ಕ್ಷೇತ್ರ ಪರಿಚಯ : 'ನೈಸ್' ಮುಖ್ಯಸ್ಥರನ್ನು ಗೆಲ್ಲಿಸಿದ ಕ್ಷೇತ್ರವಿದು!
2008ರಲ್ಲಿ ರಚನೆಯಾದ ಕ್ಷೇತ್ರ ಬೀದರ್ ದಕ್ಷಿಣ. ಬೀದರ್ ಕ್ಷೇತ್ರದ ಕೆಲವು ಭಾಗ, ಹುಮ್ನಾಬಾದ್ ತಾಲೂಕಿನ ಎರಡು ವೃತ್ತಗಳನ್ನು ಸೇರಿಸಿದ ಬೀದರ್ ದಕ್ಷಿಣ ಕ್ಷೇತ್ರ ರಚನೆ ಮಾಡಲಾಗಿದೆ. ಬಹುತೇಕ ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿರುವ ಕ್ಷೇತ್ರವಿದು.
ಬೀದರ್ ಮೂಲಕ ಪುಣೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 9 ಕ್ಷೇತ್ರದ ಮೂಲಕ ಹಾದು ಹೋಗುತ್ತದೆ. ಪಶುವೈದ್ಯಕೀಯ ಮೀನುಗಾರಿಗೆ ವಿಶ್ವವಿದ್ಯಾಲಯ ಕ್ಷೇತ್ರದ ವ್ಯಾಪ್ತಿಯಲ್ಲಿದೆ.
ಕುಡಿಯುವ ನೀರಿನ ಪೂರೈಕೆ ಮತ್ತು ಜನರ ವಲಸೆ ಕ್ಷೇತ್ರದ ಬಹುಮುಖ್ಯ ಸಮಸ್ಯೆಯಾಗಿದೆ. 2013ರ ಚುನಾವಣೆಯಲ್ಲಿ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅವರು ಕರ್ನಾಟಕ ಮಕ್ಕಳ ಪಕ್ಷದಿಂದ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತರಾದ ಬಂಡೆಪ್ಪ ಕಾಶೇಂಪುರ್ ಅವರ ತವರು ಕ್ಷೇತ್ರವಿದು. ಕಳೆದ ಚುನಾವಣೆಯಲ್ಲಿ ಅಶೋಕ್ ಖೇಣಿ ಅವರ ವಿರುದ್ಧ ಕಾಶೇಂಪುರ ಅವರು ಸೋಲು ಕಂಡಿದ್ದರು.
ಕಳೆದ ಚುನಾವಣೆಯಲ್ಲಿ 47,763 ಮತಗಳನ್ನು ಪಡೆದ ಅಶೋಕ್ ಖೇಣಿ ಅವರು 15,758 ಮತಗಳ ಅಂತರದಿಂದ ಬಂಡೆಪ್ಪ ಕಾಶೇಂಪುರ ಅವರನ್ನು ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಪತ್ಯ ಸಾಧಿಸುತ್ತಿವೆ. ಆದರೆ, ಕಳೆದ ಚುನಾವಣೆಯಲ್ಲಿ ಮಾತ್ರ ಖೇಣಿ ಗೆದ್ದಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರ ಪರಮಾಪ್ತರಲ್ಲಿ ಒಬ್ಬರಾದ ಬಂಡೆಪ್ಪ ಕಾಶೇಂಪುರ ಅವರಿಗೆ ಈ ಬಾರಿಯ ಚುನಾವಣೆಯಲ್ಲಿಯೂ ಟಿಕೆಟ್ ಖಚಿತ. ಅದರಲ್ಲೂ ಈ ಬಾರಿ ಉತ್ತರ ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಕುಮಾರಸ್ವಾಮಿ ಆಪ್ತನನ್ನು ಗೆಲ್ಲಿಸಿಕೊಂಡು ಬರಲು ವಿಶೇಷ ಕಾಳಜಿ ತೋರಲಿದ್ದಾರೆ.
2013ರ ಚುನಾವಣೆಯಲ್ಲಿ ಅಶೋಕ್ ಖೇಣಿ 47,763 ಮತಗಳನ್ನು ಪಡೆದಿದ್ದರು. ಬಂಡೆಪ್ಪ ಕಾಶೇಂಪುರ 31,975 ಮತ, ಬಿಜೆಪಿಯ ಡಾ.ಬಸವರಾಜ್ ಪಾಟೀಲ್ 1,301 ಮತ, ಕಾಂಗ್ರೆಸ್ನ ಮೀನಾಕ್ಷಿ ಸಂಗ್ರಾಮ್ 5,105 ಮತಗಳನ್ನು ಪಡೆದಿದ್ದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications