ಕ್ಷೇತ್ರ ಪರಿಚಯ: ಬೆಳಗಾವಿ ಉತ್ತರದ ಗದ್ದುಗೆ ಯಾರ ಪಾಲಿಗೆ?
ಕರ್ನಾಟಕದಲ್ಲಿ ಅತ್ಯಂತ ದೊಡ್ಡ ಜಿಲ್ಲೆ ಎಂಬ ಖ್ಯಾತಿಗೆ ಪಾತ್ರವಾದ ಬೆಳಗಾವಿಗೆ ರಾಜ್ಯದ ಎರಡನೇ ರಾಜಧಾನಿ ಎಂಬ ಅನೌಪಚಾರಿಕ ಬಿರುದೂ ಇದೆ.
ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರೂ, ಶೌರ್ಯದ ಪ್ರತೀಕವೂ ಆದ ರಾಣಿ ಚೆನ್ನಮ್ಮ - ಸಂಗೊಳ್ಳಿ ರಾಯಣ್ಣರಿಂದ ಖ್ಯಾತಿ ಪಡೆದ ಕಿತ್ತೂರು ಸಹ ಬೆಳಗಾವಿಯಲ್ಲಿಯೇ ಇದೆ ಎಂಬುದು ಜಿಲ್ಲೆಗೆ ಮತ್ತೊಂದು ಗರಿ.
ಇಲ್ಲಿನ ರಾಜಕೀಯ ಇತಿಹಾಸದ ಬಗ್ಗೆ ಮಾತನಾಡುವುದಾದರೆ, ಸದ್ಯ ಚರ್ಚೆಯಲ್ಲಿರು ಕ್ಷೇತ್ರಗಳಲ್ಲಿ ಇದೂ ಒಂದು. ಪ್ರಸ್ತುತ ಇಲ್ಲಿ ಕಾಂಗ್ರೆಸ್ಸಿನ ಫಿರೋಜ ಸೇಠ್ ಶಾಸಕರಾಗಿದ್ದಾರೆ. ಸಾಕಷ್ಟು ಅಭಿವೃದ್ಧಿ ಕಾರ್ಯಕಗಳಾಗಿದ್ದರೂ, ಸಮಸ್ಯೆಗಳೂ ಅಷ್ಟೇ ಇವೆ. ಮಹಾನಗರ ಪಾಲಿಕೆ ಎಮ್ ಇ ಎಸ್(ಮಹಾರಾಷ್ಟ್ರ ಏಕೀಕರಣ ಸಮಿತಿ) ಹಿಡಿತದಲ್ಲಿದೆ. ಅವರಿಗೂ ಇವರಿಗೂ ಹೊಂದಾಣಿಕೆ ಕೊರತೆ ಇರುವುದರಿಂದ ಈ ಕ್ಷೇತ್ರದಲ್ಲಿ ಆಗಾಗ ಕೋಮು ಗಲಭೆಗಳು ನಡೆಯುತ್ತಲೇ ಇವೆ. ಇಲ್ಲಿನ ಶಾಸಕರ ತಾರತಮ್ಯ ಧೋರಣೆ ಬಗ್ಗೆ ಹಲವರಲ್ಲಿ ಅಸಮಾಧಾನವಿದೆ.

ಹೀಗಾಗಿ ಈ ಚುನಾವಣೆಯಲ್ಲಿ ಇವರಿಗೆ ಗೆಲುವಿನ ಅವಕಾಶವಿದ್ದರೂ ಇವರನ್ನ ಸೋಲಿಸುವುದಕ್ಕೆ ಯಾವ್ಯಾವ ರೀತಿಯ ಪಿತೂರಿಗಳು ನಡೆಯುತ್ತವೆಯೋ ಹೇಳುವುದು ಕಷ್ಟ. ಬಿಜೆಪಿಯಲ್ಲಿ ಕೂಡ ಟಿಕೇಟ್ ಗೊಂದಲವಿದ್ದು, ಅದು ಕೂಡ ನಿವಾರಣೆ ಆಗಬೇಕಿದೆ. ಎಮ್ ಇ ಎಸ್ ಕಾದು ನೋಡುವ ತಂತ್ರದಲ್ಲಿದೆ. ಮರಾಠಿ ಪ್ರಭಾವ ಹೆಚ್ಚಿರುವುದು ಸಹ ಇಲ್ಲಿ ಗಮನೀಯ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
2013 ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರು:
ಫಿರೋಜ ಸೇಠ್ -ಕಾಂಗ್ರೆಸ್-45125 ಮತಗಳು
ರೇಣು ಸುಹಾಸ್ ಕಿಲ್ಕರ್-ಪಕ್ಷೇತರ-26915 ಮತಗಳು
ಕಿರಣ್ ಮಾರುತಿ ಜಾಧವ್-ಬಿಜೆಪಿ-17456 ಮತಗಳು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications