ಕ್ಷೇತ್ರ ಪರಿಚಯ : ಕಾರಂಜಾ ನದಿ ತಟದ ಕ್ಷೇತ್ರ ಭಾಲ್ಕಿ
ಬೀದರ್ ಜಿಲ್ಲೆಯ ತಾಲೂಕು ಕೇಂದ್ರ ಭಾಲ್ಕಿ. ಕಾರಂಜಾ ನದಿಯ ತಟದಲ್ಲಿರುವ ಕ್ಷೇತ್ರವಿದು. ಭಾಲ್ಕೇಶ್ವರ ದೇವಾಲಯ, ಖಡಕೇಶ್ವರ, ಹಿರೇಮಠ ಸಂಸ್ಥಾನಗಳಿಂದಾಗಿ ಕ್ಷೇತ್ರ ಗಮನ ಸೆಳೆಯುತ್ತದೆ.
ಜಿಲ್ಲಾ ಕೇಂದ್ರ ಬೀದರ್ನಿಂದ 35 ಕಿ.ಮೀ. ದೂರದಲ್ಲಿದೆ ಭಾಲ್ಕಿ. ಇಲ್ಲಿನ ಆಡಳಿತ ಭಾಷೆ ಕನ್ನಡ. ಆದರೆ, ಹಿಂದಿ, ಮರಾಠಿ, ಉರ್ದು ಭಾಷೆಯನ್ನು ಮಾತನಾಡುವ ಜನರು ಇಲ್ಲಿ ಸಿಗುತ್ತಾರೆ.
ಲಿಂಗಾಯತ ಸಮುದಾಯಕ್ಕೆ ಸೇರಿದ ಖಂಡ್ರೆ ಅವರ ಕುಟುಂಬದವರೇ ಇಲ್ಲಿ ಚುನಾವಣೆಗಳನ್ನು ಗೆಲ್ಲುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ವಿಸ್ತರಣೆ ಮಾಡುವ ಸಮಯದಲ್ಲಿ ಕ್ಷೇತ್ರಕ್ಕೆ ಸಚಿವ ಸ್ಥಾನ ಒಲಿದು ಬಂದಿದೆ.

ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿರುವ ಈಶ್ವರ ಖಂಡ್ರೆ ಕ್ಷೇತ್ರದ ಶಾಸಕರು. ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಪ್ರಕಾಶ ಖಂಡ್ರೆ ಅವರು ಬಿಜೆಪಿ ಅಭ್ಯರ್ಥಿ ಎಂದು ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಈಶ್ವರ ಖಂಡ್ರೆ ಅವರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವುದರಲ್ಲಿ ಅನುಮಾನವೇ ಇಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ, ಕೆಜೆಪಿ ನಡುವಿನ ಮತ ವಿಭಜನೆ ಕಾರಣದಿಂದ ಸುಲಭವಾಗಿ ಗೆಲುವು ಕಂಡವರು ಈಶ್ವರ ಖಂಡ್ರೆ. ಈಗ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದ್ದರಿಂದ, ಸೋಲಿಸರು ವಿರೋಧ ಪಕ್ಷಗಳು ಹೆಚ್ಚು ಶ್ರಮ ಪಡಬೇಕು.
ಈಶ್ವರ ಖಂಡ್ರೆ ಅವರು 2013ರ ಚುನಾವಣೆಯಲ್ಲಿ 58,012 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕೆಜೆಪಿ-ಬಿಜೆಪಿ ಎರಡೂ ಪಕ್ಷಗಳು ವಿಲೀನವಾಗಿವೆ. ಆದ್ದರಿಂದ, ಬಿಜೆಪಿ-ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ನಿರೀಕ್ಷಿಸಲಾಗಿದೆ.
2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾಲ್ಕಿ ಕ್ಷೇತ್ರದಲ್ಲಿ ಹೆಚ್ಚು ಮತಗಳನ್ನು ಗಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ? ಎಂದು ಕಾದು ನೋಡಬೇಕಿದೆ.
2013ರ ಚುನಾವಣೆಯಲ್ಲಿ ಈಶ್ವರ ಖಂಡ್ರೆ 58,012 ಮತಗಳನ್ನು ಪಡೆದಿದ್ದರು. ಬಿಜೆಪಿಯ ಪ್ರಕಾಶ ಖಂಡ್ರೆ 29,694 ಮತ, ಜೆಡಿಎಸ್ನ ಜನಾರ್ದನ 2,255 ಮತಗಳನ್ನು ಪಡೆದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications