ಕ್ಷೇತ್ರ ಪರಿಚಯ: ಗಂಗಾವತಿಯಲ್ಲಿ ಅನ್ಸಾರಿ ಓಟಕ್ಕೆ ಬ್ರೇಕ್ ಹಾಕುವವರಾರು?
ಕೊಪ್ಪಳ ಜಿಲ್ಲೆಯ ಒಂದು ತಾಲೂಕು ಕೇಂದ್ರ ಗಂಗಾವತಿ. ಈ ತಾಲೂಕು ಭತ್ತದ ಬೆಳೆಗೆ ಪ್ರಸಿದ್ಧಿಯನ್ನು ಪಡೆದಿದ್ದು ಇದನ್ನು 'ಭತ್ತದ ಕಣಜ' ಎಂದೂ ಕರೆಯುತ್ತಾರೆ. ಇದು ಜಿಲ್ಲೆಯ ಅತ್ಯಂತ ದೊಡ್ಡ ವಾಣಿಜ್ಯ ನಗರವಾಗಿದ್ದು, ಅಕ್ಕಿ ಇಲ್ಲಿನ ಪ್ರಮುಖ ಬೆಳೆಯಾಗಿದೆ. ತಾಲೂಕು ಸಕ್ಕರೆ ಕಾರ್ಖನೆಗಳಿಗೂ ಹೆಸರುವಾಸಿಯಾಗಿದೆ.
ಗಂಗಾವತಿಯ ಬಳಿ ಐತಿಹಾಸಿಕ ಮಹತ್ವವುಳ್ಳ ಪ್ರಸಿದ್ಧ ಸ್ಥಳಗಳಿವೆ. ಕನಕಗಿರಿಯ ವೆಂಕಟಛಲಪತಿ ದೇವಾಲಯ, ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆಗುಂದಿ ಇದೇ ತಾಲೂಕಿನ ವ್ಯಾಪ್ತಿಗೆ ಬರುತ್ತದೆ. ರಾಘವೇಂದ್ರ ದೇವರ ನವ ಬೃಂದಾವನ, ಹೇಮಗುಡ್ಡ, ಕನ್ನಿಕಾ ಪರಮೇಶ್ವರಿ ದೇವಸ್ಥಾನ ಪಂಪಾಪತಿ, ಮುದ್ದಾನೇಶ್ವರಿ, ನೀಲಕಂಠೇಶ್ವರ ದೇವಸ್ಥಾನ ನಗರದ ವ್ಯಾಪ್ತಿಯೊಳಗೆ ಬರುತ್ತದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಸ್ವಾತಂತ್ರ್ಯ ಪೂರ್ವದಲ್ಲಿ ಈ ಪ್ರದೇಶವು ಹೈದರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿತ್ತು. ಈ ಕಾರಣಕ್ಕೆ ಭಾರತಕ್ಕೆ 1947, ಆಗಸ್ಟ್ 15ರಂದೇ ಸ್ವಾತಂತ್ರ್ಯ ಬಂದರೂ ಹೈದರಾಬಾದ್ ನಿಜಾಮರ ಹಿಡಿತದಿಂದ ಹೊರಬರಲು ಕೊಪ್ಪಳದ ಜನರು ಮತ್ತಷ್ಟು ಹೋರಾಟ ಮಾಡಬೇಕಾಯಿತು. ಕೊನೆಗೆ 17 ಸೆಪ್ಟೆಂಬರ್ 1948 ರಲ್ಲಿ ಹೈದರಾಬಾದ್-ಕರ್ನಾಟಕಕ್ಕೆ ನಿಜಾಮರಿಂದ ಸ್ವಾತಂತ್ರ್ಯ ಸಿಕ್ಕಿದಾಗ ಕೊಪ್ಪಳ ಸ್ವತಂತ್ರವಾಯಿತು.

ಇನ್ನು ಈ ಕ್ಷೇತ್ರದ ರಾಜಕೀಯ ಲೆಕ್ಕಚಾರವನ್ನು ನೋಡುವುದಾದರೆ ಸದ್ಯ ಜೆಡಿಎಸ್ ನಿಂದ ಗೆದ್ದಿರುವ ಇಕ್ಬಾಲ್ ಅನ್ಸಾರಿ ಅವರು ಇಲ್ಲಿನ ಶಾಸಕರಾಗಿದ್ದಾರೆ.
ಹಾಗೆ ನೋಡಿದರೆ ಈ ಹಿಂದೆ ಗಂಗಾವತಿ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. 1989, 1994, 1999ರಲ್ಲಿ ಶ್ರೀರಂಗದೇವರಾಯಲು ಎನ್ನುವವರು ಕಾಂಗ್ರೆಸ್ ನಿಂದ ಗೆದ್ದಿದ್ದರು. 2004ರಲ್ಲಿ ಶ್ರೀರಂಗದೇವರಾಯಲು ನಾಗಾಲೋಟಕ್ಕೆ ಮೊದಲ ಬಾರಿಗೆ ಜೆಡಿಎಸ್ ನಿಂದ ಇಕ್ಬಾಲ್ ಅನ್ಸಾರಿ ಇಲ್ಲಿ ಬ್ರೇಕ್ ಹಾಕಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
2008ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರ ಇಲ್ಲಿ ಅನ್ಸಾರಿ ಸೋಲಬೇಕಾಯಿತು. ಬಿಜೆಪಿಯ ಪರಣ್ಣ ಮನವಳ್ಳಿ ಈ ಬಾರಿ ಇಲ್ಲಿ ಗೆಲುವು ಸಾಧಿಸಿದ್ದರು. ಆದರೆ ಛಲಬಿಡದ ಅನ್ಸಾರಿ 2013ರಲ್ಲಿ ಮತ್ತೆ ಗೆಲುವು ಸಾಧಿಸಿದ್ದರು. 60,303 ಮತಗಳನ್ನು ಪಡಡೆದಿದ್ದ ಅವರು ಪರಣ್ಣ ಮನವಳ್ಳಿಯನ್ನು ಬರೋಬ್ಬರಿ 30 ಸಾವಿರ ಮತಗಳಿಂದ ಸೋಲಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿತ್ತು. ಕಾಂಗ್ರೆಸ್ ಪಡೆದ ಮತಗಳು 20,248.
ಈ ಬಾರಿ ಇಕ್ಬಾಲ್ ಅನ್ಸಾರಿ ಅವರು ಕಾಂಗ್ರೆಸ್ ಗೆ ಬಂದಿದ್ದಾರೆ. ಇಲ್ಲಿ ಈ ಬಾರಿ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ. ಅವರು ಗೆಲುವು ಸಾಧಿಸಲಿದ್ದಾರೆ ಎಂದೇ ಭಾವಿಸಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಅನ್ಸಾರಿಯನ್ನು ಸೋಲಿಸುತ್ತಾ ಎಂದು ಕಾದು ನೋಡಬೇಕಿದೆ.
ಬಿಜೆಪಿಯಿಂದ ಹಳೆ ಹುಲಿ ಪರಣ್ಣ ಮುನವಳ್ಳಿ ಮತ್ತೆ ಸ್ಪರ್ಧೆಯಲಿದ್ದಾರೆ. ಆದರೆ ಜೆಡಿಎಸ್ ಇನ್ನೂ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications