ಬಸವನ ಬಾಗೇವಾಡಿ ಕ್ಷೇತ್ರ: ಯಾರಿಗೊಲಿಯುವುದು ಬಸವಣ್ಣನ ನೆಲೆ?
ಬಸವನ ಬಾಗೇವಾಡಿ ಎಂದೊಡನೆ ನೆನಪಾಗುವುದು ವಚನ ಕ್ರಾಂತಿಯ ಹರಿಕಾರ ಬಸವಣ್ಣ. ಅವರು ಹುಟ್ಟಿದ, ಲಿಂಗೈಕ್ಯರಾದ ಸ್ಥಳವಾಗಿರುವುದರಿಂದ ಇದು ಪುಣ್ಯಕ್ಷೇತ್ರವಾಗಿಯೂ, ಪ್ರವಾಸಿ ತಾಣವಾಗಿಯೂ ಪ್ರಸಿದ್ಧಿ.
12 ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ, ಸಾಮಾಜಿಕ ಜಾಗೃತಿಗೆ ಮುನ್ನುಡಿ ಬರೆದ ಬಸವಣ್ಣನವರು ಲಿಂಗೈಕ್ಯರಾದ ಇದು ವಿಜಯಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಕೇಂದ್ರಗಳಲ್ಲೊಂದು.
ಬಸವನ ಬಾಗೇವಾಡಿಯನ್ನು 2013 ರ ಫೆಬ್ರವರಿ ಬಜೆಟ್ ನಲ್ಲಿ ಕರ್ನಾಟಕ ಸರ್ಕಾರ ಹೊಸ ತಾಲೂಕನ್ನಾಗಿ ಘೋಷಿಸಿತ್ತು. ಇಲ್ಲಿನ ಕೃಷ್ಣಾ ನದಿಗೆ ಕಟ್ಟಲಾದ ಆಲಮಟ್ಟಿ ಜಲಾಶಯ ಏಷ್ಯಾ ಖಂಡದಲ್ಲೇ ಅತೀ ದೊಡ್ಡದು ಎಂಬ ಖ್ಯಾತಿ ಗಳಿಸಿದೆ. ಆಲಮಟ್ಟಿ ಜಲಾಶಯದಿಂದಾಗಿ ಜಮೀನು, ಮನೆ ಕಳೆದುಕೊಂಡವರು ನೂರಾರು ಜನ. ಇಲ್ಲಿನ ಇಳಕಲ್ಲು ಸೀರೆ ಮತ್ತು ಖಾದಿ ಬಟ್ಟೆ ದೇಶದಲ್ಲೇ ಪ್ರಸಿದ್ಧಿ ಪಡೆದಿದೆ. ಇಲ್ಲಿ ಲಂಬಾಣಿ ಜನರನ್ನೂ ಕಾಣಬಹುದು.

ಇಲ್ಲಿನ ಮುಖ್ಯ ಭಾಷೆ ಕನ್ನಡ. ಉತ್ತರ ಕರ್ನಾಟಕ ಶೈಲಿಯ ಸೊಗಸಾದ ಕನ್ನಡ ಇಲ್ಲಿನ ಆಡುಬಾಷೆ. ಕೃಷಿಯೊಂದಿಗೆ ನೇಕಾರಿಕೆಯನ್ನೂ ಆದಾಯದ ಮೂಲವನ್ನಾಗಿ ಜನ ನಂಬಿದ್ದಾರೆ.
ಇಲ್ಲಿನ ರಾಜಕೀಯ ವೃತ್ತಾಂತ ಕೆಣಕುವುದಾದರೆ ಈಗ ಶಾಸಕರಾಗಿರುವ ಕಾಂಗ್ರೆಸ್ ನ ಶಿವಾನಂದ ಪಾಟೀಲ ಈ ಬಾರಿಯೂ ಸ್ಪರ್ಧಿಸುವುದಂತೂ ಖಚಿತ. ಶಿವಾನಂದ ಪಾಟೀಲರು ಸ್ವಂತ ಬಲದ ಮೆಲೆ ಗೆಲ್ಲುವ ತಾಕತ್ತಿನ ರಾಜಕಾರಣಿ. ಅವರ ವಿರುದ್ಧ ಬಿಜೆಪಿ ಮಾಜಿ ಮಂತ್ರಿ ಸಂಗಪ್ಪ ಬೆಳ್ಳುಬ್ಬಿ ಸ್ಪರ್ಧಿಸಲಿದ್ದಾರೆ.
ಸಂಗಪ್ಪ ಬೆಳ್ಳುಬ್ಬಿ ಅವರು ಜಾನಪದ ಕಲಾವಿದರೂ ಆಗಿರುವುದರಿಂದ ಜನ ಸಂಪರ್ಕ ಚೆನ್ನಾಗಿದೆ. ಇವರು ಖಾಸಗಿ ಸಕ್ಕರೆ ಕಾರ್ಖಾನೆ ಸಹ ಕಟ್ಟುತ್ತಿದ್ದು, ಉದ್ಯೋಗಾವಕಾಶ ನೀಡುತ್ತಿದ್ದಾರೆ. ಲಿಂಗಾಯತ ಗಾಣಿಕ ಸಮಾಜಕ್ಕೆ ಸೇರಿದ ಇವರು ಗೆಲ್ಲುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications