ಕ್ಷೇತ್ರ ಪರಿಚಯ : ಬೀಳಗಿ ಕ್ಷೇತ್ರದಲ್ಲಿ ಗೆಲುವು ಯಾರಿಗೆ?
ಬಾಗಲಕೋಟೆ ಜಿಲ್ಲೆಯ ತಾಲೂಕು ಕೇಂದ್ರ ಬೀಳಗಿ. ಹಿಂದೆ ಜಮಖಂಡಿ ತಾಲೂಕಿಗೆ ಬೀಳಗಿ ಸೇರಿತ್ತು. 1959ರಲ್ಲಿ ಬೀಳಗಿ ತಾಲೂಕು ರಚನೆಗೊಂಡಿತು. ಘಟಪ್ರಭಾ ಮತ್ತು ಕೃಷ್ಣಾ ನದಿ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿಯುತ್ತವೆ.
ಬೀಳಗಿ ತಾಲೂಕಿನ ಹೆಚ್ಚಿನ ಪ್ರದೇಶ ಕರಿ ಎರೆಮಣ್ಣಿನಿಂದ ಕೂಡಿವೆ. ತಾಲೂಕಿನ ಬಹಳಷ್ಟು ಜನರು ವ್ಯವಸಾಯವನ್ನು ಅವಲಂಬಿಸಿದ್ದಾರೆ. ಕಬ್ಬು ಬೆಳೆಗಾರರೇ ಹೆಚ್ಚು.ಇದಕ್ಕೆ ಪೂರಕ ಎಂಬಂತೆ ಹಲವಾರು ಸಕ್ಕರೆ ಕಾರ್ಖನೆಗಳು ಕ್ಷೇತ್ರದಲ್ಲಿವೆ.
ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷದ ಜೆ.ಟಿ.ಪಾಟೀಲ್. ಇವರ ಮೇಲೆ ಯಾವುದೇ ಗಂಭೀರವಾದ ಆರೋಪಗಳು ಇಲ್ಲ. ಶಾಸಕರು ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ಕೊಟ್ಟಿದ್ದಾರೆ ಎನ್ನುವ ಮಾತಿದೆ. ಪ್ರಬಲ ರೆಡ್ಡಿ ಸಮುದಾಯಕ್ಕೆ ಸೇರಿದವರು ಜೆ.ಟಿ.ಪಾಟೀಲ್.

ಈ ಕ್ಷೇತ್ರದಲ್ಲಿ ಗಾಣಿಗ ಸಮುದಾಯದ ಮತಗಳು ನಿರ್ಣಾಯಕ. ಆದರೆ, ಚುನಾವಣೆ ಸಂದರ್ಭದಲ್ಲಿ ಶಾಸಕರಿಗೆ ಸಂಬಂಧಿಸಿದ ಯಾವುದೇ ವೈಯಕ್ತಿಕ ವಿಚಾರಗಳು ಬಹಿರಂಗವಾಗು ಸಾಧ್ಯತೆ ಇದೆ ಎನ್ನುವ ಸುದ್ದಿ ಹಬ್ಬಿದೆ. ಸಿಡಿ ಬಿಡುಗಡೆ ಮಾಡಿ ಶಾಸಕರ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂಬುದು ಮಾತು.
ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ಹಿಂದೆ ಜೆಡಿಎಸ್ ನಿಂದ ಸ್ಪರ್ಧಿಸಿದ್ದ, ಸದ್ಯ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿರುವ ಬಸವಪ್ರಭು ಸರನಾಡಗೌಡರು ಪ್ರಬಲ ಆಕಾಂಕ್ಷಿ. ಆದರೆ, ಜೆ.ಟಿ.ಪಾಟೀಲರೇ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳೂ ಇವೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಬಿಜೆಪಿಯಿಂದ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಕಂಡಿದ್ದ ಮುರುಗೇಶ ನಿರಾಣಿ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ನಿರಾಣಿ ಅವರು ಕಳೆದ ಚುನಾವಣೆಯಲ್ಲಿ ಜಮಖಂಡಿ ಕ್ಷೇತ್ರದಿಂದ ಸ್ಪರ್ಧಿಸಬೇಕೆ? ಅಥವಾ ಬೀಳಗಿ ಕ್ಷೇತ್ರದಿಂದ ಸ್ಪರ್ಧಿಸಬೇಕೆ? ಎಂದು ಗೊಂದಲ ಸೃಷ್ಠಿ ಮಾಡಿಕೊಂಡಿದ್ದರು.
ಅಂತಿಮವಾಗಿ ಬೀಳಗಿಯಿಂದಲೇ ಸ್ಪರ್ಧಿಸಿದರು. ಇದು ಕ್ಷೇತ್ರದ ಜನರಲ್ಲಿ ಗೊಂದಲ ಉಂಟು ಮಾಡಿತು. ಜೊತೆಗೆ ಬಿಜೆಪಿ-ಕೆಜೆಪಿ ಗೊಂದಲದಿಂದ ಸೋಲು ಕಂಡಿದ್ದರು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪ್ತರು ಎಂಬದುದು ಅವರ ಪ್ಲಸ್ ಪಾಯಿಂಟ್.
ಮುರುಗೇಶ ನಿರಾಣಿ ಲಿಂಗಾಯತ ಮುಖಂಡರು. ಈ ಬಾರಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಇನ್ನು ಬಿಜೆಪಿಯಲ್ಲಿಯೂ ಆಕಾಂಕ್ಷಿಗಳಿದ್ದಾರೆ. ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಯಂಕಂಚಿ ಪ್ರಬಲ ಆಕಾಂಕ್ಷಿ.
ಬೀಳಗಿ ಕ್ಷೇತ್ರದಲ್ಲಿ ಗಾಣಿಗ ಸಮುದಾಯದ ಮತಗಳು ನಿರ್ಣಾಯಕ. ಗಾಣಿಗ ಸಮುದಾಯಕ್ಕೆ ಸೇರಿದ ಬಸವರಾಜ ಯಂಕಂಚಿ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿದರೆ ಗೆಲುವು ನಿಶ್ಚಿತ ಎಂದು ವಿಶ್ಲೇಷಿಸಲಾಗುತ್ತಿದೆ. ಜೆಡಿಎಸ್ ಅಭ್ಯರ್ಥಿಗಳ ಹುಡುಕಾಟದಲ್ಲಿದೆ.
2013ರ ಫಲಿತಾಂಶ
* ಜೆ.ಟಿ.ಪಾಟೀಲ : 66,655
* ಮುರುಗೇಶ ನಿರಾಣಿ (ಬಿಜೆಪಿ) : 55,417
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications