ಕ್ಷೇತ್ರ ಪರಿಚಯ: ಗಂಗಾವತಿಯಲ್ಲಿ ಅನ್ಸಾರಿ ಓಟಕ್ಕೆ ಬ್ರೇಕ್ ಹಾಕುವವರಾರು?
ಕೊಪ್ಪಳ ಜಿಲ್ಲೆಯ ಒಂದು ತಾಲೂಕು ಕೇಂದ್ರ ಗಂಗಾವತಿ. ಈ ತಾಲೂಕು ಭತ್ತದ ಬೆಳೆಗೆ ಪ್ರಸಿದ್ಧಿಯನ್ನು ಪಡೆದಿದ್ದು ಇದನ್ನು 'ಭತ್ತದ ಕಣಜ' ಎಂದೂ ಕರೆಯುತ್ತಾರೆ. ಇದು ಜಿಲ್ಲೆಯ ಅತ್ಯಂತ ದೊಡ್ಡ ವಾಣಿಜ್ಯ ನಗರವಾಗಿದ್ದು, ಅಕ್ಕಿ ಇಲ್ಲಿನ ಪ್ರಮುಖ ಬೆಳೆಯಾಗಿದೆ. ತಾಲೂಕು ಸಕ್ಕರೆ ಕಾರ್ಖನೆಗಳಿಗೂ ಹೆಸರುವಾಸಿಯಾಗಿದೆ.
ಗಂಗಾವತಿಯ ಬಳಿ ಐತಿಹಾಸಿಕ ಮಹತ್ವವುಳ್ಳ ಪ್ರಸಿದ್ಧ ಸ್ಥಳಗಳಿವೆ. ಕನಕಗಿರಿಯ ವೆಂಕಟಛಲಪತಿ ದೇವಾಲಯ, ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆಗುಂದಿ ಇದೇ ತಾಲೂಕಿನ ವ್ಯಾಪ್ತಿಗೆ ಬರುತ್ತದೆ. ರಾಘವೇಂದ್ರ ದೇವರ ನವ ಬೃಂದಾವನ, ಹೇಮಗುಡ್ಡ, ಕನ್ನಿಕಾ ಪರಮೇಶ್ವರಿ ದೇವಸ್ಥಾನ ಪಂಪಾಪತಿ, ಮುದ್ದಾನೇಶ್ವರಿ, ನೀಲಕಂಠೇಶ್ವರ ದೇವಸ್ಥಾನ ನಗರದ ವ್ಯಾಪ್ತಿಯೊಳಗೆ ಬರುತ್ತದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಸ್ವಾತಂತ್ರ್ಯ ಪೂರ್ವದಲ್ಲಿ ಈ ಪ್ರದೇಶವು ಹೈದರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿತ್ತು. ಈ ಕಾರಣಕ್ಕೆ ಭಾರತಕ್ಕೆ 1947, ಆಗಸ್ಟ್ 15ರಂದೇ ಸ್ವಾತಂತ್ರ್ಯ ಬಂದರೂ ಹೈದರಾಬಾದ್ ನಿಜಾಮರ ಹಿಡಿತದಿಂದ ಹೊರಬರಲು ಕೊಪ್ಪಳದ ಜನರು ಮತ್ತಷ್ಟು ಹೋರಾಟ ಮಾಡಬೇಕಾಯಿತು. ಕೊನೆಗೆ 17 ಸೆಪ್ಟೆಂಬರ್ 1948 ರಲ್ಲಿ ಹೈದರಾಬಾದ್-ಕರ್ನಾಟಕಕ್ಕೆ ನಿಜಾಮರಿಂದ ಸ್ವಾತಂತ್ರ್ಯ ಸಿಕ್ಕಿದಾಗ ಕೊಪ್ಪಳ ಸ್ವತಂತ್ರವಾಯಿತು.

ಇನ್ನು ಈ ಕ್ಷೇತ್ರದ ರಾಜಕೀಯ ಲೆಕ್ಕಚಾರವನ್ನು ನೋಡುವುದಾದರೆ ಸದ್ಯ ಜೆಡಿಎಸ್ ನಿಂದ ಗೆದ್ದಿರುವ ಇಕ್ಬಾಲ್ ಅನ್ಸಾರಿ ಅವರು ಇಲ್ಲಿನ ಶಾಸಕರಾಗಿದ್ದಾರೆ.
ಹಾಗೆ ನೋಡಿದರೆ ಈ ಹಿಂದೆ ಗಂಗಾವತಿ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. 1989, 1994, 1999ರಲ್ಲಿ ಶ್ರೀರಂಗದೇವರಾಯಲು ಎನ್ನುವವರು ಕಾಂಗ್ರೆಸ್ ನಿಂದ ಗೆದ್ದಿದ್ದರು. 2004ರಲ್ಲಿ ಶ್ರೀರಂಗದೇವರಾಯಲು ನಾಗಾಲೋಟಕ್ಕೆ ಮೊದಲ ಬಾರಿಗೆ ಜೆಡಿಎಸ್ ನಿಂದ ಇಕ್ಬಾಲ್ ಅನ್ಸಾರಿ ಇಲ್ಲಿ ಬ್ರೇಕ್ ಹಾಕಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
2008ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರ ಇಲ್ಲಿ ಅನ್ಸಾರಿ ಸೋಲಬೇಕಾಯಿತು. ಬಿಜೆಪಿಯ ಪರಣ್ಣ ಮನವಳ್ಳಿ ಈ ಬಾರಿ ಇಲ್ಲಿ ಗೆಲುವು ಸಾಧಿಸಿದ್ದರು. ಆದರೆ ಛಲಬಿಡದ ಅನ್ಸಾರಿ 2013ರಲ್ಲಿ ಮತ್ತೆ ಗೆಲುವು ಸಾಧಿಸಿದ್ದರು. 60,303 ಮತಗಳನ್ನು ಪಡಡೆದಿದ್ದ ಅವರು ಪರಣ್ಣ ಮನವಳ್ಳಿಯನ್ನು ಬರೋಬ್ಬರಿ 30 ಸಾವಿರ ಮತಗಳಿಂದ ಸೋಲಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿತ್ತು. ಕಾಂಗ್ರೆಸ್ ಪಡೆದ ಮತಗಳು 20,248.
ಈ ಬಾರಿ ಇಕ್ಬಾಲ್ ಅನ್ಸಾರಿ ಅವರು ಕಾಂಗ್ರೆಸ್ ಗೆ ಬಂದಿದ್ದಾರೆ. ಇಲ್ಲಿ ಈ ಬಾರಿ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ. ಅವರು ಗೆಲುವು ಸಾಧಿಸಲಿದ್ದಾರೆ ಎಂದೇ ಭಾವಿಸಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಅನ್ಸಾರಿಯನ್ನು ಸೋಲಿಸುತ್ತಾ ಎಂದು ಕಾದು ನೋಡಬೇಕಿದೆ.
ಬಿಜೆಪಿಯಿಂದ ಹಳೆ ಹುಲಿ ಪರಣ್ಣ ಮುನವಳ್ಳಿ ಮತ್ತೆ ಸ್ಪರ್ಧೆಯಲಿದ್ದಾರೆ. ಆದರೆ ಜೆಡಿಎಸ್ ಇನ್ನೂ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications