ಕ್ಷೇತ್ರ ಪರಿಚಯ: ಪದ್ಮನಾಭನಗರಕ್ಕೆ ಮತ್ತೆ ಅಶೋಕ್ ಸಾಮ್ರಾಟ್ ಆಗುತ್ತಾರಾ?
Recommended Video

ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಶಾಸಕ ಆರ್ .ಅಶೋಕ್ ಪ್ರತಿನಿಧಿಸುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ಬೆಂಗಳೂರಿನ ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲೊಂದು. ಬೆಂಗಳೂರು ರಕ್ಷಿಸಿ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಂದಿದ್ದಲ್ಲದೆ, ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಿರುವ ಕಾರಣಕ್ಕೆ ಆರ್. ಅಶೋಕ್ ಈ ಬಾರಿಯೂ ಜಯಗಳಿಸಿದರೆ ಅಚ್ಚರಿಯೇನಿಲ್ಲ.
* ವಿಧಾನಸಭಾ ಕ್ಷೇತ್ರ ಸಂಖ್ಯೆ 171:
ಹಾಲಿ ಶಾಸಕ- ಆರ್ ಅಶೋಕ್ (55 ವರ್ಷ)- ಬಿಜೆಪಿ.
ಸೋತ ಅಭ್ಯರ್ಥಿ ಎಲ್ ಎಸ್ ಚೇತನ್ ಗೌಡ-ಕಾಂಗ್ರೆಸ್
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
* ಸಾಧನೆಗಳು: ಮಾಜಿ ಗೃಹ, ಸಾರಿಗೆ, ಉಪಮುಖ್ಯಮಂತ್ರಿ ಗೌರವಗಳು ಅಶೋಕ್ ಬತ್ತಳಿಕೆಯಲ್ಲಿದ್ದವು. 2008ಕ್ಕೆ ಮುನ್ನ ರಾಜ್ಯದಲ್ಲೇ ಅತಿ ದೊಡ್ಡ ಕ್ಷೇತ್ರವೆನಿಸಿದ್ದ ಉತ್ತರಹಳ್ಳಿಯಿಂದ ಹ್ಯಾಟ್ರಿಕ್ ಗೆಲುವು ಕಂಡವರು. ಕ್ಷೇತ್ರ ಪುನರ್ವಿಂಗಡಣೆಯಿಂದ ಪದ್ಮನಾಭನಗರದಲ್ಲಿ ತಳವೂರಿದರು.

ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ 3 ಬಸ್ ನಿಲ್ದಾಣಗಳ ಸ್ಥಾಪನೆ. ವಿಶೇಷವಾಗಿ ಆಟದ ಮೈದಾನ ಅಭಿವೃದ್ಧಿಯಾಗಿದೆ. ಬಹುತೇಕ ಎಲ್ಲ ಪಾರ್ಕುಗಳಿಗೂ ಮರುಜೀವ ತುಂಬಿದ್ದಾರೆ. ಸಾರಿಗೆ ಸಚಿವರಾಗಿದ್ದ ಸಮಯದಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಗೆ ಸಾಕಷ್ಟು ಬಹುಮಾನ ತಂದುಕೊಟ್ಟ ಹೆಗ್ಗಳಿಕೆಯೂ ಇವರ ಮೇಲಿದೆ.
* ಸಮಸ್ಯೆಗಳು: ಏಕೈಕ ಹೆರಿಗೆ ಆಸ್ಪತ್ರೆ ಹೊರತುಪಡಿಸಿದರೆ ಬೇರೆ ಸರಕಾರಿ ಆಸ್ಪತ್ರೆಗಳೇ ಇಲ್ಲ. ಆಟದ ಮೈದಾನಗಳನ್ನು ಭೂಗಳ್ಳರು ಕದ್ದಿದ್ದಾರೆ ಎಂದು ಎಂವಿ ಪ್ರಸಾದ್ ಬಾಬು ಕಿಡಿಕಾರುತ್ತಾರೆ. ಸಾರ್ವಜನಿಕ ಸಾರಿಗೆಯಲ್ಲಿ ಮತ್ತಷ್ಟು ಸುಧಾರಣೆ ತರುವುದಕ್ಕೆ ಅವಕಾಶ ಇದೆ. ಕಾನೂನು ಸುವ್ಯವಸ್ಥೆ ಪರವಾಗಿಲ್ಲ. ಟ್ರಾಫಿಕ್ ಸಮಸ್ಯೆಯೂ ಸಾಕಷ್ಟಿದೆ.
* ವಾರ್ಡ್: ಹೊಸಕೆರೆ ಹಳ್ಳಿ, ಗಣೇಶ ಮಂದಿರ, ಕರಿಸಂದ್ರ, ಯಡಿಯೂರು, ಬನಶಂಕರಿ ದೇವಸ್ಥಾನ, ಕುಮಾರಸ್ವಾಮಿ ಬಡಾವಣೆ, ಪದ್ಮನಾಭ ನಗರ, ಚಿಕ್ಕಲಸಂದ್ರ
* ಮತದಾರರ ಸಂಖ್ಯೆ: 1,05,939 .
2013ರ ಚುನಾವಣೆಯ ಫಲಿತಾಂಶ
ಆರ್ ಅಶೋಕ್-ಬಿಜೆಪಿ-53680 ಮತಗಳು
ಎಲ್ ಎಸ್ ಚೇತನ್ ಗೌಡ-ಕಾಂಗ್ರೆಸ್-33557 ಮತಗಳು
ಡಾ.ಎಂ ಆರ್ ವಿ ಪ್ರಸಾದ್-ಜೆಡಿಎಸ್-26183-ಮತಗಳು
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications