ಧಾರವಾಡ ಕ್ಷೇತ್ರ: ಗೆಲುವಿನ ಪೇಡಾ ಸವಿಯುವವರ್ಯಾರು?
ಧಾರವಾಡ ಕರ್ನಾಟಕದ ವಾಣಿಜ್ಯ ನಗರಿ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ! ಹುಬ್ಬಳ್ಳಿ-ಧಾರವಾಡ ಅವಳಿ ನಗರ ಹಲವು ಕಾರಣಗಳಿಂದಾಗಿ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದಿದೆ. ಬೆಂಗಳೂರಿನ ನಂತರ ಅತ್ಯಂತ ದೊಡ್ಡ ನಗರ ಪಾಲಿಕೆಯನ್ನು ಹೊಂದಿರುವ ನಗರವೆಂದರೆ ಧಾರವಾಡ.
ಜ್ಞಾನಪೀಠ ಪ್ರಶಸ್ತಿ ವಿಜೇತ ವರಕವಿ ದ.ರಾ.ಬೇಂದ್ರೆ ಅವರ ನೆಲವಾದ ಧಾರವಾಡ ಕನ್ನಡ ನಾಡಿನ ಸಾಹಿತ್ಯ, ಸಂಗೀತ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರ.ಗಂಗೂಬಾಯಿ ಹಾನಗಲ್, ಬೆಟಗೇರಿ ಕೃಷ್ಣಶರ್ಮ, ಎಂ.ಎಂ.ಕಲಬುರ್ಗಿ, ಕೀರ್ತಿನಾಥ ಕುರ್ತಕೋಟಿ, ವಿ.ಕೃ.ಗೋಕಾಕ, ಗಿರೀಶ ಕಾರ್ನಾಡ ಸೇರಿದಂತೆ ಹಲವು ಮಹನೀಯರ ನೆಲೆ ಧಾರವಾಡ.
ಹಲವು ಉದ್ಯಮಗಳನ್ನು ಕಂಡ ಧಾರವಾಡ ನಗರದಲ್ಲಿ ಕನ್ನಡವೇ ಬಹುಮುಖ್ಯಭಾಷೆ. ಉತ್ತರ ಕರ್ನಾಟಕ ಶೈಲಿಯ ಇಲ್ಲಿನ ಕನ್ನಡ, ಕರ್ನಾಟಕದ ಜಾನಪದ ಸೊಗಡಿಗೆ ಕಳೆ ನೀಡಿದೆ.

ಇಲ್ಲಿನ ರಾಜಕೀಯದ ಬಗ್ಗೆ ಹೇಳುವುದಾದರೆ ಈ ಕ್ಷೇತ್ರವನ್ನು ಸದ್ಯಕ್ಕೆ ಕಾಂಗ್ರೆಸ್ ನ ವಿನಯ್ ಕುಲಕರ್ಣಿ ಪ್ರತಿನಿಧಿಸುತ್ತಿದ್ದಾರೆ. ಪ್ರಸ್ತುತ ಕರ್ನಾಟಕ ಸರ್ಕಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವರೂ ಆಗಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ನ ಅಮೃತ ದೇಸಾಯಿ ಅವರನ್ನು ಸೋಲಿಸಿದ್ದರು. ಆಗ ಕೆಜೆಪಿ ಅಸ್ತಿತ್ವದಲ್ಲಿದ್ದಿದ್ದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಲಾಭ ಪಡೆದಿತ್ತು. ಆದರೆ ಈ ಬಾರಿ ಆ ಪರಿಸ್ಥಿತಿ ಇಲ್ಲ.
ಈಗಾಗಲೇ ತಮ್ಮ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಡೆದಿದ್ದಲ್ಲದೆ, ಮಂತ್ರಿಯೂ ಆಗಿರುವ ಕಾರಣಕ್ಕೆ ಮತದಾರ ಪ್ರಭು ಅವರ ಮೇಲೆ ಕೃಪೆ ತೋರಬಹುದು. 2013 ರ ಚುನಾವಣೆಯಲ್ಲಿ ವಿನಯ ಕುಲಕರ್ಣಿ 53453 ಮತ ಗಳಿಸಿದ್ದರೆ, ಜೆಡಿಎಸ್ ನ ಅಮೃತ ದೇಸಾಯಿ 35133 ಮತ ಪಡೆದಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications