ಹೊಳೆನರಸೀಪುರ : ಸುಭಿಕ್ಷ ಕ್ಷೇತ್ರದಲ್ಲಿ ಒಕ್ಕಲಿಗನೇ ಅಧಿಪತಿ
ಹೇಮಾವತಿ ಹೊಳೆ ನದಿ ದಂಡೆಯ ಊರು, ಶ್ರೀಲಕ್ಷ್ಮಿನರಸಿಂಹಸ್ವಾಮಿಯ ನೆಲೆಬೀಡು ನರಸೀಪುರ-ಹೊಳೆ ನರಸೀಪುರವಾಗಿ ಜನಜನಿತ. ಭತ್ತ, ಕಬ್ಬು ಬೆಳೆಯುವ ಇಲ್ಲಿನ ರೈತಾಪಿ ಜನಕ್ಕೆ ನೀರಿನ ಕೊರತೆ ಇಲ್ಲ. ಅಕ್ಕಿ ಗಿರಣಿಗಳಿದ್ದು, ಕೈಗಾರಿಕೆಗಳು, ಶಾಲೆ, ಕಾಲೇಜುಗಳು, ಉತ್ತಮ ರಸ್ತೆ ಸೌಲಭ್ಯಗಳಿವೆ. ರೈಲು ಸಂಪರ್ಕವೂ ಇದೆ.
ಪ್ರವಾಸೋದ್ಯಮಕ್ಕೆ ಇನ್ನಷ್ಟು ಆದ್ಯತೆ, ಪದವಿ ಕಾಲೇಜುಗಳ ಕೊರತೆ ಬಿಟ್ಟರೆ ಒಕ್ಕಲಿಗರೇ ಅಧಿಕವಾಗಿರುವ ಈ ಕ್ಷೇತ್ರ ಸದ್ಯಕ್ಕೆ ಸುಭಿಕ್ಷವಾಗಿದೆ ಎನ್ನಬಹುದು.
ಕಳೆದ ವಿಧಾನಸಭೆಯಲ್ಲಿ ಅರಕಲಗೂಡು ಹಾಗೂ ಬೇಲೂರು ಬಿಟ್ಟು ಮಿಕ್ಕ ಐದು ಕ್ಷೇತ್ರಗಳು ಜೆಡಿಎಸ್ ವಶವಾಗಿತ್ತು. ಈ ಬಾರಿ ಅಷ್ಟು ಸುಲಭವಲ್ಲ. ಒಕ್ಕಲಿಗರ ಉಪಜಾತಿಯಾದ ದಾಸ ಒಕ್ಕಲಿಗರು ತಿರುಗಿಬಿದ್ದರೆ ಹೊಳೆ ನರಸೀಪುರವೂ ದಕ್ಕುವುದಿಲ್ಲ ಎಂಬ ಪ್ರಜ್ಞೆ ಜೆಡಿಎಸ್ ವರಿಷ್ಠರಿಗಿದೆ.
ಮಾವಿನಕೆರೆ ರಂಗನಾಥ, ಹೀರೇಬೆಳಗುಲಿ, ಗ್ರಾಮದೇವತೆಗಳಾದ ಉಡುಸಲಮ್ಮ-ದುರ್ಗಮ್ಮ ದೇವೆ ಜಾತ್ರೆ ನಾಡಿನಲ್ಲಿ ಪ್ರಸಿದ್ಧ. ಮಾಜಿ ಪ್ರಧಾನಿ ದೇವೇಗೌಡರ ಹುಟ್ಟೂರು ಹೊಳೆನರಸೀಪುರದ ಹರದನಹಳ್ಳಿಯ ಹಳೇಕೋಟೆ ಹೋಬಳಿಯಲ್ಲಿದೆ.
ಪ್ರವಾಸೋದ್ಯಮಕ್ಕೆ ಇನ್ನಷ್ಟು ಆದ್ಯತೆ, ಪದವಿ ಕಾಲೇಜುಗಳ ಕೊರತೆ ಬಿಟ್ಟರೆ ಒಕ್ಕಲಿಗರೇ ಅಧಿಕವಾಗಿರುವ ಈ ಕ್ಷೇತ್ರ ಸದ್ಯಕ್ಕೆ ಸುಭಿಕ್ಷವಾಗಿದೆ ಎನ್ನಬಹುದು.
ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ 1962ರಲ್ಲಿ ಕಣಕ್ಕಿಳಿದು ರಾಜಕೀಯ ಪ್ರವೇಶ ಪಡೆದ ಎಚ್. ಡಿ ದೇವೇಗೌಡ ಅವರು ಇಂದಿಗೂ ಸಕ್ರಿಯ ರಾಜಕಾರಣಿಯಾಗಿ ಉಳಿದಿದ್ದಾರೆ. ಹೊಳೆನರಸೀಪುರದಲ್ಲಿ ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದು ದೇವೇಗೌಡರ ಜತೆಗೂಡಿದ್ದ ಪುಟ್ಟಸ್ವಾಮಿ ಗೌಡ ಅವರು ಈಗ ದೇವೇಗೌಡರ ಜತೆಗಿಲ್ಲ.
1984ರ ನಂತರ ದೇವೇಗೌಡರ ಪುತ್ರ ಎಚ್ ಡಿ ರೇವಣ್ಣ ಅವರು ಶಾಸಕರಾದರು. ಅಪ್ಪ ಹಾಕಿಕೊಟ್ಟ ಹಾದಿಯಲ್ಲೇ ಸಾಗಿ ಹೊಳೆನರಸೀಪುರ ಕ್ಷೇತ್ರದಲ್ಲಿ ಕುಳಿತು ಹಾಸನ ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಿದರು.

ಕಳೆದ ವಿಧಾನಸಭೆಯಲ್ಲಿ ಅರಕಲಗೂಡು ಹಾಗೂ ಬೇಲೂರು ಬಿಟ್ಟು ಮಿಕ್ಕ ಐದು ಕ್ಷೇತ್ರಗಳು ಜೆಡಿಎಸ್ ವಶವಾಗಿತ್ತು. ಈ ಬಾರಿ ಅಷ್ಟು ಸುಲಭವಲ್ಲ. ಒಕ್ಕಲಿಗರ ಉಪಜಾತಿಯಾದ ದಾಸ ಒಕ್ಕಲಿಗರು ತಿರುಗಿಬಿದ್ದರೆ ಹೊಳೆ ನರಸೀಪುರವೂ ದಕ್ಕುವುದಿಲ್ಲ ಎಂಬ ಪ್ರಜ್ಞೆ ಜೆಡಿಎಸ್ ವರಿಷ್ಠರಿಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಚ್ ಡಿ ರೇವಣ್ಣ ಅವರು (92173 ಮತಗಳು), ಕಾಂಗ್ರೆಸ್ಸಿನ ಎಚ್ ಜಿ ಅನುಪಮ(62655) ಗಳಿಸಿದ್ದರು. 30 ಸಾವಿರ ಅಂತರದ ಮತಗಳಿಂದ ರೇವಣ್ಣ ಜಯಶಾಲಿಯಾಗಿದ್ದರು. ಈ ಬಾರಿ ಕೂಡಾ ಪ್ರಮುಖ ಸ್ಪರ್ಧಿಗಳಿಲ್ಲದಿದ್ದರೆ ರೇವಣ್ಣ ಅವರ ಗೆಲುವು ತಪ್ಪಿಸಲು ಸಾಧ್ಯವಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications