ಹಳಿಯಾಳ ಕ್ಷೇತ್ರ: ಕಾಳೀ ಕೃಪೆ ಯಾರ ಮೇಲೆ..?
ಸ್ವಚ್ಛಂದ ಕಾಡು ಹಲವು ಕಾರ್ಖಾನೆಗಳನ್ನು ಹೊಂದಿರುವ ಹಳಿಯಾಳ, ಉತ್ತರ ಕನ್ನಡದ ತಾಲೂಕಾ ಕೇಂದ್ರ.
ದಟ್ಟ ಕಾಡನ್ನು ಹೊಂದಿರುವ ಈ ಪ್ರದೇಶದಲ್ಲಿ ನೈಸರ್ಗಿಕ ಸಂಪನ್ಮೂಲ ಹೇರಳವಾಗಿದೆ. ಇಲ್ಲಿನ ಶಿವಾಜಿ ಕೋಟೆ, ದಾಂಡೇಲಿ, ಕಾಳಿ ನದಿ, ಸೂಪಾ ಆಣೆಕಟ್ಟು ಹೀಗೆ ಸಾಕಷ್ಟು ರಮಣೀಯ ತಾಣಗಳಿಂದಾಗಿ ಪ್ರವಾಸಿಗರಿಗೆ ಈ ತಾಣ ಪ್ರಿಯವಾಗಿದೆ.
ಈ ಕ್ಷೇತ್ರದಿಂದ ಕಾಂಗ್ರೆಸ್ ನ ಖಾಯಂ ಅಭ್ಯರ್ಥಿ ಆರ್.ವಿ.ದೇಶಪಾಂಡೆ. ಕ್ಷೇತ್ರದ ಪ್ರಸ್ತುತ ಶಾಸಕರೂ ಅವರೇ. ದೇಶಪಾಂಡೆ ಅವರು ಕರ್ನಾಟಕ ಸರ್ಕಾರದಲ್ಲಿ ಮಂತ್ರಿ ಪದವಿ ಪಡೆದಿದ್ದರೂ ಪ್ರತಿವಾರಕ್ಕೂ ಸ್ವಕ್ಷೇತ್ರಕ್ಕೆ ತೆರಳಿ ಮುಂಬರುವ ಚುನಾವಣೆಯಲ್ಲೂ ಗೆಲ್ಲುವ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಅಲ್ಲದೇ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳೂ ನಡೆದಿವೆ. ಪ್ರವಾಸೋದ್ಯಮ ಅಭಿವೃದ್ಧಿಗೂ ಹತ್ತು ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ.
2008 ರಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ದೇಶಪಾಂಡೆ ಅವರನ್ನು ಅಚ್ಚರಿಯ ರೀತಿಯಲ್ಲಿ ಸೋಲಿಸಿದ್ದ ಸುನೀಲ್ ಹೆಗಡೆ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಆದ್ದರಿಂದ ಜೆಡಿಎಸ್ ಗೆ ಅಭ್ಯರ್ಥಿಯನ್ನು ಹುಡುಕುವುದೇ ಒಂದು ದೊಡ್ಡ ತಲೆನೋವಾಗಿದೆ.
2013 ರಲ್ಲೂ ಜೆಡಿಎಸ್ ನ ಸುನಿಲ್ ಹೆಗಡೆ ಅವರ ವಿರುದ್ಧ ಆರ್ ವಿ ದೇಶಪಾಂಡೆ ಅವರು ತುಂಬಾ ಅಂತರದ ಗೆಲುವನ್ನೇನೂ ಪಡೆದಿರಲಿಲ್ಲ. ಆರ್.ವಿ.ದೇಶಪಾಂಡೆ(ಕಾಂಗ್ರೆಸ್) 55005 ಮತಗಳನ್ನು ಪಡೆದಿದ್ದರೆ, ಸುನಿಲ್ ಹೆಗಡೆ(ಜೆಡಿಎಸ್) 49066 ಮತಗಳನ್ನು ಗಳಿಸಿದ್ದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications