ಕ್ಷೇತ್ರ ಪರಿಚಯ: ಚಿಂಚೋಳಿಯಲ್ಲಿ ಬಿಜೆಪಿ-ಕಾಂಗ್ರೆಸ್ ಸಮಾನ ಹೋರಾಟ
ಚಿಂಚೋಳಿ ಕಲಬುರಗಿ ಜಿಲ್ಲೆಯ ಸಣ್ಣ ತಾಲೂಕು. ಚಿಂಚೋಳಿ ತಾಲೂಕು ಕೇಂದ್ರವೂ ಹೌದು. ಜಿಲ್ಲಾ ಕೇಂದ್ರ ಕಲಬುರಗಿಯಿಂದ ಬರೋಬ್ಬರಿ 85 ಕಿಲೋ ಮೀಟರ್ ದೂರವಿದೆ. ಮುಲ್ಲಾಮಾರಿ ಕೆಳದಂಡೆ ಜಲಾಶಯ, ಕುಂಚವರಂ ಅರಣ್ಯ ಪ್ರದೇಶ, ಚಂದ್ರಂಪಳ್ಳಿ ಜಲಾಶಯ, ಎತ್ತಿ ಪೋತಾ ಜಲಪಾತಗಳನ್ನು ಈ ತಾಲೂಕಿನಲ್ಲಿ ಕಾಣಬಹುದು.
ಚಿಂಚೋಳಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದೆ. 1968-71 ಹಾಗೂ 1989ರಿಂದ 90ರವರೆಗೆ ಕರ್ನಾಟಕ ಮುಖ್ಯಮಂತ್ರಿಗಳಾಗಿದ್ದ ವೀರೇಂದ್ರ ಪಾಟೀಲ್ ಇದೇ ಕ್ಷೇತ್ರವನ್ನು ಒಮ್ಮೆ ಪ್ರತಿನಿಧಿಸಿದ್ದರು. 1989ರಿಂದ 90ರವರೆಗೆ ಮುಖ್ಯಮಂತ್ರಿಯಾಗಿದ್ದಾಗ ಅವರು ಚಿಂಚೋಳಿಯಿಂದಲೇ ಗೆದ್ದು ಬಂದಿದ್ದರು.

ಅಷ್ಟೇ ಅಲ್ಲ ಹೈದ್ರಾಬಾದ್ ಕರ್ನಾಟಕ ಹೋರಾಟಗಾರ ವೈಜನಾಥ್ ಪಾಟೀಲ್ ಕೂಡಾ ಚಿಂಚೋಳಿಯ ಶಾಸಕರಾಗಿದ್ದರು. 1994ರಲ್ಲಿ ಇಲ್ಲಿ ಜನತಾದಳದಿಂದ ಕಣಕ್ಕಿಳಿದು ವೈಜನಾಥ್ ಪಾಟೀಲ್ ಗೆಲುವು ಸಾಧಿಸಿದ್ದರು.
1999ರಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿದು ವೈಜನಾಥ್ ಪಾಟೀಲ್ ಹೀನಾಯ ಸೋಲು ಕಂಡರೆ ಕಾಂಗ್ರೆಸ್ ನ ಕೈಲಾಶ್ ನಾಥ್ ಪಾಟೀಲ್ ಗೆಲುವು ಸಾಧಿಸಿದರು. 2004ರಲ್ಲಿ ಫಲಿತಾಂಶ ಅದಲು ಬದಲಾಯಿತು. ವೈಜನಾಥ್ ಪಾಟೀಲ್ ಜೆಡಿಎಸ್ ನಿಂದ ಮತ್ತೆ ಗೆಲುವು ಸಾಧಿಸಿದರು. ಸೋಲುವ ಸರದಿ ಕಾಂಗ್ರೆಸ್ ನ ಕೈಲಾಶ್ ನಾಥ್ ಪಾಟೀಲ್ ಅವರದಾಗಿತ್ತು.
2008ರಲ್ಲಿ ಮೊದಲ ಬಾರಿಗೆ ಬಿಜೆಪಿ ಇಲ್ಲಿ ಖಾತೆ ತೆರೆಯಿತು. ಈ ಬಾರಿ ಅಖಾಡದಲ್ಲಿ ಎಲ್ಲಾ ಹೊಸ ಹುಲಿಗಳೇ ಇದ್ದರು. ಬಿಜೆಪಿಯ ಸುನಿಲ್ ವಲ್ಯಾಪುರೆ ಕಾಂಗ್ರೆಸ್ ನ ಬಾಬುರಾವ್ ಚೌಹಾಣ್ ರನ್ನು ಸೋಲಿಸಿದರು.
2013ರಲ್ಲಿ ಮಾತ್ರ ಕ್ಷೇತ್ರ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಬಂತು. ಡಾ. ಉಮೇಶ್ ಜಿ. ಜಾಧವ್ ಕೆಜಿಪಿಯಿಂದ ಸ್ಪರ್ಧಿಸಿದ್ದ ಸುನಿಲ್ ವಲ್ಯಾಪುರೆಗೆ 26 ಸಾವಿರ ಮತಗಳ ಭಾರೀ ಅಂತರದಿಂದ ಸೋಲುಣಿಸಿದರು.
ಇತ್ತೀಚಿನ ದಿನಗಳಲ್ಲಿ ಚಿಂಚೋಳಿ ಯಾರ ಭದ್ರ ಕೋಟೆಯಾಗಿಯೂ ಇಳಿದಿಲ್ಲ. ಇಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲಾ ಪಕ್ಷಗಳೂ ವಿಜಯ ಪತಾಕೆಗಳನ್ನು ಹಾರಿಸುತ್ತಾ ಬಂದಿವೆ. ಆದರೆ ಸದ್ಯ ಕ್ಷೇತ್ರದಲ್ಲಿ ಜೆಡಿಎಸ್ ಸೊರಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಕಳೆದ ಬಾರಿಯ ಫಲಿತಾಂಶ ನೋಡಿದರೆ ಈ ಬಾರಿಯೂ ಇಲ್ಲಿ ಕಾಂಗ್ರೆಸ್ ಗೆದ್ದರೆ ಅಚ್ಚರಿಯೇನಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications