ಹಗರಿ ಬೊಮ್ಮನಹಳ್ಳಿ : ಲಿಂಗಾಯತ, ಲಂಬಾಣಿ ಮತಗಳು ನಿರ್ಣಾಯಕ
ಈ ಕ್ಷೇತ್ರದ ಹಾಲಿ ಶಾಸಕ ಭೀಮನಾಯ್ಕ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಅಂದಿನ ಶಾಸಕರಾಗಿದ್ದ ನೇಮಿರಾಜ್ ಅವರನ್ನು ಜೆಡಿಎಸ್ ನಿಂದ ಚುನಾವಣೆಗೆ ನಿಂತಿದ್ದ ಭೀಮನಾಯ್ಕ ಕೇವಲ 150 ಮತಗಳಿಂದ ಸೋಲಿಸಿ ಗೆಲುವು ಸಾಧಿಸಿದ್ದರು. ಆದರೆ, ಆನಂತರ ಅವರು, ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.
ಆದರೆ, ಈ ಬಾರಿ ಅವರಿಗೆ ಗೆಲುವು ಮತ್ತೆ ಒಲಿಯುವುದು ಕಷ್ಟ ಎನ್ನಲಾಗುತ್ತಿದೆ. ಲಿಂಗಾಯತ ಮತ್ತು ಲಂಬಾಣಿ ಮತಗಳು ಇಲ್ಲಿ ನಿರ್ಣಾಯಕವಾಗಿರುವುದರಿಂದ ಆ ಜನಾಂಗಗಳ ಒಲವು ಗಳಿಸಿರುವ ನೇಮಿರಾಜ್ ಅವರಿಗೆ ಈ ಬಾರಿ ಬಿಜೆಪಿ ಮತ್ತೆ ಟಿಕೆಟ್ ನೀಡಿದರೆ ಖಂಡಿತವಾಗಿಯೂ ಅವರು ಗೆಲ್ಲುವ ಸಾಧ್ಯತೆಗಳಿವೆ.

ಬಿಜೆಪಿ ಪಾಳಯದೊಳಗೆ ನೇಮಿರಾಜ್ ಅವರ ಬಗ್ಗೆ ಉತ್ತಮ ಅಭಿಪ್ರಾಯವಿದೆ. ಯಡಿಯೂರಪ್ಪನವರಿಗೆ ಆಪ್ತರಾಗಿದ್ದರೂ, ಯಡಿಯೂರಪ್ಪ ಬಿಜೆಪಿ ತೊರೆದು ಕೆಜೆಪಿ ಕಟ್ಟಿದಾಗ, ನೇಮಿರಾಜ್ ಕೆಜೆಪಿ ಸೇರದೇ ಬಿಜೆಪಿಯಲ್ಲೇ ಉಳಿದಿದ್ದರು.
ಅಂದಿನ ಆ ರಾಜಕೀಯ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಮುನ್ನಡೆಸಿಕೊಂಡು ಬಂದ ನಾಯಕರು ಇವರು. ಹಾಗಾಗಿ, ಬಿಜೆಪಿಗೆ ಇವರ ಬಗ್ಗೆ ಒಳ್ಳೆ ಅಭಿಪ್ರಾಯವಿದೆ. ಇದೇ ಕಾರಣಕ್ಕಾಗಿಯೇ, ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆಗಳಿವೆ. ಹಾಗೆ ಟಿಕೆಟ್ ಸಿಕ್ಕರೆ ಅವರೇ ಗೆಲ್ಲುತ್ತಾರೆ ಎಂದು ಹೇಳಲಾಗುತ್ತಿದೆ.
ಆದರೆ, ಕಾಂಗ್ರೆಸ್ ಪರಿಸ್ಥಿತಿ ಹಾಗಿಲ್ಲ. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಭೀಮನಾಯ್ಕ ಅವರಿಗೆ ಟಿಕೆಟ್ ನೀಡಲು ಇಲ್ಲಿನ ಕಾಂಗ್ರೆಸ್ ನಲ್ಲೇ ಭಿನ್ನಾಭಿಪ್ರಾಯಗಳು ಇವೆ.
ಕಳೆದ ಚುನಾವಣೆಯಲ್ಲಿ, ಬಿಜೆಪಿಯಿಂದ ನೇಮಿರಾಜ್, ಜೆಡಿಎಸ್ ನಿಂದ ಭೀಮನಾಯ್ಕ ಅವರು ಸ್ಪರ್ಧಿಸಿದ್ದಾಗ, ಬಳ್ಳಾರಿ ಮೂಲದ ಎನ್. ಮಾರಣ್ಣ ಎಂಬುವರನ್ನು ಕರೆದುಕೊಂಡು ಬಂದು ಇಲ್ಲಿ ಚುನಾವಣೆಗೆ ನಿಲ್ಲಿಸಿದ್ದು ಕಾಂಗ್ರೆಸ್ ಗೆ ಮುಳುವಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದರು.
ಈಗ, ಜೆಡಿಎಸ್ ನಿಂದ ಬಂದ ಭೀಮನಾಯ್ಕ ಅವರಿಗೆ ಟಿಕೆಟ್ ನೀಡಿದರೆ ಈ ಕ್ಷೇತ್ರದಲ್ಲಿ ಮೊದಲಿನಿಂದಲೂ ಕಾಂಗ್ರೆಸ್ ಗೆ ಸೇವೆ ಮಾಡಿದವರನ್ನು ಕಡೆಗಣಿಸಿದ ಹಾಗಾಗುತ್ತದೆ ಎಂಬ ಕೂಗೂ ಕೇಳಿಬಂದಿರುವುದರಿಂದ ಕಾಂಗ್ರೆಸ್ ಸದ್ಯಕ್ಕಂತೂ ಗೊಂದಲದಲ್ಲಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications