ಗೋವಿಂದರಾಜನಗರದಲ್ಲಿ ಬಿಜೆಪಿ ಗೆಲುವಿನ ಕನಸು
ಪ್ರಿಯಾ ಕೃಷ್ಣ ಅವರು ಹಾಲಿ ವಿಧಾನಸಭೆಯಲ್ಲಿ ಅತಿ ಕಿರಿಯ ಶಾಸಕ, ಅತ್ಯಂತ ಶ್ರೀಮಂತ ರಾಜಕಾರಣಿ. ಕಾಂಗ್ರೆಸ್ಸಿನಿಂದ ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸೋಮಣ್ಣ, ಬಿಜೆಪಿ ಸೇರ್ಪಡೆಯಾಗಿ ಸಚಿವರಾದರು. ಉಪಚುನಾವಣೆಯನ್ನು ಪ್ರಿಯಾಕೃಷ್ಣ ಗೆದ್ದುಕೊಂಡರು. ಸಮುದಾಯ ಭವನ, ಅಂಗನವಾಡಿ ಕಟ್ಟಡಗಳ ಜತೆಗೆ ಅಗ್ರಹಾರ ದಾಸರಹಳ್ಳಿ ಶಾಲೆಯನ್ನು ವಿಶೇಷವಾಗಿ ಅಭಿವೃದ್ಧಿಪಡಿಸಿದ್ದಾರೆ. ಕುಡಿಯುವ ನೀರು ಪೂರೈಕೆ ಸುಧಾರಣೆಯಾಗಿದೆ.
767 ಕೋಟಿ ರೂ. ನಷ್ಟು ಘೋಷಿತ ಆಸ್ತಿಯ ಶ್ರೀಮಂತ ಕುಳ. ಹಾಲಿ ವಿಧಾನಸಭೆಯಲ್ಲಿ ಅತ್ಯಂತ ಕಿರಿಯ ವಯಸ್ಸಿನ ಶಾಸಕ. ಆರಂಭದಲ್ಲಿ ಸೋಮಣ್ಣ ಹಿಡಿತದಲ್ಲಿದ್ದ ಕ್ಷೇತ್ರ. ಅವರಿಂದಲೂ ಒಂದಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದವು. ಹಾಲಿ ಶಾಸಕ ಜನರಿಗೆ ಪ್ರಿಯ ಎನ್ನುವುದಕ್ಕಿಂತ ತಮ್ಮ ಪಟಾಲಂಗೆ ಬೇಕಾದವರು. ಚುನಾವಣೆಯಲ್ಲಿ ಇವರದೇ ಕಾರುಬಾರು. ಈ ಬಾರಿ ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಆಯ್ಕೆ ಬಯಸಿ, ಸೋಮಣ್ಣ ಅವರು ಕಣಕ್ಕಿಳಿದಿದ್ದಾರೆ.

* ಸಮಸ್ಯೆಗಳು: ಸಾರ್ವಜನಿಕ ಸಾರಿಗೆ, ಸಾರ್ವಜನಿಕ ಭದ್ರತೆ, ಉದ್ಯೋಗ, ಕಾನೂನು ವ್ಯವಸ್ಥೆಯಲ್ಲಿ ಗಮನಾರ್ಹ ಸಾಧನೆ ಇಲ್ಲವಾಗಿದೆ.
* ವಿಧಾನಸಭಾ ಕ್ಷೇತ್ರ ಸಂಖ್ಯೆ 166:
ಹಾಲಿ ಶಾಸಕ- ಪ್ರಿಯಾ ಕೃಷ್ಣ ಕಾಂಗ್ರೆಸ್.
ಸೋತ ಅಭ್ಯರ್ಥಿ ಆರ್ ರವೀಂದ್ರ- ಬಿಜೆಪಿ
* ವಾರ್ಡ್: ಕಾವೇರಿಪುರ, ಗೋವಿಂದರಾಜ ನಗರ, ಅಗ್ರಹಾರ ದಾಸರಹಳ್ಳಿ, ಡಾ. ರಾಜ್ ಕುಮಾರ್ ವಾರ್ಡ್, ಮಾರೇನಹಳ್ಳಿ, ಮಾರುತಿ ಮಂದಿರ, ಮೂಡಲಪಾಳ್ಯ, ನಾಗರಭಾವಿ, ನಾಯಂಡಹಳ್ಳಿ
* ಮತದಾರರ ಸಂಖ್ಯೆ: 2,46,476. ಕಳೆದ ಬಾರಿ ವೋಟ್ ಮಾಡಿದವರು ಶೇ. 54.82ರಷ್ಟು ಮಂದಿ. 131237 ಮತಗಳ ಪೈಕಿ ಪ್ರಿಯಾಕೃಷ್ಣ ಅವರು 72654 ಮತಗಳನ್ನು ಪಡೆದು ಜಯ ಗಳಿಸಿದರು. ಬಿಜೆಪಿಯ ರವೀಂದ್ರ ಅವರಿಗೆ 30194 ಮತಗಳು ಮಾತ್ರ ಲಭಿಸಿತು. 42460 ಮತಗಳ (ಶೇ 32.35) ಅಂತರದಿಂದ ಪ್ರಿಯಾಕೃಷ್ಣ ಗೆಲುವು ದಾಖಲಿಸಿದ್ದರು. ಜೆಡಿಎಸ್ ನ ಟಿ.ಎಂ ರಂಗೇಗೌಡ ಅವರು 20600 ಮತಗಳನ್ನು ಗಳಿಸಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications