ಕ್ಷೇತ್ರ ಪರಿಚಯ : ಚಿಕ್ಕೋಡಿ-ಸದಲಗಾದಲ್ಲಿ ಯಾರಿಗೆ ಗೆಲುವು?
ಚಿಕ್ಕೋಡಿ ಬೆಳಗಾವಿ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ. ವಿಶಾಲ ವ್ಯಾಪ್ತಿ ಹೊಂದಿರುವ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಒತ್ತಾಯ, ಹೋರಾಟ ನಡೆಯುತ್ತಿದೆ.
ಸಹಕಾರಿ, ಕೃಷಿ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಬೆಳಗಾವಿ ರಾಜ್ಯದಲ್ಲಿಯೇ ಅತಿ ದೊಡ್ಡ ಜಿಲ್ಲೆ. 2 ಲೋಕಸಭಾ ಕ್ಷೇತ್ರ. 18 ವಿಧಾನಸಭಾ ಕ್ಷೇತ್ರ, ಎರಡು ವಿಧಾನಪರಿಷತ್ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ರಾಜಕೀಯವಾಗಿ ಪ್ರಬಲವಾಗಿದೆ.
ಚಿಕ್ಕೋಡಿ ಸ್ವತಂತ್ರ ಶೈಕ್ಷಣಿಕ ಜಿಲ್ಲೆ. ಆರೋಗ್ಯ, ಅಬಕಾರಿ, ಕಂದಾಯ, ಲೋಕೋಪಯೋಗಿ, ಪಂಚಾಯತ್ ರಾಜ್, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಸೇರಿದಂತೆ ಹಲವು ವಿಭಾಗೀಯ ಕಚೇರಿಗಳನ್ನು ಹೊಂದಿದೆ. ಆದರೆ, ಇನ್ನೂ ಜಿಲ್ಲಾ ಕೇಂದ್ರವಾಗಿಲ್ಲ.
ಚಿಕ್ಕೋಡಿಯಲ್ಲಿ ಕಬ್ಬನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅನೇಕ ಸಕ್ಕರೆ ಕಾರ್ಖನೆಗಳು ಇಲ್ಲಿವೆ. ಕನ್ನಡ ಆಡಳಿತ ಭಾಷೆಯಾದರೂ, ಚಿಕ್ಕೋಡಿಯಲ್ಲಿ ಹಿಂದಿ, ಮರಾಠಿ ಮಾತನಾಡುವ ಅನೇಕರು ಸಿಗುತ್ತಾರೆ.

'ಚಿಕ್ಕೋಡಿ ಜಿಲ್ಲಾ ಕೇಂದ್ರವಾಗಬೇಕು' ಎಂಬುದು ಈ ಭಾಗದ ಜನರ ಬಹುದಿನದ ಬೇಡಿಕೆ. ಆದರೆ, ಇನ್ನೂ ಅದು ಈಡೇರಿಲ್ಲ.
2013ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿ 102,237 ಮತಗಳನ್ನು ಗೆಲುವು ಸಾಧಿಸಿದ್ದರು. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
2014ರ ಆಗಸ್ಟ್ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ 94,636 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯ ಮಹಾಂತೇಶ ಕವಟಗಿಮಠ 62816 ಮತಗಳನ್ನು ಪಡೆದಿದ್ದರು.
2018ರ ಚುನಾವಣಾ ಕಣದಲ್ಲಿ ಬಿಜೆಪಿಯಿಂದ ಅಣ್ಣಾ ಸಾಹೇಬ್ ಜೊಲ್ಲೆ, ಕಾಂಗ್ರೆಸ್ನಿಂದ ಗಣೇಶ್ ಹುಕ್ಕೇರಿ ಅಭ್ಯರ್ಥಿಗಳು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications