ಕ್ಷೇತ್ರ ಪರಿಚಯ : ದಾವಣಗೆರೆ ಉತ್ತರದಲ್ಲಿ ಯಾರಿಗೆ ಗೆಲುವು?
ದಾವಣಗೆರೆ ಕ್ಷೇತ್ರವನ್ನು ವಿಭಜನೆ ಮಾಡಿದ ಬಳಿಕ ದಾವಣಗೆರೆ ಉತ್ತರ, ದಕ್ಷಿಣ ಕ್ಷೇತ್ರಗಳು ಅಸ್ತಿತ್ವಕ್ಕೆ ಬಂದಿವೆ. 2008ರಲ್ಲಿ ಅಸ್ತಿತ್ವಕ್ಕೆ ಬಂದ ದಾವಣಗೆರೆ ಉತ್ತರ ಕ್ಷೇತ್ರ ಎರಡು ಚುನಾವಣೆಗಳನ್ನು ಮಾತ್ರ ಕಂಡಿದೆ.
ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಜನರು ಹೆಚ್ಚಾಗಿದ್ದಾರೆ.
ಅವರ ಮತಗಳು ನಿರ್ಣಾಯಕವಾಗಿವೆ, ಶಾಸಕರು ಯಾರಾಗಬೇಕು ಎಂದು ಅವರು ನಿರ್ಧಾರ ಮಾಡುತ್ತಾರೆ.
ಬಿಜೆಪಿಯ ಎಸ್.ಎ.ರವೀಂದ್ರನಾಥ್ ಮತ್ತು ಎಸ್.ಎಸ್.ಮಲ್ಲಿಕಾರ್ಜುನ ನಡುವಿನ ಸ್ಪರ್ಧೆಯಿಂದಾಗಿ ಕ್ಷೇತ್ರದ ಚುನಾವಣಾ ಕಣ ಯಾವಾಗಲೂ ಕುತೂಹಲಕ್ಕೆ ಕಾರಣವಾಗುತ್ತದೆ. ಈ ಕ್ಷೇತ್ರದಿಂದ ಗೆದ್ದವರು ತೋಟಗಾರಿಕಾ ಸಚಿವರಾಗುತ್ತಾರೆ.

ಹಿಂದೆ ಬಿಜೆಪಿಯ ರವೀಂದ್ರನಾಥ್ ತೋಟಗಾರಿಕಾ ಸಚಿವರಾಗಿದ್ದರು. ಈಗ ಕ್ಷೇತ್ರದ ಹಾಲಿ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ ಅವರು ತೋಟಗಾರಿಕಾ ಖಾತೆಯ ಜವಾಬ್ದಾರಿವಹಿಸಿಕೊಂಡಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು ಅವರು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರು ಉತ್ತರ ಕ್ಷೇತ್ರದ ಶಾಸಕರು. ಶಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ಕೈ ತಪ್ಪಿದ ಬಳಿಕ ಮಲ್ಲಿಕಾರ್ಜುನ ಅವರು ಸಚಿವರಾದರು.
ಎಸ್.ಎಸ್.ಮಲ್ಲಿಕಾರ್ಜುನ ಅವರು 2013ರ ಚುನಾವಣೆಯಲ್ಲಿ ಬಿಜೆಪಿಯ ಎಸ್.ಎ. ರವೀಂದ್ರನಾಥ್ ಅವರನ್ನು 57 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಮಲ್ಲಿಕಾರ್ಜುನ ಅವರು 2008ರ ಚುನಾವಣೆಯಲ್ಲಿ ರವೀಂದ್ರನಾಥ್ ವಿರುದ್ಧ ಸೋತಿದ್ದರು.
2013ರ ಚುನಾವಣೆಯಲ್ಲಿ ಎಸ್.ಎಸ್.ಮಲ್ಲಿಕಾರ್ಜುನ ಅವರು 88,101 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಎಸ್.ಎ.ರವೀಂದ್ರನಾಥ್ 30,821 ಮತ, ಜೆಡಿಎಸ್ನ ಟಿ.ಗಣೇಶ ದಾಸಕರಿಯಪ್ಪ 3,537 ಮತಗಳನ್ನು ಪಡೆದಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications