ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮುಂಡೇಶ್ವರಿ ಕ್ಷೇತ್ರ : ಕುರುಬರ ಮತ ಗೆದ್ದವನೇ ಬಾಸ್!

By Mahesh
|
Google Oneindia Kannada News

Recommended Video

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ v/s ಜಿ ಟಿ ದೇವೇಗೌಡ ಯುದ್ಧ | Oneindia Kannada

ಬೆಂಗಳೂರು, ಏಪ್ರಿಲ್ 11: ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ. ಅಲ್ಲದೆ, ಒಕ್ಕಲಿಗರ ಪ್ರಾಬಲ್ಯವೂ ಇದೆ. ಇಲ್ಲಿ ಜೆಡಿಎಸ್ ನ ಜಿ.ಟಿ. ದೇವೇಗೌಡ ಅವರು ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಇದು ಸಿದ್ದರಾಮಯ್ಯ ಅವರ ಹಿಂದಿನ ಕ್ಷೇತ್ರ. ಈ ಬಾರಿಯೂ ಸ್ಪರ್ಧಿಸಲಿರುವ ಕ್ಷೇತ್ರ.

ಹಾಗಾಗಿ, ಈ ಬಾರಿ ಈ ಕ್ಷೇತ್ರವನ್ನು ಮತ್ತೆ ತಮ್ಮ ವಶಕ್ಕೆ ಮಾಡಿಕೊಳ್ಳಲು ಇಚ್ಛಿಸಿರುವ ಅವರು, ತಮ್ಮ ಪುತ್ರ ಯತೀಶ್ ಅವರನ್ನು ಇಲ್ಲಿ ಕಣಕ್ಕಿಳಿಸುವ ಬಗ್ಗೆ ಆಲೋಚಿಸಿದ್ದರು. ಸಿಎಂ ಆಪ್ತ ಕೆ. ಮರೀಗೌಡ ಕೂಡಾ ಟಿಕೆಟ್ ಆಕಾಂಕ್ಷಿ ಯಾಗಿದ್ದರು.

ಸಿದ್ದುವನ್ನು ಸೋಲಿಸಲು ಜೆಡಿಎಸ್ ಬಳಿಯಿದೆ ರೇವಣಾಸ್ತ್ರ!ಸಿದ್ದುವನ್ನು ಸೋಲಿಸಲು ಜೆಡಿಎಸ್ ಬಳಿಯಿದೆ ರೇವಣಾಸ್ತ್ರ!

ಆದರೆ, ಮರೀಗೌಡ ಅವರಿಗೆ ಇಲ್ಲಿ ಕೊಂಚ ಒಳ್ಳೆಯ ಹೆಸರಿಲ್ಲ. ಹಿಂದೆ, ಮೈಸೂರು ಜಿಲ್ಲಾಧಿಕಾರಿಗೆ ಅವಾಜ್ ಹಾಕಿ ಸಿದ್ದರಾಮಯ್ಯ ಅವರಿಗೆ ಇರುಸು ಮುರುಸು ತಂದಿದ್ದ ಮರೀಗೌಡ ಅವರ ಪ್ರಕರಣವನ್ನು ಇಲ್ಲಿನ ಜನರು ಮರೆತಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ದೇವೇಗೌಡರು!ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ದೇವೇಗೌಡರು!

ಹಾಗಾಗಿ, ಸಿದ್ದರಾಮಯ್ಯ ಅವರು ಅವರಿಗೆ ಟಿಕೆಟ್ ಕೊಡುವ ಬಗ್ಗೆ ಕೊಂಚ ಆಲೋಚಿಸಬೇಕಿದೆ ಎಂದು ಈ ಕ್ಷೇತ್ರದ ಕಾಂಗ್ರೆಸ್ ಅಭಿಮಾನಿಗಳು ಹೇಳುತ್ತಾರೆ. ಅಭಿಮಾನಿಗಳ ಮಾತಿಗೆ ಬೆಲೆ ಕೊಟ್ಟು, ಆಂತರಿಕ ಸಮೀಕ್ಷೆ ಮನ್ನಿಸಿ, ಇವರಿಬ್ಬರನ್ನು ಬಿಟ್ಟು ತಾವೇ ಕಣಕ್ಕಿಳಿಯಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ.. ಮುಂದೇನು? ಸಿದ್ದರಾಮಯ್ಯ ಅವರಿಗೆ ಗೆಲುವು ಸುಲಭವೆ? ಸೋಲಿನ ಭೀತಿಯಿಂದ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆಯೆ? ಮುಂದೆ ಓದಿ...

ಸಿಎಂ ಸಿದ್ದರಾಮಯ್ಯ ಅವರ ಸ್ಪರ್ಧೆ

ಸಿಎಂ ಸಿದ್ದರಾಮಯ್ಯ ಅವರ ಸ್ಪರ್ಧೆ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲ್ಲುವುದು ಕಷ್ಟ ಎಂಬ ವರದಿಗಳು ಬರುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳಿಗೆ ಬೇರೆ ಕ್ಷೇತ್ರವನ್ನು ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ. ಆದರೆ, ಸಿಎಂ ಮಾತ್ರ ತಮ್ಮ ನೆಚ್ಚಿನ ಚಾಮುಂಡೇಶ್ವರಿಯಲ್ಲೇ ಸ್ಪರ್ಧಿಸಲು ಒಲವು ಹೊಂದಿದ್ದು, ಇಲ್ಲಿ ಸ್ಪರ್ಧಿಸುವುದರಿಂದ ಪಕ್ಷಕ್ಕೆ ಲಾಭವಾಗಲಿದೆ ಎಂದು ಹೈಕಮಾಂಡ್ ಗೆ ಮನವರಿಕೆ ಮಾಡುತ್ತಿದ್ದಾರೆ.

ಜತೆಗೆ ಹೈಕಮಾಂಡ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ನಿರ್ಧಾರ ಸೇರಿದಂತೆ ಈ ಕುರಿತು ತೀರ್ಮಾನ ತೆಗೆದುಕೊಳ್ಳಲು ಸಿದ್ದರಾಮಯ್ಯನವರಿಗೆ ಸ್ವಾತಂತ್ರ್ಯ ನೀಡಿದೆ. ಬದಾಮಿಯಿಂದ ಏಪ್ರಿಲ್ 23ರ ವೇಳೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಇದೆ. ಆದರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ಜಿಟಿ ದೇವೇಗೌಡ ಹಾಗೂ ಸಿದ್ದರಾಮಯ್ಯ

ಜಿಟಿ ದೇವೇಗೌಡ ಹಾಗೂ ಸಿದ್ದರಾಮಯ್ಯ

ಜಿ.ಟಿ.ದೇವೇಗೌಡ ಮತ್ತು ಸಿದ್ದರಾಮಯ್ಯ ಅವರು ಒಂದು ಕಾಲದಲ್ಲಿ ಒಟ್ಟಿಗೆ ಇದ್ದವರು. 1983ರಿಂದ ಒಟ್ಟಿಗೆ ಇದ್ದ ಅವರು ಬೇರೆ ಯಾಗಿ 3 ದಶಕಗಳು ಕಳೆದಿವೆ. ಈಗ ಅವರು ಬೇರೆ-ಬೇರೆ ಪಕ್ಷದಲ್ಲಿದ್ದು, ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖಾಮುಖಿಯಾಗಿ ಚುನಾವಣಾ ಅಖಾಡಕ್ಕಿಳಿದ್ದಾರೆ.

ಸಿದ್ದರಾಮಯ್ಯ ಜೊತೆಗಿನ ಸ್ನೇಹ ಕಡಿದುಕೊಂಡ ಜಿ.ಟಿ.ದೇವೇಗೌಡರು ಬಿಜೆಪಿ ಸೇರಿದರು. ನಂತರ ಜೆಡಿಎಸ್ ಪಕ್ಷಕ್ಕೆ ಸೇರಿದರು. 2013ರ ಚುನಾವಣೆಯಲ್ಲಿ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ.

ಚಾಮುಂಡೇಶ್ವರಿಯನ್ನು ಕಡೆಗಣಿಸಿದ್ದಾರೆ

ಚಾಮುಂಡೇಶ್ವರಿಯನ್ನು ಕಡೆಗಣಿಸಿದ್ದಾರೆ

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರಕ್ಕೆ ಹೋದ ಬಳಿಕ ಚಾಮುಂಡೇಶ್ವರಿಯನ್ನು ಕಡೆಗಣಿಸಿದ್ದಾರೆ. 5 ಬಾರಿ ಗೆಲುವು ಕಂಡ ಕ್ಷೇತ್ರದತ್ತ ಮುಖ ಮಾಡಿಲ್ಲ. ಜನರಿಗೆ ಈ ಬಗ್ಗೆ ತಿಳಿದಿದೆ. ಈ ಬಾರಿ ಅವರು ಜನರ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. 10 ವರ್ಷಗಳ ಬಳಿಕ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂದಿದ್ದಾರೆ ಎಂಬುದನ್ನು ಜನರು ಬಲ್ಲರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ದಲಿತ ಸಂಘಟನೆಗಳ ವಿರೋಧ ಕಟ್ಟಿಕೊಂಡಿದ್ದಾರೆ. ಅವರು ಚುನಾವಣೆಯಲ್ಲಿ ವಿರುದ್ಧವಾಗಿ ಕೆಲಸ ಮಾಡಿದರೆ ಸಿದ್ದರಾಮಯ್ಯ ಅವರು ಸೋಲು ಕಾಣಬಹುದು.

'ನನ್ನ ಗೆಲುವಿಗೆ ನಾನು ಜನರ ಕೈಗೆ ಸುಲಭವಾಗಿ ಸಿಗುವುದೇ ಸಹಕಾರಿಯಾಗಲಿದೆ. ಅದನ್ನು ಜನರು ಸಹ ಗೌರವಿಸುತ್ತಾರೆ. ಆದರೆ, ಸಿದ್ದರಾಮಯ್ಯ ಅವರದ್ದು ಸರ್ವಾಧಿಕಾರಿ ವ್ಯಕ್ತಿತ್ವ. ಅವರು ಜನರ ಬಳಿ ಹೋಗುವುದೇ ಇಲ್ಲ' ಎಂದು ಜಿ.ಟಿ.ದೇವೇಗೌಡರು ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ

ಈ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ

ಈ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ. ಅಲ್ಲದೆ, ಒಕ್ಕಲಿಗರ ಪ್ರಾಬಲ್ಯವೂ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಜಿ.ಟಿ. ದೇವೇಗೌಡ, ಈ ಕ್ಷೇತ್ರದಲ್ಲಿನ ತಮ್ಮ ಬೆಂಬಲಿಗರಿಗೆ, ಪ್ರಮುಖರಿಗೆ ಉತ್ತಮ ಸ್ಥಾನ ಕೊಡಿಸಿಕೊಟ್ಟಿರುವುದರಿಂದ ಇಲ್ಲಿ ಗೆಲುವಿನ ಹಾದಿಯನ್ನು ಸುಲಭ ಮಾಡಿಕೊಂಡಿದ್ದಾರೆನ್ನಲಾಗಿದೆ.

ಕ್ಷೇತ್ರದಲ್ಲಿ 2.5 ಲಕ್ಷ ಮತದಾರರಿದ್ದು ಇದರಲ್ಲಿ 70,000 ಒಕ್ಕಲಿಗ ಮತಗಳಿವೆ. ದೇವೇಗೌಡರು ಒಕ್ಕಲಿಗರ ಕಣ್ಮಣಿಯಾಗಿ ಕ್ಷೇತ್ರದಲ್ಲಿ ಮೂಡಿ ಬಂದಿರುವುದು ಸಿಎಂ ಗೆಲುವಿಗೆ ತೊಡರುಗಾಲು ಆಗಬಹುದು ಎನ್ನಲಾಗಿದೆ.

2013ರ ಫಲಿತಾಂಶ

2013ರ ಫಲಿತಾಂಶ

ಈ ಕ್ಷೇತ್ರದಲ್ಲಿ ಕುರುಬರದ್ದೇ ಮೇಲುಗೈ. ಅಲ್ಲದೆ, ಒಕ್ಕಲಿಗರ ಪ್ರಾಬಲ್ಯವೂ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಜಿ.ಟಿ. ದೇವೇಗೌಡ, ಈ ಕ್ಷೇತ್ರದಲ್ಲಿನ ತಮ್ಮ ಬೆಂಬಲಿಗರಿಗೆ, ಪ್ರಮುಖರಿಗೆ ಉತ್ತಮ ಸ್ಥಾನ ಕೊಡಿಸಿಕೊಟ್ಟಿರುವುದರಿಂದ ಇಲ್ಲಿ ಗೆಲುವಿನ ಹಾದಿಯನ್ನು ಸುಲಭ ಮಾಡಿಕೊಂಡಿದ್ದಾರೆನ್ನಲಾಗಿದೆ.

ಕ್ಷೇತ್ರದಲ್ಲಿ 2.5 ಲಕ್ಷ ಮತದಾರರಿದ್ದು ಇದರಲ್ಲಿ 70,000 ಒಕ್ಕಲಿಗ ಮತಗಳಿವೆ. ದೇವೇಗೌಡರು ಒಕ್ಕಲಿಗರ ಕಣ್ಮಣಿಯಾಗಿ ಕ್ಷೇತ್ರದಲ್ಲಿ ಮೂಡಿ ಬಂದಿರುವುದು ಸಿಎಂ ಗೆಲುವಿಗೆ ತೊಡರುಗಾಲು ಆಗಬಹುದು ಎನ್ನಲಾಗಿದೆ.

ಒಟ್ಟು 18 ಮಂದಿ ನಾಮಪತ್ರ ಸಲ್ಲಿಸಿದ್ದರು. 6 ಮಂದಿ ಹಿಂಪಡೆದರು. 12 ಮಂದಿ ಸ್ಪರ್ಧಿಸಿದ್ದರು. 10 ಮಂದಿ ಠೇವಣಿ ಕಳೆದುಕೊಂಡರು.

ಶೇ 74.23ರಷ್ಟು ಮತದಾನವಾಗಿತ್ತು. 176962 ಮತಗಳ ಪೈಕಿ ಜೆಡಿಎಸ್ ನ ಜಿ.ಟಿ ದೇವೇಗೌಡ ಅವರು 75,864 ಮತಗಳನ್ನು ಪಡೆದರೆ, ಕಾಂಗ್ರೆಸ್ಸಿನ ಎಂ ಸತ್ಯನಾರಾಯಣ ಅವರು 68761 ಮತಗಳನ್ನು ಗಳಿಸಿದರು. . 7103 ಮತಗಳ (ಶೇ 4.01) ಅಂತರದಿಂದ ಜಿ.ಟಿ ದೇವೇಗೌಡ ಜಯ ಸಾಧಿಸಿದರು.

English summary
Karnataka Assembly Election 2018: Read all about Mysore district Chamundeshwari assembly constituency of Mysuru. Get election news from Chamundeshwari, Mysuru district. Know about candidates list, election results during Karnataka elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X