ಕ್ಷೇತ್ರ ಪರಿಚಯ : ಕೆಂಪು ಮೆಣಸಿನ ಕಾಯಿ ನಾಡಲ್ಲಿ ಯಾರಿಗೆ ಗೆಲುವು!
ಮೆಣಸಿನಕಾಯಿ ಮೂಲಕ ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಕ್ಷೇತ್ರ ಹಾವೇರಿ ಜಿಲ್ಲೆಯ ಬ್ಯಾಡಗಿ. ಇಲ್ಲಿನ ಮೆಣಸಿನಕಾಯಿ ಒಳ್ಳೆಯ ರುಚಿ, ಬಣ್ಣ ಹೊಂದಿರುತ್ತದೆ. ಆದ್ದರಿಂದ, ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ.
ಬ್ಯಾಡಗಿಯ ಪ್ರಖ್ಯಾತ ಮೆಣಸಿನಕಾಯಿ ಇಲ್ಲಿನ ಜನರಿಗೆ ಉದ್ಯೋಗವನ್ನು ನೀಡಿದೆ. ಹಾವೇರಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಮೆಣಸಿನಕಾಯಿಯನ್ನು ಬ್ಯಾಡಗಿ ತಾಲೂಕಿನಲ್ಲಿ ಬೆಳೆಯಲಾಗುತ್ತದೆ.
ಪ್ರಸಿದ್ಧ ಕಾಗಿನೆಲೆ ಕ್ಷೇತ್ರಕ್ಕೆ ಬ್ಯಾಡಗಿ ಸಮೀಪದಲ್ಲಿದೆ. ವೀರಭದ್ರೇಶ್ವರ ಜಾತ್ರೆ, ಶ್ರೀ ದಾನಮ್ಮ ದೇವಿ ಜಾತ್ರೆ ಬ್ಯಾಡಗಿ ಕ್ಷೇತ್ರದಲ್ಲಿ ಪ್ರಸಿದ್ಧಿ. ರಸ್ತೆ, ರೈಲು, ಬಸ್ಸಿನ ಸಂಪರ್ಕ ಕ್ಷೇತ್ರಕ್ಕೆ ಉತ್ತಮವಾಗಿದೆ.

ರಾಜಕೀಯವಾಗಿ ಕುರುಬ ಸಮುದಾಯದವರು ಕ್ಷೇತ್ರದಲ್ಲಿ ನಿರ್ಣಾಯಕರು. ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಜನರು ಕಾಂಗ್ರೆಸ್ನ ಬಸವರಾಜ್ ನೀಲಪ್ಪ ಶಿವಣ್ಣನವರ್ ಅವರಿಗೆ ಮತ ಹಾಕಿ ಗೆಲ್ಲಿಸಿದ್ದರು.
ಕೆಜೆಪಿ-ಬಿಜೆಪಿ ಮತ ಬ್ಯಾಂಕ್ ವಿಭಜನೆಯಿಂದಾಗಿ ಬಿಜೆಪಿಗೆ ಸೋಲಾಗಿತ್ತು. ಕೆಜೆಪಿಯ ಶಿವರಾಜ್ ಸಜ್ಜನರ್ 13 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಶಿವರಾಜ್ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಖಚಿತವಾಗಿದೆ.
ಕಳೆದ ಚುನಾವಣೆಯಲ್ಲಿ ಮೂರು ಪ್ರಮುಖ ಪಕ್ಷಗಳನ್ನು ಹೊರತುಪಡಿಸಿ ಪಕ್ಷೇತರರು, ವಿವಿಧ ಪಕ್ಷಗಳ ಅಭ್ಯರ್ಥಿಗಳು ಸೇರಿ 13 ಅಭ್ಯರ್ಥಿಗಳು ಕಣದಲ್ಲಿದ್ದರು. ಜೆಡಿಎಸ್ನ ಚಂದ್ರಪ್ಪ ಬರಮಪ್ಪ ಕಾರಗಿ 1,163ಮತಗಳನ್ನು ಪಡೆದು 7ನೇ ಸ್ಥಾನ ಪಡೆದಿದ್ದರು.
ಬಿಎಸ್ಆರ್ ಕಾಂಗ್ರೆಸ್, ಬಿಎಸ್ಪಿ, ಸರ್ವ ಜನಶಕ್ತಿ ಪಕ್ಷದ ಅಭ್ಯರ್ಥಿಗಳು, 6 ಪಕ್ಷೇತರ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಆದ್ದರಿಂದ, ಮತಗಳು ಹರಿದು ಹಂಚಿ ಹೋಗಿತ್ತು. ಹಲವು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು.
2013ರ ಚುನಾವಣೆಯಲ್ಲಿ ಕಾಂಗ್ರೆಸ್ನ ಬಸವರಾಜ್ ನೀಲಪ್ಪ ಶಿವಣ್ಣನವರ್ 57,707 ಮತ ಪಡೆದಿದ್ದರು. ಕೆಜೆಪಿಯ ಶಿವರಾಜ್ ಸಜ್ಜನರ್ 44,348 ಮತ, ಬಿಜೆಪಿಯ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ 37,877 ಮತಗಳನ್ನು ಪಡೆದಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications