ಕ್ಷೇತ್ರ ಪರಿಚಯ : ಕುಟುಂಬ ರಾಜಕಾರಣ ನಡೆಯುವ ಕ್ಷೇತ್ರವಿದು!
ನಂಜುಡಪ್ಪ ವರದಿಯ ಪ್ರಕಾರ ಕರ್ನಾಟಕದ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ದೇವದುರ್ಗವೂ ಒಂದು. ದೇವದುರ್ಗದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಸಚಿವ ಸ್ಥಾನವನ್ನು ಪಡೆದರೂ ಕ್ಷೇತ್ರ ಇನ್ನೂ ಅಭಿವೃದ್ಧಿಯಾಗಬೇಕಿದೆ.
ರಾಜ್ಯದಲ್ಲಿ ಕುಟುಂಬ ರಾಜಕಾರಣ ನಡೆಯುವ ಪ್ರಮುಖ ಕ್ಷೇತ್ರ ದೇವದುರ್ಗ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ನ ವೆಂಕಟೇಶ ನಾಯಕ ಅವರು ಶಾಸಕರಾಗಿ ಆಯ್ಕೆಯಾದರು. ಆದರೆ, 2015ರಲ್ಲಿ ನಡೆದ ರೈಲು ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದರು.
ನಂತರ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುಕಂಡಿತು.ವೆಂಕಟೇಶ ನಾಯಕರ ಮೊಮ್ಮಗ ಶಿವನಗೌಡ ನಾಯಕ ಉಪ ಚುನಾವಣೆಯಲ್ಲಿ ಬಿಜೆಪಿಗೆ ಕ್ಷೇತ್ರವನ್ನು ಗೆದ್ದುಕೊಟ್ಟರು.

2008ರಲ್ಲಿ ಜೆಡಿಎಸ್ ಪಕ್ಷ ಸೇರಿದ್ದ ಶಿವನಗೌಡ ನಾಯಕ ಆಪರೇಷನ್ ಕಮಲದ ಭಾಗವಾಗಿ ಬಿಜೆಪಿ ಸೇರಿದರು. ಚುನಾವಣೆಯಲ್ಲಿ ಗೆದ್ದು ಸಚಿವರೂ ಆದರು. ಆದರೆ, 2013ರ ಚುನಾವಣಯಲ್ಲಿ ಅಜ್ಜನ ವಿರುದ್ಧ ಸೋಲು ಕಂಡರು. ವೆಂಕಟೇಶ ನಾಯಕರ ಮರಣದ ಬಳಿಕ ಉಪ ಚುನಾವಣೆಯಲ್ಲಿ ಪುನಃ ಗೆದ್ದರು.
ಶಿವನಗೌಡ ನಾಯಕ ಅವರ ಸಹೋದರಿಯ ಪತಿ ವೆಂಕಟೇಶ ಪೂಜಾರಿ ಜೆಡಿಎಸ್ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ನಿಗೂಢ.
ವೆಂಕಟೇಶ ನಾಯಕರ ಪುತ್ರ ಬಿ.ವಿ.ನಾಯಕ ರಾಯಚೂರು ಸಂಸದರು. ಅವರಿಗೆ ಟಕೆಟ್ ನೀಡಬೇಕು ಎಂಬ ಬೇಡಿಕೆಯೂ ಇದೆ. ಒಟ್ಟಿನಲ್ಲಿ ಕ್ಷೇತ್ರದ ಚುನಾವಣಾ ಕಣ ಕುತೂಹಲ ಮೂಡಿಸಿದೆ.
2013ರ ಚುನಾವಣೆಯಲ್ಲಿ ಎ.ವೆಂಕಟೇಶ ನಾಯಕ 62,070 ಮತಗಳನ್ನು ಪಡೆದಿದ್ದರು. ಬಿಜೆಪಿಯ ಶಿವನಗೌಡ ನಾಯಕ 58,370 ಮತ ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.
2016ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಕೆ.ಶಿವನಗೌಡ ನಾಯಕ 72,647 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಎ.ರಾಜಶೇಖರ ನಾಯಕ 55,776 ಮತ, ಜೆಡಿಎಸ್ನ ಕರೆಮ್ಮ ನಾಯಕ 9,156 ಮತಗಳನ್ನು ಪಡೆದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications