ಕ್ಷೇತ್ರ ಪರಿಚಯ : 'ನೈಸ್' ಮುಖ್ಯಸ್ಥರನ್ನು ಗೆಲ್ಲಿಸಿದ ಕ್ಷೇತ್ರವಿದು!
2008ರಲ್ಲಿ ರಚನೆಯಾದ ಕ್ಷೇತ್ರ ಬೀದರ್ ದಕ್ಷಿಣ. ಬೀದರ್ ಕ್ಷೇತ್ರದ ಕೆಲವು ಭಾಗ, ಹುಮ್ನಾಬಾದ್ ತಾಲೂಕಿನ ಎರಡು ವೃತ್ತಗಳನ್ನು ಸೇರಿಸಿದ ಬೀದರ್ ದಕ್ಷಿಣ ಕ್ಷೇತ್ರ ರಚನೆ ಮಾಡಲಾಗಿದೆ. ಬಹುತೇಕ ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿರುವ ಕ್ಷೇತ್ರವಿದು.
ಬೀದರ್ ಮೂಲಕ ಪುಣೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 9 ಕ್ಷೇತ್ರದ ಮೂಲಕ ಹಾದು ಹೋಗುತ್ತದೆ. ಪಶುವೈದ್ಯಕೀಯ ಮೀನುಗಾರಿಗೆ ವಿಶ್ವವಿದ್ಯಾಲಯ ಕ್ಷೇತ್ರದ ವ್ಯಾಪ್ತಿಯಲ್ಲಿದೆ.
ಕುಡಿಯುವ ನೀರಿನ ಪೂರೈಕೆ ಮತ್ತು ಜನರ ವಲಸೆ ಕ್ಷೇತ್ರದ ಬಹುಮುಖ್ಯ ಸಮಸ್ಯೆಯಾಗಿದೆ. 2013ರ ಚುನಾವಣೆಯಲ್ಲಿ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅವರು ಕರ್ನಾಟಕ ಮಕ್ಕಳ ಪಕ್ಷದಿಂದ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತರಾದ ಬಂಡೆಪ್ಪ ಕಾಶೇಂಪುರ್ ಅವರ ತವರು ಕ್ಷೇತ್ರವಿದು. ಕಳೆದ ಚುನಾವಣೆಯಲ್ಲಿ ಅಶೋಕ್ ಖೇಣಿ ಅವರ ವಿರುದ್ಧ ಕಾಶೇಂಪುರ ಅವರು ಸೋಲು ಕಂಡಿದ್ದರು.
ಕಳೆದ ಚುನಾವಣೆಯಲ್ಲಿ 47,763 ಮತಗಳನ್ನು ಪಡೆದ ಅಶೋಕ್ ಖೇಣಿ ಅವರು 15,758 ಮತಗಳ ಅಂತರದಿಂದ ಬಂಡೆಪ್ಪ ಕಾಶೇಂಪುರ ಅವರನ್ನು ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಪತ್ಯ ಸಾಧಿಸುತ್ತಿವೆ. ಆದರೆ, ಕಳೆದ ಚುನಾವಣೆಯಲ್ಲಿ ಮಾತ್ರ ಖೇಣಿ ಗೆದ್ದಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರ ಪರಮಾಪ್ತರಲ್ಲಿ ಒಬ್ಬರಾದ ಬಂಡೆಪ್ಪ ಕಾಶೇಂಪುರ ಅವರಿಗೆ ಈ ಬಾರಿಯ ಚುನಾವಣೆಯಲ್ಲಿಯೂ ಟಿಕೆಟ್ ಖಚಿತ. ಅದರಲ್ಲೂ ಈ ಬಾರಿ ಉತ್ತರ ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಕುಮಾರಸ್ವಾಮಿ ಆಪ್ತನನ್ನು ಗೆಲ್ಲಿಸಿಕೊಂಡು ಬರಲು ವಿಶೇಷ ಕಾಳಜಿ ತೋರಲಿದ್ದಾರೆ.
2013ರ ಚುನಾವಣೆಯಲ್ಲಿ ಅಶೋಕ್ ಖೇಣಿ 47,763 ಮತಗಳನ್ನು ಪಡೆದಿದ್ದರು. ಬಂಡೆಪ್ಪ ಕಾಶೇಂಪುರ 31,975 ಮತ, ಬಿಜೆಪಿಯ ಡಾ.ಬಸವರಾಜ್ ಪಾಟೀಲ್ 1,301 ಮತ, ಕಾಂಗ್ರೆಸ್ನ ಮೀನಾಕ್ಷಿ ಸಂಗ್ರಾಮ್ 5,105 ಮತಗಳನ್ನು ಪಡೆದಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications