ಕ್ಷೇತ್ರ ಪರಿಚಯ : ಉತ್ತರ ಕರ್ನಾಟಕದ ಹೆಬ್ಬಾಗಿಲಲ್ಲಿ ಯಾರಿಗೆ ಜಯ?
ಹಾವೇರಿ ಕರ್ನಾಟಕ ರಾಜ್ಯದ ಮಧ್ಯಭಾಗದಲ್ಲಿರುವ ತಾಲೂಕು ಕೇಂದ್ರ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹಾವೇರಿ ಹೆಬ್ಬಾಗಿಲು ಎಂದು ಪ್ರಸಿದ್ಧಿ ಪಡೆದಿದೆ. ಹಾವೇರಿ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ.
ಸಂತ ಶಿಶುನಾಳ ಶರೀಫ, ವರಕವಿ ಸರ್ವಜ್ಞ, ಕಾದಂಬರಿ ಪಿತಾಮಹ ಗಳಗನಾಥರು, ಗಾನಯೋಗಿ ಪಂಚಾಕ್ಷರಿ ಗವಾಯಿಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ವಿನಾಯಕ ಕೃಷ್ಣ ಗೋಕಾಕರು ಮುಂತಾದ ಮಹನಿಯರಿಗೆ ಜನ್ಮನೀಡಿದ ಕ್ಷೇತ್ರ ಹಾವೇರಿ.
ಹಾವೇರಿ ಜಿಲ್ಲೆಯು ಗದಗ ಜಿಲ್ಲೆಯನ್ನು ಒಳಗೊಂಡಂತೆ ಮೊದಲು ಧಾರವಾಡ ಜಿಲ್ಲೆಯ ಭಾಗವಾಗಿತ್ತು. ಜನರ ಬೇಡಿಕೆಯಂತೆ ಬಹುದಿನಗಳ ಹೋರಾಟದ ನಂತರ ಧಾರವಾಡ ಜಿಲ್ಲೆಯಿಂದ ವಿಭಜನೆ ಮಾಡಿ 1997ರಲ್ಲಿ ಹಾವೇರಿ ಜಿಲ್ಲೆ ರಚನೆ ಮಾಡಲಾಯಿತು.
ಸಾಕಷ್ಟು ಐತಿಹಾಸಿಕ ಹಿನ್ನೆಲೆಯನ್ನು ಹಾವೇರಿ ಹೊಂದಿದೆ. ತುಂಗಭದ್ರಾ ಮತ್ತು ವರದಾ ನದಿ ಪಾತ್ರದಲ್ಲಿ ಜಿಲ್ಲೆಯಿದೆ. ರಾಜಕೀಯವಾಗಿ ಜಿಲ್ಲೆ ಬಿಜೆಪಿಯ ವಶದಲ್ಲಿತ್ತು.

2008ರ ಚುನಾವಣೆಯಲ್ಲಿ ಜಿಲ್ಲೆಯ 6 ಕ್ಷೇತ್ರಗಳ ಪೈಕಿ ಐದನ್ನು ಬಿಜೆಪಿ ಗೆದ್ದಿತ್ತು.
2013ರ ಚುನಾವಣೆಯಲ್ಲಿ ಬಿಜೆಪಿ-ಕೆಜೆಪಿ ಮತ ವಿಭಜನೆ ಕಾರಣ ಕಾಂಗ್ರೆಸ್ 4 ಸ್ಥಾನಗಳಲ್ಲಿ ಜಯಗಳಿಸಿತು. ಬಿ.ಎಸ್.ಯಡಿಯೂರಪ್ಪ ಕೆಜೆಪಿ ಪಕ್ಷವನ್ನು ಸ್ಥಾಪನೆ ಮಾಡಿದ್ದು ಹಾವೇರಿಯಲ್ಲಿಯೇ. ಆದ್ದರಿಂದ, ಜಿಲ್ಲೆಯಲ್ಲಿ ಯಡಿಯೂರಪ್ಪ ಅವರ ವರ್ಚಸ್ಸು ಹೆಚ್ಚಿದೆ.
ಹಾವೇರಿ ಕ್ಷೇತ್ರದ ಶಾಸಕರು ಕಾಂಗ್ರೆಸ್ನ ರುದ್ರಪ್ಪ ಲಮಾಣಿ. 83,119ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಸಂಪುಟ ಪುನಾರಚನೆ ಸಂದರ್ಭದಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.
ಕಳೆದ ಬಾರಿ ಕೆಜೆಪಿಯಿಂದ ಸ್ಪರ್ಧಿಸಿದ್ದ ನೆಹರು ಓಲೆಕರ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂಬುದು ಸದ್ಯದ ಸುದ್ದಿ. ರುದ್ರಪ್ಪ ಲಮಾಣಿ ಅವರಿಗೆ ಮತ್ತೊಮ್ಮೆ ಟಿಕೆಟ್ ಸಿಗುವುದು ಖಾತ್ರಿಯಾಗಿದೆ.
2013ರ ಚುನಾವಣೆಯಲ್ಲಿ ರುದ್ರಪ್ಪ ಲಮಾಣಿ ಅವರು 83,119 ಮತಗಳನ್ನು ಪಡೆದಿದ್ದರು. ಕೆಜೆಪಿಯಿಂದ ಸ್ಪರ್ಧಿಸಿದ್ದ ನೆಹರು ಓಲೇಕರ್ 52,911 ಮತ, ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ.ಮಲ್ಲೇಶ್ವಪ್ಪ ಹರಿಜನ್ 5,153 ಮತ, ಜೆಡಿಎಸ್ನ ಪರಮೇಶ್ವರ ತಿಪ್ಪಣ್ಣ 1461 ಮತಗಳನ್ನು ಪಡೆದಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications