ಕ್ಷೇತ್ರ ಪರಿಚಯ : ಗೋಕಾಕ್ನಲ್ಲಿ ಯಾರಿಗೆ ಗೆಲುವಿನ ಕರದಂಟು?
ಬೆಳಗಾವಿ ಜಿಲ್ಲೆಯ ಒಂದು ತಾಲೂಕು ಕೇಂದ್ರ ಗೋಕಾಕ್. ಬೆಳಗಾವಿ ನಗರವನ್ನು ಹೊರತುಪಡಿಸಿದರೆ ಅತ್ಯಂತ ಹೆಚ್ಚು ಜನನಿಬಿಡ ಮತ್ತು ದೊಡ್ಡ ನಗರ ಗೋಕಾಕ್. ಗೋಕಾಕ್ ಜಲಪಾತ ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ.
ಗೋಕಾಕ್ ವಾಣಿಜ್ಯ ವ್ಯವಹಾರಗಳಿಗೆ ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇದ್ದು ಬೆಲ್ಲ, ಗೋವಿನಜೋಳ, ಹತ್ತಿ ವ್ಯಾಪಾರ ಹೆಚ್ಚಾಗಿ ನಡೆಯುತ್ತದೆ. ಕೈಗಾರಿಕೆಗೂ ಕ್ಷೇತ್ರ ಪ್ರಸಿದ್ಧಿ ಪಡೆದಿದೆ. ಸಿಮೆಂಟ್, ಜವಳಿ ಮತ್ತು ಸಕ್ಕರೆ ಕಾರ್ಖನೆಗಳಿವೆ.
ರಾಜಕೀಯವಾಗಿ ಗೋಕಾಕ್ ಜಾರಕಿಹೊಳಿ ಕುಟುಂಬದ ಭದ್ರಕೋಟೆ. ಜಾರಕಿಹೊಳಿ ಕುಟುಂಬದಲ್ಲಿ ಮೂವರು ಶಾಸಕರು ಇದ್ದಾರೆ. ಇಬ್ಬರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಮತ್ತೊಬ್ಬರು ಬಿಜೆಪಿ ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ.

ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ರಾಜಕಾರಣದಲ್ಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಈ ಬಾರಿಯ ಚುನಾವಣೆಗೆ ಸ್ಪರ್ಧಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಕಳೆದ ನಾಲ್ಕು ಚುನಾವಣೆಗಳಿಂದಲೇ ಜಾರಕಿಹೊಳಿ ಕುಟುಂಬದವೇ ಇಲ್ಲಿ ಅಧಿಕಾರಕ್ಕೆ ಬರುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರು ಕಡಿಮೆ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಅಶೋಕ ಪೂಜಾರಿ ಅವರನ್ನು ಸೆಳೆಯಲು ಬಿಜೆಪಿ ಪ್ರಯತ್ನ ಪಡುತ್ತಿದೆ. ಕ್ಷೇತ್ರದಲ್ಲಿ ಬಹುಪಾಲು ಲಿಂಗಾಯತ ಮತಗಳು ಇರುವದರಿಂದ ಈ ಬಾರಿಯ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.
2013ರ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ 79,175 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಜೆಡಿಎಸ್ನ ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ ಅವರು 51,170 ಮತಗಳನ್ನು ಪಡೆದಿದ್ದರು. ಬಿಜೆಪಿಯ ವಾಸುದೇವ್ ಮಹದೇವಪ್ಪ ಅವರು 4,293 ಮತಗಳನ್ನು ಪಡೆದು 4ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು.
ಈ ಬಾರಿಯ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಟಿಕೆಟ್ ಖಚಿತವಾಗಿದೆ. ಅಶೋಕ ಪೂಜಾರಿ ಅವರು ಬಿಜೆಪಿ ಸೇರಲಿದ್ದಾರೆಯೇ? ಕಾದು ನೋಡಬೇಕು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications