ಚಾಮರಾಜ ಕ್ಷೇತ್ರ : ಮತ್ತೆ ಕಾಂಗ್ರೆಸ್ ಪ್ರಾಬಲ್ಯದ ನಿರೀಕ್ಷೆ!
ಚಾಮರಾಜ ಶಾಸಕರು ವಾಸು. ಇವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಪಡೆದಿದ್ದಾರೆ. ಅವರಿಗೆ ಸಮೀಪದ ಅಭ್ಯರ್ಥಿಯಾಗಿ ಸೋತಿದ್ದು ಜೆಡಿಎಸ್ ನ ಎಚ್.ಎಸ್. ಶಂಕರಲಿಂಗೇ ಗೌಡ. ಸಿದ್ದರಾಮಯ್ಯ ಅವರಿಗೆ ಈ ಶಾಸಕರ ಮೇಲೆ ಅಷ್ಟಾಗಿ ಸಮಾಧಾನವಿಲ್ಲ. ಒಕ್ಕಲಿಗರ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಒಕ್ಕಲಿಗ ಅಭ್ಯರ್ಥಿಯನ್ನೇ ಮತ್ತೆ ಕಣಕ್ಕಿಳಿಸುವುದು ಗ್ಯಾರಂಟಿ.
ಬಿಜೆಪಿಯಿಂದ ಯಾರು ಕಣಕ್ಕಿಳಿಯಲಿದ್ದಾರೆಂದು ಸ್ಪಷ್ಟವಾಗಿಲ್ಲವಾದರೂ ಈ ಬಗ್ಗೆ ಎಸ್.ಎಂ.ಕೃಷ್ಣ ಅವರ ಸಲಹೆ ಪಡೆಯುವ ಸಾಧ್ಯತೆಗಳಿವೆ. ಆದರೆ, ಕೃಷ್ಣ ಅವರು ಯಾವುದೇ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುತ್ತಿಲ್ಲ.
ಏಕೆಂದರೆ, ವಾಸು ಅವರಿಗೂ ಸಿದ್ದರಾಮಯ್ಯ ಅವರಿಗೂ ಅಷ್ಟಕ್ಕಷ್ಟೆ. ಇದಕ್ಕೆ ಕಾರಣ, ವಾಸು ಅವರು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಿಗೆ ತುಂಬಾ ಹತ್ತಿರದವರಾಗಿರುವುದು.
ಹಾಗಾಗಿ, ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಇವರಿಗೆ ಟಿಕೆಟ್ ಕೊಡಲು ಸಿದ್ದರಾಮಯ್ಯ ಹಿಂದೇಟು ಹಾಕಿದರೂ, ವೀರಪ್ಪ ಮೊಯ್ಲಿಯವರ ಶಿಫಾರಸು ಉಪಯೋಗಿಸಿಕೊಂಡು ಟಿಕೆಟ್ ಗಿಟ್ಟಿಸಿಕೊಳ್ಳುವ ತಾಕತ್ತು ವಾಸು ಅವರಿಗಿದೆ. ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಟ್ಟದ ಶಿಷ್ಯ ಧ್ರುವಕುಮಾರ್ ಸಹ ಕಾಂಗ್ರೆಸ್ ನಿಂದ ಟಿಕೇಟ್ ಆಕಾಂಕ್ಷಿ.

ಹಾಗಾದಲ್ಲಿ, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಬಲ ಪ್ರತಿಸ್ಪರ್ಧಿಯಾಗಿರುವ ಜೆಡಿಎಸ್ ಸಖತ್ತಾಗಿಯೇ ಪೈಪೋಟಿ ನೀಡಲಿದೆ. ಜೆಡಿಎಸ್ ವರಿಷ್ಠ್ ಎಚ್. ಡಿ. ದೇವೇಗೌಡ ಅವರ ಕುಟುಂಬದೊಂದಿಗೆ ಬೀಗತನ ಹೊಂದಿರುವ ಪ್ರೊ. ರಂಗಪ್ಪ ಅವರನ್ನು ಈ ಬಾರಿ ಕಣಕ್ಕಿಳಿಸಲು ಅದು ನಿರ್ಧರಿಸಿದೆ.
ಒಕ್ಕಲಿಗರ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಒಕ್ಕಲಿಗ ಅಭ್ಯರ್ಥಿಯನ್ನೇ ಮತ್ತೆ ಕಣಕ್ಕಿಳಿಸುವುದು ಗ್ಯಾರಂಟಿ. ಬಿಜೆಪಿ ನಗರಾಧ್ಯಕ್ಷ ಡಾ. ಮಂಜುನಾಥ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಬಿಜೆಪಿಯಿಂದ ಯಾರು ಕಣಕ್ಕಿಳಿದರೂ ಗೆಲುವು ದಕ್ಕುವುದು ಕಷ್ಟ.
2013ರ ಫಲಿತಾಂಶ ವಿಶ್ಲೇಷಣೆ:
* ಒಟ್ಟು 22 ಮಂದಿ ನಾಮಪತ್ರ ಸಲ್ಲಿಸಿದ್ದರು, 5 ಮಂದಿ ಹಿಂಪಡೆದರು, 17 ಮಂದಿ ಸ್ಪರ್ಧಿಸಿದ್ದರು. 14 ಮಂದಿ ಠೇವಣಿ ಕಳೆದುಕೊಂಡರು.
* ಶೇ 55.46ರಷ್ಟು ಮತದಾನವಾಗಿದ್ದು, 109938 ಮತಗಳ ಪೈಕಿ ಕಾಂಗ್ರೆಸ್ಸಿನ ವಾಸು ಅವರು 41930 ಮತಗಳನ್ನು ಗಳಿಸಿದ್ದು, ಜೆಡಿಎಸ್ ನ ಎಚ್. ಎಚ್ ಶಂಕರಲಿಂಗೇಗೌಡ ಅವರು 29015 ಮತಗಳನ್ನು ಗಳಿಸಿ ಸೋಲು ಅನುಭವಿಸಿದರು. 12915 ಮತಗಳ (ಶೇ 11.75 ರಷ್ಟು) ಅಂತರದಿಂದ ವಾಸು ಜಯ ಗಳಿಸಿದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ನಾಗೇಂದ್ರ 26063 ಮತಗಳನ್ನು ಪಡೆದು ಮೂರನೆ ಸ್ಥಾನ ಪಡೆದಿದ್ದರು.
ಒಕ್ಕಲಿಗರ ಮತಗಳು ನಿರ್ಣಾಯಕ
ಕ್ಷೇತ್ರದಲ್ಲಿ ಒಕ್ಕಲಿಗರು 65,000 ಮಂದಿ ಇದ್ದು ಪ್ರಾಬಲ್ಯ ಮೆರೆದಿದ್ದಾರೆ. ಬ್ರಾಹ್ಮಣರು 22,000, ಪರಿಶಿಷ್ಟ ಜಾತಿಯವರು 22-25 ಸಾವಿರ, ಮುಸ್ಲಿಮರು 20,000, ಜೈನರು, ಮಾರ್ವಾಡಿಗಳು 20,000, ಕುರುಬರು 12,000, ಲಿಂಗಾ ಯತರು 8,000, ನಾಯಕರು 5,000 ಹಾಗೂ ಇತರ ಸಮುದಾ ಯಗಳು 60,000 ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹಂಚಿಕೆಯಾಗಿ ಉಳಿದ ಸಮುದಾಯದ ಮತಗಳು ನಿರ್ಣಾಯಕವಾಗಲಿವೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications