ಚಾಮರಾಜ ಕ್ಷೇತ್ರ : ಮತ್ತೆ ಕಾಂಗ್ರೆಸ್ ಪ್ರಾಬಲ್ಯದ ನಿರೀಕ್ಷೆ!
ಚಾಮರಾಜ ಶಾಸಕರು ವಾಸು. ಇವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಪಡೆದಿದ್ದಾರೆ. ಅವರಿಗೆ ಸಮೀಪದ ಅಭ್ಯರ್ಥಿಯಾಗಿ ಸೋತಿದ್ದು ಜೆಡಿಎಸ್ ನ ಎಚ್.ಎಸ್. ಶಂಕರಲಿಂಗೇ ಗೌಡ. ಸಿದ್ದರಾಮಯ್ಯ ಅವರಿಗೆ ಈ ಶಾಸಕರ ಮೇಲೆ ಅಷ್ಟಾಗಿ ಸಮಾಧಾನವಿಲ್ಲ. ಒಕ್ಕಲಿಗರ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಒಕ್ಕಲಿಗ ಅಭ್ಯರ್ಥಿಯನ್ನೇ ಮತ್ತೆ ಕಣಕ್ಕಿಳಿಸುವುದು ಗ್ಯಾರಂಟಿ.
ಬಿಜೆಪಿಯಿಂದ ಯಾರು ಕಣಕ್ಕಿಳಿಯಲಿದ್ದಾರೆಂದು ಸ್ಪಷ್ಟವಾಗಿಲ್ಲವಾದರೂ ಈ ಬಗ್ಗೆ ಎಸ್.ಎಂ.ಕೃಷ್ಣ ಅವರ ಸಲಹೆ ಪಡೆಯುವ ಸಾಧ್ಯತೆಗಳಿವೆ. ಆದರೆ, ಕೃಷ್ಣ ಅವರು ಯಾವುದೇ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುತ್ತಿಲ್ಲ.
ಏಕೆಂದರೆ, ವಾಸು ಅವರಿಗೂ ಸಿದ್ದರಾಮಯ್ಯ ಅವರಿಗೂ ಅಷ್ಟಕ್ಕಷ್ಟೆ. ಇದಕ್ಕೆ ಕಾರಣ, ವಾಸು ಅವರು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಿಗೆ ತುಂಬಾ ಹತ್ತಿರದವರಾಗಿರುವುದು.
ಹಾಗಾಗಿ, ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಇವರಿಗೆ ಟಿಕೆಟ್ ಕೊಡಲು ಸಿದ್ದರಾಮಯ್ಯ ಹಿಂದೇಟು ಹಾಕಿದರೂ, ವೀರಪ್ಪ ಮೊಯ್ಲಿಯವರ ಶಿಫಾರಸು ಉಪಯೋಗಿಸಿಕೊಂಡು ಟಿಕೆಟ್ ಗಿಟ್ಟಿಸಿಕೊಳ್ಳುವ ತಾಕತ್ತು ವಾಸು ಅವರಿಗಿದೆ. ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಟ್ಟದ ಶಿಷ್ಯ ಧ್ರುವಕುಮಾರ್ ಸಹ ಕಾಂಗ್ರೆಸ್ ನಿಂದ ಟಿಕೇಟ್ ಆಕಾಂಕ್ಷಿ.

ಹಾಗಾದಲ್ಲಿ, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಬಲ ಪ್ರತಿಸ್ಪರ್ಧಿಯಾಗಿರುವ ಜೆಡಿಎಸ್ ಸಖತ್ತಾಗಿಯೇ ಪೈಪೋಟಿ ನೀಡಲಿದೆ. ಜೆಡಿಎಸ್ ವರಿಷ್ಠ್ ಎಚ್. ಡಿ. ದೇವೇಗೌಡ ಅವರ ಕುಟುಂಬದೊಂದಿಗೆ ಬೀಗತನ ಹೊಂದಿರುವ ಪ್ರೊ. ರಂಗಪ್ಪ ಅವರನ್ನು ಈ ಬಾರಿ ಕಣಕ್ಕಿಳಿಸಲು ಅದು ನಿರ್ಧರಿಸಿದೆ.
ಒಕ್ಕಲಿಗರ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಒಕ್ಕಲಿಗ ಅಭ್ಯರ್ಥಿಯನ್ನೇ ಮತ್ತೆ ಕಣಕ್ಕಿಳಿಸುವುದು ಗ್ಯಾರಂಟಿ. ಬಿಜೆಪಿ ನಗರಾಧ್ಯಕ್ಷ ಡಾ. ಮಂಜುನಾಥ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಬಿಜೆಪಿಯಿಂದ ಯಾರು ಕಣಕ್ಕಿಳಿದರೂ ಗೆಲುವು ದಕ್ಕುವುದು ಕಷ್ಟ.
2013ರ ಫಲಿತಾಂಶ ವಿಶ್ಲೇಷಣೆ:
* ಒಟ್ಟು 22 ಮಂದಿ ನಾಮಪತ್ರ ಸಲ್ಲಿಸಿದ್ದರು, 5 ಮಂದಿ ಹಿಂಪಡೆದರು, 17 ಮಂದಿ ಸ್ಪರ್ಧಿಸಿದ್ದರು. 14 ಮಂದಿ ಠೇವಣಿ ಕಳೆದುಕೊಂಡರು.
* ಶೇ 55.46ರಷ್ಟು ಮತದಾನವಾಗಿದ್ದು, 109938 ಮತಗಳ ಪೈಕಿ ಕಾಂಗ್ರೆಸ್ಸಿನ ವಾಸು ಅವರು 41930 ಮತಗಳನ್ನು ಗಳಿಸಿದ್ದು, ಜೆಡಿಎಸ್ ನ ಎಚ್. ಎಚ್ ಶಂಕರಲಿಂಗೇಗೌಡ ಅವರು 29015 ಮತಗಳನ್ನು ಗಳಿಸಿ ಸೋಲು ಅನುಭವಿಸಿದರು. 12915 ಮತಗಳ (ಶೇ 11.75 ರಷ್ಟು) ಅಂತರದಿಂದ ವಾಸು ಜಯ ಗಳಿಸಿದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ನಾಗೇಂದ್ರ 26063 ಮತಗಳನ್ನು ಪಡೆದು ಮೂರನೆ ಸ್ಥಾನ ಪಡೆದಿದ್ದರು.
ಒಕ್ಕಲಿಗರ ಮತಗಳು ನಿರ್ಣಾಯಕ
ಕ್ಷೇತ್ರದಲ್ಲಿ ಒಕ್ಕಲಿಗರು 65,000 ಮಂದಿ ಇದ್ದು ಪ್ರಾಬಲ್ಯ ಮೆರೆದಿದ್ದಾರೆ. ಬ್ರಾಹ್ಮಣರು 22,000, ಪರಿಶಿಷ್ಟ ಜಾತಿಯವರು 22-25 ಸಾವಿರ, ಮುಸ್ಲಿಮರು 20,000, ಜೈನರು, ಮಾರ್ವಾಡಿಗಳು 20,000, ಕುರುಬರು 12,000, ಲಿಂಗಾ ಯತರು 8,000, ನಾಯಕರು 5,000 ಹಾಗೂ ಇತರ ಸಮುದಾ ಯಗಳು 60,000 ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹಂಚಿಕೆಯಾಗಿ ಉಳಿದ ಸಮುದಾಯದ ಮತಗಳು ನಿರ್ಣಾಯಕವಾಗಲಿವೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications