ಕ್ಷೇತ್ರ ಪರಿಚಯ : ಕುಟುಂಬ ರಾಜಕಾರಣ ನಡೆಯುವ ಕ್ಷೇತ್ರವಿದು!
ನಂಜುಡಪ್ಪ ವರದಿಯ ಪ್ರಕಾರ ಕರ್ನಾಟಕದ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ದೇವದುರ್ಗವೂ ಒಂದು. ದೇವದುರ್ಗದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಸಚಿವ ಸ್ಥಾನವನ್ನು ಪಡೆದರೂ ಕ್ಷೇತ್ರ ಇನ್ನೂ ಅಭಿವೃದ್ಧಿಯಾಗಬೇಕಿದೆ.
ರಾಜ್ಯದಲ್ಲಿ ಕುಟುಂಬ ರಾಜಕಾರಣ ನಡೆಯುವ ಪ್ರಮುಖ ಕ್ಷೇತ್ರ ದೇವದುರ್ಗ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ನ ವೆಂಕಟೇಶ ನಾಯಕ ಅವರು ಶಾಸಕರಾಗಿ ಆಯ್ಕೆಯಾದರು. ಆದರೆ, 2015ರಲ್ಲಿ ನಡೆದ ರೈಲು ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದರು.
ನಂತರ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುಕಂಡಿತು.ವೆಂಕಟೇಶ ನಾಯಕರ ಮೊಮ್ಮಗ ಶಿವನಗೌಡ ನಾಯಕ ಉಪ ಚುನಾವಣೆಯಲ್ಲಿ ಬಿಜೆಪಿಗೆ ಕ್ಷೇತ್ರವನ್ನು ಗೆದ್ದುಕೊಟ್ಟರು.

2008ರಲ್ಲಿ ಜೆಡಿಎಸ್ ಪಕ್ಷ ಸೇರಿದ್ದ ಶಿವನಗೌಡ ನಾಯಕ ಆಪರೇಷನ್ ಕಮಲದ ಭಾಗವಾಗಿ ಬಿಜೆಪಿ ಸೇರಿದರು. ಚುನಾವಣೆಯಲ್ಲಿ ಗೆದ್ದು ಸಚಿವರೂ ಆದರು. ಆದರೆ, 2013ರ ಚುನಾವಣಯಲ್ಲಿ ಅಜ್ಜನ ವಿರುದ್ಧ ಸೋಲು ಕಂಡರು. ವೆಂಕಟೇಶ ನಾಯಕರ ಮರಣದ ಬಳಿಕ ಉಪ ಚುನಾವಣೆಯಲ್ಲಿ ಪುನಃ ಗೆದ್ದರು.
ಶಿವನಗೌಡ ನಾಯಕ ಅವರ ಸಹೋದರಿಯ ಪತಿ ವೆಂಕಟೇಶ ಪೂಜಾರಿ ಜೆಡಿಎಸ್ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ನಿಗೂಢ.
ವೆಂಕಟೇಶ ನಾಯಕರ ಪುತ್ರ ಬಿ.ವಿ.ನಾಯಕ ರಾಯಚೂರು ಸಂಸದರು. ಅವರಿಗೆ ಟಕೆಟ್ ನೀಡಬೇಕು ಎಂಬ ಬೇಡಿಕೆಯೂ ಇದೆ. ಒಟ್ಟಿನಲ್ಲಿ ಕ್ಷೇತ್ರದ ಚುನಾವಣಾ ಕಣ ಕುತೂಹಲ ಮೂಡಿಸಿದೆ.
2013ರ ಚುನಾವಣೆಯಲ್ಲಿ ಎ.ವೆಂಕಟೇಶ ನಾಯಕ 62,070 ಮತಗಳನ್ನು ಪಡೆದಿದ್ದರು. ಬಿಜೆಪಿಯ ಶಿವನಗೌಡ ನಾಯಕ 58,370 ಮತ ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.
2016ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಕೆ.ಶಿವನಗೌಡ ನಾಯಕ 72,647 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಎ.ರಾಜಶೇಖರ ನಾಯಕ 55,776 ಮತ, ಜೆಡಿಎಸ್ನ ಕರೆಮ್ಮ ನಾಯಕ 9,156 ಮತಗಳನ್ನು ಪಡೆದಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications