗಳಂತೆ ಅದನ್ನು ರಿಪೇರಿ ಮಾಡುವ ಗ್ಯಾರೇಜುಗಳು ಇಲ್ಲಿ ಅಧಿಕವಾಗಿವೆ. ಪುಣೆ, ಗುಜರಾತ್, ಮುಂಬೈ, ಹೈದರಾಬಾದ್ ಗಳಲ್ಲಿಯೂ ಪಟ್ಟಣದ ಜನರ ವ್ಯವಹಾರ ಹಬ್ಬಿದೆ.
12ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿ ನಡೆದ ಪಟ್ಟಣವಿದು. ಜಿಲ್ಲಾಕೇಂದ್ರ ಬೀದರ್ನಿಂದ ಸುಮಾರು 80 ಕಿ.ಮೀ.ದೂರದಲ್ಲಿದೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ ಈ ಕ್ಷೇತ್ರ. ಬಸವ ಕಲ್ಯಾಣದ ಕೋಟೆ ಪ್ರಮುಖ ಆಕರ್ಷಣೆ.

2011ರ ಜನಗಣತಿಯ ಅನ್ವಯ ಬಸವ ಕಲ್ಯಾಣ ಪಟ್ಟಣದ ಜನಸಂಖ್ಯೆ 69,717. ಪಟ್ಟಣ್ಣದಲ್ಲಿರುವ 108 ಅಡಿ ಎತ್ತರದ ಬಸವೇಶ್ವರರ ಪುತ್ಥಳಿ ಕ್ಷೇತ್ರದ ಪ್ರಮುಖ ಆಕರ್ಷಣೆ, ಕೋಟೆ, ದೇವಾಲಯಗಳು ಪ್ರವಾಸಿಗರನ್ನು ಸೆಳೆಯುತ್ತವೆ.
ಹೈದರಾಬಾದ್-ಪುಣೆ ರಾಷ್ಟ್ರೀಯ ಹೆದ್ದಾರಿ ಪಟ್ಟಣಕ್ಕೆ ಹತ್ತಿರದಲ್ಲಿದೆ. ಆದ್ದರಿಂದ, ಇಲ್ಲಿನ ಬಹುತೇಕ ಜನರು ಲಾರಿಗಳನ್ನು ಬಾಡಿಗೆಗೆ ನೀಡಿದ್ದಾರೆ. ಆದ್ದರಿಂದ, ಇಲ್ಲಿನ ಆರ್ಥಿಕತೆ ಲಾರಿಗಳ ಚಕ್ರದ ಸುತ್ತಲೇ ಗಿರಿಕಿ ಹೊಡೆಯುತ್ತದೆ.
ಬಸವಕಲ್ಯಾಣ 1983 ರಿಂದ 2004ರ ತನಕ ಜನತಾ ಪರಿವಾರದ ಭದ್ರ ಕೋಟೆಯಾಗಿತ್ತು. 2008ರಲ್ಲಿ ಕ್ಷೇತ್ರ ಬಿಜೆಪಿ ತಕ್ಕೆಗೆ ಸೇರಿತು. 2013ರಲ್ಲಿ ಕ್ಷೇತ್ರ ಜೆಡಿಎಸ್ ಪಾಲಾಯಿತು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳ ಹಿಡಿತದಲ್ಲಿರುವ ಕ್ಷೇತ್ರವಿದು.
ಕ್ಷೇತ್ರದ ಸದ್ಯದ ಶಾಸಕರು ಜೆಡಿಎಸ್ನ ಮಲ್ಲಿಕಾರ್ಜುನ ಖೂಬಾ. ಕಳೆದ ಚುನಾವಣೆಯಲ್ಲಿ 15,893 ಮತಗಳ ಅಂತರದಿಂದ ಅವರು ಜಯಗಳಿಸಿದ್ದಾರೆ. ಮಾಜಿ ಸಚಿವ ಬಸವರಾಜ ಪಾಟೀಲ್ ಅಟ್ಟೂರ್ ಬಿಜೆಪಿ ಸೇರಿದ್ದು, ಅವರ ಕುಟುಂಬದವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎಂಬುದು ಸುದ್ದಿ.
ಮಲ್ಲಿಕಾರ್ಜುನ ಖೂಬಾ ಅವರು ಈ ಬಾರಿಯು ಟಿಕೆಟ್ ಪಡೆಯುವುದು ಖಚಿತ. ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು ಯಾರಾಗುತ್ತಾರೆ? ಎಂಬುದರ ಮೇಲೆ ಹಣಾಹಣಿ ನಿರ್ಧಾರವಾಗಲಿದೆ.
2013ರ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖೂಬಾ ಅವರು 37,494 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ನ ಬಿ.ನಾರಾಯಣ ರಾವ್ 21,601 ಮತ, ಬಿಜೆಪಿಯ ಸಂಜಯ್ 17,431 ಮತಗಳನ್ನು ಪಡೆದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications