ಮಹದೇವಪುರ: ಲಿಂಬಾವಳಿ ಹ್ಯಾಟ್ರಿಕ್ ಗೆ ಬ್ರೇಕ್ ಹಾಕುವುದೇ ಕೈ ಪಡೆ
ಬೆಂಗಳೂರಿನ ಮಹದೇವಪುರ ಮೀಸಲು ಕ್ಷೇತ್ರದಲ್ಲಿ ಬಹುರಾಷ್ಟೀಯ ಕಂಪನಿಗಳು, ಹೊರ ವರ್ತುಲ ರಸ್ತೆ, ಸುದ್ದಿಗೆ ಗ್ರಾಸವಾಗಿರುವ ಕೆರೆಗಳು, ಪ್ರಮುಖ ಆಸ್ಪತ್ರೆಗಳು ಸೇರಿದಂತೆ ವೈವಿಧ್ಯವಾಗಿದೆ.
ಎರಡು ಈ ಕ್ಷೇತ್ರದಿಂದ ಗೆದ್ದು ಬಂದಿರುವ ಬಿಜೆಪಿಯ ಶಾಸಕ ಅರವಿಂದ ಲಿಂಬಾವಳಿ ಅವರು ಸಚಿವರಾಗಿ ಕೂಡಾ ಅನುಭವ ಹೊಂದಿದವರು. ಆದರೆ, ಈ ಬಾರಿ ಲಿಂಬಾವಳಿಗೆ ಹ್ಯಾಟ್ರಿಕ್ ತಪ್ಪಿಸಲು ಕಾಂಗ್ರೆಸ್ ಪಣತೊಟ್ಟಿದೆ.
ಬೆಂಗಳೂರಿನ ವಿಧಾನಸಭಾ ಕ್ಷೇತ್ರಗಳ ಪರಿಚಯ
ಬಿಬಿಎಂಪಿ ಚುನಾವಣೆಯಲ್ಲಿ 8 ವಾರ್ಡ್ಗಳ ಪೈಕಿ 4 ವಾರ್ಡ್ಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವಲ್ಲಿ ಲಿಂಬಾವಳಿ ಯಶಸ್ವಿಯಾಗಿದ್ದರು. 3 ವಾರ್ಡ್ಗಳನ್ನು ಕಾಂಗ್ರೆಸ್ ತೆಕ್ಕೆಗೆ ಪಡೆದುಕೊಳ್ಳುವಲ್ಲಿ ಶ್ರೀನಿವಾಸ್ ಪ್ರಮುಖ ಪಾತ್ರ ವಹಿಸಿದ್ದರು. ಇದರಲ್ಲಿ ಸೋದರ ಎ.ಸಿ. ಹರಿಪ್ರಸಾದ್ ಹೂಡಿ ವಾರ್ಡ್ನಲ್ಲಿ ಗೆಲುವು ಸಾಧಿಸಿದ್ದರು. ಮಾರತ್ತಹಳ್ಳಿ ವಾರ್ಡ್ನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದ ರಮೇಶ್ ಈಗ ಕಾಂಗ್ರೆಸ್ ಸೇರಿದ್ದಾರೆ. 11 ಪಂಚಾಯಿತಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿರುವುದು ಕೈ ಪಾಳಯದಲ್ಲಿ ನಿರೀಕ್ಷೆ ಹುಟ್ಟುಹಾಕಿದೆ.

2013ರ ಫಲಿತಾಂಶದ ವಿಶ್ಲೇಷಣೆ
* ವಿಧಾನಸಭಾ ಕ್ಷೇತ್ರ ಸಂಖ್ಯೆ 174:
ಹಾಲಿ ಶಾಸಕ- ಅರವಿಂದ ಲಿಂಬಾವಳಿ- ಬಿಜೆಪಿ.
ಸೋತ ಅಭ್ಯರ್ಥಿ ಎ. ಸಿ ಶ್ರೀನಿವಾಸ್- ಕಾಂಗ್ರೆಸ್
* ವಾರ್ಡ್: ಹೂಡಿ, ಗರುಡಾಚಾರ್ ಪಾಳ್ಯ, ಕಾಡುಗೋಡಿ, ಹಗದೂರು, ದೊಡ್ಡ ನೆಕ್ಕುಂಡಿ, ಮಾರತ್ ಹಳ್ಳಿ, ವರ್ತೂರು, ಬೆಳ್ಳಂದೂರು
* ಮತದಾರರ ಸಂಖ್ಯೆ: 368411. ಕಳೆದ ಬಾರಿ ವೋಟ್ ಮಾಡಿದವರು ಶೇ. 61.54ರಷ್ಟು ಮಂದಿ. ಒಟ್ಟು 226749 ಮತಗಳ ಪೈಕಿ ಅರವಿಂದ ಲಿಂಬಾವಳಿ 110244 ಮತಗಳನ್ನು ಪಡೆದು ಜಯಭೇರಿ ಬಾರಿಸಿದರು. ಕಾಂಗ್ರೆಸ್ಸಿನ ಎ.ಸಿ ಶ್ರೀನಿವಾಸ್ ಅವರು 104095 ಮತ ಗಳಿಸಿದರು. ಶೇ 2.71ರಷ್ಟು(6149 ಮತಗಳು) ಮತಗಳ ಅಂತರದಿಂದ ಮಾತ್ರ ಗೆಲುವು ಸಾಧಿಸಿದರು.

ಎಬಿವಿಪಿ ಸಂಘಟನೆಯ ಮೂಲಕ ಬೆಳೆದವರು
ಮೇಲ್ಮನೆ ಸದಸ್ಯರಾಗಿದ್ದ ಲಿಂಬಾವಳಿ ಅವರು ಎರಡು ಬಾರಿ ವಿಧಾನಸಭೆಯೆ ಆಯ್ಕೆಯಾಗಿದ್ದಾರೆ. ಎಬಿವಿಪಿ ಸಂಘಟನೆಯ ಮೂಲಕ ಬೆಳೆದವರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಸಾಧನೆ ಮಾಡಿದ್ದಾರೆ. ಸರಕಾರಿ ಶಾಲೆ ಕಟ್ಟಡ, ಅಂಗನವಾಡಿ, ಗ್ರಂಥಾಲಯ, ವ್ಯಾಯಾಮ ಶಾಲೆ, ಕ್ರೀಡಾಂಗಣ ಅಭಿವೃದ್ಧಿ ಇವರ ಸಾಧನೆ

ಸಮಸ್ಯೆಗಳ ಆಗರವಾಗಿರುವ ಮಹದೇವಪುರ
ಕಾರ್ಪೊರೇಟರುಗಳು ಮಾಡಿದ ಕೆಲಸವನ್ನು ತಮ್ಮದೆಂದೇ ಹೇಳಿಕೊಳ್ಳುತ್ತಾರೆ. ಕಣ್ಣಿಗೆ ಬೀಳುವಂಥ ಮಹತ್ತರ ಕೆಲಸ ಕಾರ್ಯಗಳೇನೂ ಆಗಿಲ್ಲ. ಬಡವರ ಬಗ್ಗೆ ಕಾಳಜಿ ಇಲ್ಲ, ಜನರ ಕೈಗೆ ಸಿಗುವುದೇ ಇಲ್ಲ ಎಂದು ಎದುರಾಳಿ ಶ್ರೀನಿವಾಸ್ ಆರೋಪಿಸುತ್ತಾರೆ.
ಟ್ರಾಫಿಕ್ ಸಮಸ್ಯೆ, ವಸತಿ ಸಮಸ್ಯೆ, ಕಾಲೇಜು ಆಸ್ಪತ್ರೆ ನಿರ್ವಹಣೆ, ಕಟ್ಟಡ ಕುಸಿತ, ಮಳೆ ನೀರು ನಿರ್ವಹಣೆಯಲ್ಲಿ ವೈಫಲ್ಯ, ಐಟಿ ಬಿಟಿ ಉದ್ಯೋಗಿಗಳ ಸುರಕ್ಷತೆ, ಕೆರೆ ತ್ಯಾಜ್ಯ ನಿರ್ವಹಣೆ ವೈಫಲ್ಯ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದು ಹೀಗೆ ಸಮಸ್ಯೆಗಳ ಪಟ್ಟಿ ಬೆಳೆಯುತ್ತದೆ.

ಹ್ಯಾಟ್ರಿಕ್ ಗೆಲುವು ಕಷ್ಟ ಕಷ್ಟ
ಅರವಿಂದ್ ಲಿಂಬಾವಳಿ ಅವರ ಗೆಲುವಿಗೆ ಬ್ರೇಕ್ ಹಾಕಲು ಕಾಂಗ್ರೆಸ್ಸಿನ ಶ್ರೀನಿವಾಸ್ ಅವರಷ್ಟೇ ಆಲ್ಲದೆ, ಮತ ವಿಭಜನೆ ಮಾಡಲು ಆಮ್ ಆದ್ಮಿ ಪಕ್ಷವು ಉಡುಪಿ ಚಲೋ ಖ್ಯಾತಿಯ ಭಾಸ್ಕರ್ ಪ್ರಸಾದ್ ಅವರನ್ನು ಕಣಕ್ಕಿಳಿಸಿದೆ. ಹೀಗಾಗಿ, ಬಿಜೆಪಿ ವಿರುದ್ಧದ ಮತಗಳನ್ನು ಸೆಳೆಯುವಲ್ಲಿ ಭಾಸ್ಕರ್ ಪ್ರಸಾದ್ ಯಶಸ್ವಿಯಾದರೆ, ಲಿಂಬಾವಳಿಗೆ ಅಪಾಯ ಕಾದಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications