ಕ್ಷೇತ್ರ ಪರಿಚಯ : ಎತ್ತಿನಹೊಳೆ ನೀರಿಗಾಗಿ ಜನ ಕಾದು ಕುಳಿತಿದ್ದಾರೆ
ಶಾಶ್ವತ ನೀರಾವರಿ ಯೋಜನೆ ಇಲ್ಲದ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ. ಜಿಲ್ಲೆಯಲ್ಲಿ ಒಟ್ಟು 754 ಕೆರೆಗಳಿವೆ. ದೊಡ್ಡ ಬಳ್ಳಾಪುರ ಕ್ಷೇತ್ರದ ಜನರಿಗೆ ಕೆರೆಗಳು ಜೀವಸೆಲೆ.
ದೊಡ್ಡಬಳ್ಳಾಪುರದ ಕೆಲವು ಕೆರೆಗಳಲ್ಲಿ ಮಾತ್ರ ಮಳೆಯ ನೀರು ಸಂಗ್ರಹವಾಗುತ್ತಿದೆ. ಭತ್ತ, ತೆಂಗು ಬೆಳೆಯಿಂದ ಸುಂದರವಾಗಿ ಕಾಣುತ್ತಿದ್ದ ಕ್ಷೇತ್ರದಲ್ಲಿ ಇಂದು ನೀಲಗಿರಿ ಬೆಳೆದು ನಿಂತಿದೆ. ಕೆರೆ ಒತ್ತುವರಿಯಾಗಿ ಅಕ್ರಮ ಮರಳು ಸಾಗಣೆಗೆ ಸಾಕ್ಷಿಯಾಗುತ್ತಿದೆ.
ಅರ್ಕಾವತಿ, ಕಣ್ವ ಮತ್ತು ದಕ್ಷಿಣ ಪಿನಾಕಿನಿ ನದಿಗಳು ಜಿಲ್ಲೆಯಲ್ಲಿ ಹರಿಯುತ್ತಿದ್ದವು. ನದಿಗಳ ನೀರನ್ನು ಅವಲಂಬಿಸಿ ಭತ್ತ ಬೆಳೆಯಲಾಗುತ್ತಿತ್ತು. ಈಗ ನದಿಗಳು ಬತ್ತಿ ಹೋಗಿವೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸುಮಾರು 73 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ.

ಕರಾವಳಿಯಿಂದ ನೇತ್ರಾವತಿ ನೀರು 'ಎತ್ತಿನಹೊಳೆ ಯೋಜನೆ' ಮೂಲಕ ಹರಿದುಬರುತ್ತದೆ ಎಂದು ಜನರು ಕಾದು ಕುಳಿತಿದ್ದಾರೆ. ನಿರುದ್ಯೋಗದ ಸಮಸ್ಯೆ ಇಲ್ಲ, ಬೆಳಗ್ಗೆ ಬ್ಯಾಗು ಹಿಡಿದು ಬೆಂಗಳೂರು ಬಸ್ ಹತ್ತಬಹುದು.
ಜೆಡಿಎಸ್ ನಾಯಕ, ಮಾಜಿ ಸಚಿವ ಚೆನ್ನಿಗಪ್ಪ ಅವರು ತವರು ಕ್ಷೇತ್ರವಿದು. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿತ್ತು. ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿ, ಬಂಡಾಯ ಅಭ್ಯರ್ಥಿ ಇಬ್ಬರೂ ಚುನಾವಣೆಯಲ್ಲಿ ಸೋಲು ಕಂಡಿದ್ದರು.
ಚುನಾವಣೆಯಲ್ಲಿ ಸಿ.ಚೆನ್ನಿಗಪ್ಪ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ನ ಟಿ.ವೆಂಕಟರಾಮಯ್ಯ ವಿರುದ್ಧ ಸೋಲು ಅನುಭವಿಸಿದ್ದರು. ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮುನೇಗೌಡ ಅವರು ಸೋತಿದ್ದರು.
ಬಿಜೆಯಪಿಯ ಜೆ.ನರಸಿಂಹ ಸ್ವಾಮಿ ಅವರು ಕಳೆದ ಬಾರಿ ಸೋತಿದ್ದರು. ಈ ಬಾರಿ ಕ್ಷೇತ್ರದಲ್ಲಿ ಗೆಲ್ಲಲು ಬಿಜೆಪಿ ಮತ್ತು ಜೆಡಿಎಸ್ ಯಾವ ತಂತ್ರವನ್ನು ಮಾಡುತ್ತವೆ? ಎಂದು ಕಾದು ನೋಡಬೇಕು.
ಕ್ಷೇತ್ರದಲ್ಲಿ ಸದ್ಯ ಕಾಂಗ್ರೆಸ್ ಪರವಾದ ಅಲೆ ಇದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವೆಂಕಟರಾಮಯ್ಯ ಬೆಂಬಲಿಗರು ಗೆದ್ದು ಬಂದಿದ್ದಾರೆ. ಜೆಡಿಎಸ್ ಯಾರಿಗೆ ಟಿಕೆಟ್ ನೀಡುತ್ತದೆ? ಎಂಬುದು ಸದ್ಯದ ಕುತೂಹಲ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪ್ರಬಲ ಪೈಪೋಟಿ ನಡೆಯುವ ಸಾಧ್ಯತೆ ಇದೆ.
2013ರ ಚುನಾವಣೆಯಲ್ಲಿ ಟಿ.ವೆಂಕಟರಮಣಯ್ಯ 38,877 ಮತಗಳನ್ನು ಪಡೆದಿದ್ದರು. ಬಿಜೆಪಿಯ ಜೆ.ನರಸಿಂಹಸ್ವಾಮಿ 32,753, ಜೆಡಿಎಸ್ನ ಸಿ.ಚೆನ್ನಿಗಪ್ಪ 34,628 ಮತಗಳನ್ನು ಪಡೆದಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications