ಕ್ಷೇತ್ರ ಪರಿಚಯ: ಚನ್ನಪಟ್ಟಣದಲ್ಲಿ ಯೋಗೇಶ್ವರ್ ಗೆ ಲಗಾಮು ಹಾಕುವವರಾರು?
ರಾಮನಗರ ಜಿಲ್ಲೆಯ ಒಂದು ತಾಲೂಕು ಚನ್ನಪಟ್ಟಣ. ಚನ್ನಪಟ್ಟಣದ ಹೆಸರಿನ ಜತೆ ಬೊಂಬೆ ನಗರಿ ಎಂಬ ಹೆಸರೂ ಅಂಟಿಕೊಂಡಿದೆ. ಮರದ ಕರಕುಶಲ ವಸ್ತುಗಳಿಗೆ ಪ್ರಸಿದ್ಧವಾಗಿರುವ ಚನ್ನಪಟ್ಟಣದ ಮರದ ಬೊಂಬೆಗಳು ಮತ್ತು ಮಕ್ಕಳ ಆಟಿಕೆಗಳು ದೇಶದಾದ್ಯಂತ ಜನಪ್ರಿಯವಾಗಿವೆ.
ಐತಿಹಾಸಿಕವಾಗಿಯೂ ಚನ್ನಪಟ್ಟಣ ಪ್ರಾಮುಖ್ಯತೆಯನ್ನು ಪಡೆದಿದ್ದನ್ನು ಗಮನಿಸಬಹುದು. ಗಂಗರಿಂದ ಪ್ರಾರಂಭಗೊಂಡು ನಂತರದಲ್ಲಿ ಚೋಳರು, ಹೊಯ್ಸಳರು, ವಿಜಯನಗರದ ಅರಸರು, ಮೈಸೂರಿನ ಒಡೆಯರು ಇಲ್ಲಿ ಆಳ್ವಿಕೆ ನಡೆಸಿದ್ದರು. ಗಂಗರು ಚನ್ನಪಟ್ಟಣ ತಾಲ್ಲೂಕಿನ 'ಮಾಕುಂದ (ಮಂಕುಂದ)'ವನ್ನು ತಮ್ಮ ರಾಜಧಾನಿಯಾಗಿ ಮಾಡಿಕೊಂಡು ಆಳ್ವಿಕೆ ನಡೆಸಿದ್ದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.
1580ರಲ್ಲಿ ಇಮ್ಮಡಿ ಜಗದೇವರಾಯನ ಕಾಲದಲ್ಲಿ ಚನ್ನಪಟ್ಟಣದಲ್ಲಿ ಕಟ್ಟಿದ ಬೃಹತ್ತಾದ ಕೋಟೆ, ಹೈದರಾಲಿ ಗುರು ಅಕಲ್ ಷಾ ಖಾದ್ರಿಯ ಮಸೀದಿಯನ್ನು ಚನ್ನಪಟ್ಟಣದಲ್ಲಿ ಕಾಣಬಹುದು. ವೀರಸಂಸ್ಕೃತಿಯ ನೆಲೆವೀಡಾದ ಚನ್ನಪಟ್ಟಣದಲ್ಲಿ ಇದಕ್ಕೆ ಸಾಕ್ಷಿಯಾಗಿ ಸುಮಾರು ಸಾವಿರಕ್ಕೂ ಹೆಚ್ಚಿನ ವೀರಗಲ್ಲು, ಮಾಸ್ತಿಕಲ್ಲುಗಳು ಕಾಣಸಿಗುತ್ತವೆ.

ಚನ್ನಪಟ್ಟಣಕ್ಕೆ ರಾಜಕೀಯ ಇತಿಹಾಸಕ್ಕೆ ಬಂದರೆ ಇಲ್ಲಿ ಸಿನಿಮಾ ನಟ ಕಂ ರಾಜಕಾರಣಿ ಸಿ.ಪಿ. ಯೋಗೇಶ್ವರ್ ಪ್ರಾಬಲ್ಯ ಮೆರೆದಿದ್ದು ಕಣ್ಣಿಗೆ ರಾಚುತ್ತದೆ.
1985ರಲ್ಲಿ ಜನತಾ ಪಕ್ಷದ ಎಂ. ವರದೇ ಗೌಡ ಇಲ್ಲಿ ಜಯ ಸಾಧಿಸಿದ್ದರು. 1989ರಲ್ಲಿ ವರದೇಗೌಡ ಸೋತರು; ಕಾಂಗ್ರೆಸಿನ ಸಾದತ್ ಅಲಿ ಖಾನ್ ಗೆದ್ದರು. 1994ರಲ್ಲಿ ಮತ್ತೆ ವರದೇಗೌಡ ಗೆದ್ದರು. ಆದರೆ ಈ ಬಾರಿ ಅವರು ಜನತಾದಳದಿಂದ ಕಣಕ್ಕಿಳಿದಿದ್ದರು. ಆಮೇಲೆ ಆರಂಭವಾಗಿದ್ದು ಸಿ.ಪಿ. ಯೋಗೇಶ್ವರ್ ಯುಗ.
1999ರಲ್ಲಿ ಸ್ವತಂತ್ರವಾಗಿ ಕಣಕ್ಕಿಳಿದಿದ್ದ ಸಿನಿಮಾ ನಟ ಯೋಗೇಶ್ವರ್ 19 ಸಾವಿರ ಮತಗಳ ಅಂತರದಿಂದ ಕಾಂಗ್ರೆಸಿನ ಸಾದತ್ ಅಲಿ ಖಾನ್ ಗೆ ಸೋಲುಣಿಸಿದರು. 2004ರಲ್ಲಿ ಕಾಂಗ್ರೆಸ್ ಗೆ ಬಂದ ಯೋಗೇಶ್ವರ್ ಮತ್ತೆ ಗೆಲುವು ಸಾಧಿಸಿದರು. ಈ ಬಾರಿ ಗೆಲುವಿನ ಅಂತರ 17 ಸಾವಿರಕ್ಕೆ ಇಳಿಕೆಯಾಯ್ತು. 2008ರಲ್ಲಿ ಯೋಗೇಶ್ವರ್ ಹ್ಯಾಟ್ರಿಕ್ ಗೆಲುವು ಸಾಧಿಸಿದರು. ಅಷ್ಟೊತ್ತಿಗೆ ಅವರ ಗೆಲುವಿನ ಅಂತರ 5 ಸಾವಿರ ಮತಗಳಿಗೆ ಇಳಿಕೆಯಾಗಿತ್ತು.
2008ರಲ್ಲಿ ಗೆದ್ದ ಸಿ.ಪಿ. ಯೋಗೇಶ್ವರ್ 'ಆಪರೇಷನ್ ಕಮಲ'ಕ್ಕೆ ಬಲಿಯಾದರು. 2009ರಲ್ಲಿ ಬಿಜೆಪಿ ಸೇರಿ ಮತ್ತೆ ಉಪಚುನಾವಣೆಯಲ್ಲಿ ಅಖಾಡಕ್ಕೆ ಇಳಿದಾಗ ಚನ್ನಪಟ್ಟಣದ ಜನ ತಕ್ಕ ಶಾಸ್ತಿ ಮಾಡಿದ್ದರು. ಸಿ.ಪಿ. ಯೋಗೇಶ್ವರ್ ಈ ಚುನಾವಣೆಯಲ್ಲಿ 2 ಸಾವಿರ ಮತಗಳಿಂದ ಜೆಡಿಎಸ್ ನ ಸಿ. ಅಶ್ವಥ್ ವಿರುದ್ಧ ವಿರೋಚಿತ ಸೋಲು ಕಂಡರು. ಇದು ಅಶ್ವಥ್ ಕಂಡ ಮೊದಲ ಸೋಲು.
ಆದರೆ ಮತ್ತೆ ಆಪರೇಷನ್ ಕಮಲಕ್ಕೆ ಇದೇ ಅಶ್ವಥ್ ಬಲಿಯಾದರು. 2010ರಲ್ಲಿ ಪುನಃ ಉಪ ಚುನಾವಣೆ ನಡೆಯಿತು. ಈ ಬಾರಿ ಮತ್ತೆ ಬಿಜೆಪಿಯಿಂದ ಕಣಕ್ಕಿಳಿದು 18 ಸಾವಿರ ಮತಗಳ ಅಂತರದಿಂದ ಯೋಗೇಶ್ವರ್ ಗೆಲುವಿನ ನಗೆ ಬೀರಿದರು.
2013ರಲ್ಲಿ ಇಲ್ಲಿ ಜೆಡಿಎಸ್ ಮತ್ತು ಯೋಗೇಶ್ವರ್ ಮಧ್ಯೆ ಭಾರೀ ಕಾದಾಟವೇ ಏರ್ಪಟ್ಟಿತ್ತು. ಈ ಬಾರಿ ಎಸ್ಪಿಯ ಸೈಕಲ್ ತುಳಿದ ಸಿಪಿ ಯೋಗೇಶ್ವರ್ 7 ಸಾವಿರ ಮತಗಳಿಂದ ಅನಿತಾ ಕುಮಾರಸ್ವಾಮಿಯನ್ನು ಸೋಲಿಸಿ 5ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.
ಸದ್ಯ ಎಸ್ಪಿ ಬಿಟ್ಟು ಯೋಗೇಶ್ವರ್ ಬಿಜೆಪಿಗೆ ಬಂದಿದ್ದಾರೆ. ಈ ವೇಳೆಗೆ ಹಿಗ್ಗಲೂರು ಅಣೆಕಟ್ಟಿನಿಂದ ಇಲ್ಲಿನ ಕೆರೆಗಳಿಗೆ ನೀರು ತುಂಬಿಸಿದ್ದರಿಂದ ಯೋಗೀಶ್ವರ್ ಜನಪ್ರಿಯತೆಯೂ ಕ್ಷೇತ್ರದಲ್ಲಿ ಮತ್ತಷ್ಟು ಹೆಚ್ಚಾಗಿದೆ.
ತಮ್ಮ ಭಾರೀ ವೈಯಕ್ತಿಕ ವರ್ಚಸ್ಸಿನ ಬೆಂಬಲದೊಂದಿಗೆ ಇಲ್ಲಿ ಈ ಬಾರಿಯೂ ಯೋಗೇಶ್ವರ್ ಸುಲಭ ಗೆಲುವು ಸಾಧಿಸಬಹುದು ಎಂದುಕೊಳ್ಳಲಾಗಿದೆ. ಆದರೆ ಯೋಗೇಶ್ವರ್ ಅಶ್ವಮೇಧದ ಕುದುರೆಗೆ ಲಗಾಮು ಹಾಕಲು ಶಕ್ತಿ ಇರುವ ಜೆಡಿಎಸ್ ಏನು ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಇಲ್ಲಿ ಯೋಗೇಶ್ವರ್ ನ್ನು ಹೇಗಾದರೂ ಮಾಡಿ ಮಣ್ಣು ಮುಕ್ಕಿಸಬೇಕು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹವಣಿಸುತ್ತಿದ್ದಾರೆ. ಆದರೆ ಕಳೆದ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಡೆದ ಕೇವಲ 8 ಸಾವಿರ ಮತಗಳು ಅವರ ಯತ್ನ ಕಷ್ಟ ಸಾಧ್ಯ ಎಂದು ಹೇಳುತ್ತಿವೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications