ಕ್ಷೇತ್ರ ಪರಿಚಯ : ಕೆಂಪು ಮೆಣಸಿನ ಕಾಯಿ ನಾಡಲ್ಲಿ ಯಾರಿಗೆ ಗೆಲುವು!
ಮೆಣಸಿನಕಾಯಿ ಮೂಲಕ ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಕ್ಷೇತ್ರ ಹಾವೇರಿ ಜಿಲ್ಲೆಯ ಬ್ಯಾಡಗಿ. ಇಲ್ಲಿನ ಮೆಣಸಿನಕಾಯಿ ಒಳ್ಳೆಯ ರುಚಿ, ಬಣ್ಣ ಹೊಂದಿರುತ್ತದೆ. ಆದ್ದರಿಂದ, ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ.
ಬ್ಯಾಡಗಿಯ ಪ್ರಖ್ಯಾತ ಮೆಣಸಿನಕಾಯಿ ಇಲ್ಲಿನ ಜನರಿಗೆ ಉದ್ಯೋಗವನ್ನು ನೀಡಿದೆ. ಹಾವೇರಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಮೆಣಸಿನಕಾಯಿಯನ್ನು ಬ್ಯಾಡಗಿ ತಾಲೂಕಿನಲ್ಲಿ ಬೆಳೆಯಲಾಗುತ್ತದೆ.
ಪ್ರಸಿದ್ಧ ಕಾಗಿನೆಲೆ ಕ್ಷೇತ್ರಕ್ಕೆ ಬ್ಯಾಡಗಿ ಸಮೀಪದಲ್ಲಿದೆ. ವೀರಭದ್ರೇಶ್ವರ ಜಾತ್ರೆ, ಶ್ರೀ ದಾನಮ್ಮ ದೇವಿ ಜಾತ್ರೆ ಬ್ಯಾಡಗಿ ಕ್ಷೇತ್ರದಲ್ಲಿ ಪ್ರಸಿದ್ಧಿ. ರಸ್ತೆ, ರೈಲು, ಬಸ್ಸಿನ ಸಂಪರ್ಕ ಕ್ಷೇತ್ರಕ್ಕೆ ಉತ್ತಮವಾಗಿದೆ.

ರಾಜಕೀಯವಾಗಿ ಕುರುಬ ಸಮುದಾಯದವರು ಕ್ಷೇತ್ರದಲ್ಲಿ ನಿರ್ಣಾಯಕರು. ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಜನರು ಕಾಂಗ್ರೆಸ್ನ ಬಸವರಾಜ್ ನೀಲಪ್ಪ ಶಿವಣ್ಣನವರ್ ಅವರಿಗೆ ಮತ ಹಾಕಿ ಗೆಲ್ಲಿಸಿದ್ದರು.
ಕೆಜೆಪಿ-ಬಿಜೆಪಿ ಮತ ಬ್ಯಾಂಕ್ ವಿಭಜನೆಯಿಂದಾಗಿ ಬಿಜೆಪಿಗೆ ಸೋಲಾಗಿತ್ತು. ಕೆಜೆಪಿಯ ಶಿವರಾಜ್ ಸಜ್ಜನರ್ 13 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಶಿವರಾಜ್ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಖಚಿತವಾಗಿದೆ.
ಕಳೆದ ಚುನಾವಣೆಯಲ್ಲಿ ಮೂರು ಪ್ರಮುಖ ಪಕ್ಷಗಳನ್ನು ಹೊರತುಪಡಿಸಿ ಪಕ್ಷೇತರರು, ವಿವಿಧ ಪಕ್ಷಗಳ ಅಭ್ಯರ್ಥಿಗಳು ಸೇರಿ 13 ಅಭ್ಯರ್ಥಿಗಳು ಕಣದಲ್ಲಿದ್ದರು. ಜೆಡಿಎಸ್ನ ಚಂದ್ರಪ್ಪ ಬರಮಪ್ಪ ಕಾರಗಿ 1,163ಮತಗಳನ್ನು ಪಡೆದು 7ನೇ ಸ್ಥಾನ ಪಡೆದಿದ್ದರು.
ಬಿಎಸ್ಆರ್ ಕಾಂಗ್ರೆಸ್, ಬಿಎಸ್ಪಿ, ಸರ್ವ ಜನಶಕ್ತಿ ಪಕ್ಷದ ಅಭ್ಯರ್ಥಿಗಳು, 6 ಪಕ್ಷೇತರ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಆದ್ದರಿಂದ, ಮತಗಳು ಹರಿದು ಹಂಚಿ ಹೋಗಿತ್ತು. ಹಲವು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು.
2013ರ ಚುನಾವಣೆಯಲ್ಲಿ ಕಾಂಗ್ರೆಸ್ನ ಬಸವರಾಜ್ ನೀಲಪ್ಪ ಶಿವಣ್ಣನವರ್ 57,707 ಮತ ಪಡೆದಿದ್ದರು. ಕೆಜೆಪಿಯ ಶಿವರಾಜ್ ಸಜ್ಜನರ್ 44,348 ಮತ, ಬಿಜೆಪಿಯ ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ 37,877 ಮತಗಳನ್ನು ಪಡೆದಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications