ಕ್ಷೇತ್ರ ಪರಿಚಯ : ಹೊಸದುರ್ಗ, ಹೊಸ ಫಲಿತಾಂಶದ ನಿರೀಕ್ಷೆ
ವೇದಾವತಿ ನದಿ ಹಿನ್ನೀರಿನ ಪ್ರದೇಶದಲ್ಲಿರುವ ಹೊಸದುರ್ಗ ಶೇ 72ರಷ್ಟು ಸಾಕ್ಷರತೆ ಹೊಂದಿದೆ. ಕೃಷಿಯೇ ಜೀವಾಳವಾಗಿರುವ ಈ ಕ್ಷೇತ್ರದಲ್ಲಿ ಸಿಮೆಂಟ್, ತೆಂಗಿನ ಕಾಯಿ ಕಾರ್ಖಾನೆ ಬಿಟ್ಟರೆ ಮತ್ತೆ ಯಾವ ಕೈಗಾರಿಕೆಗಳಿಲ್ಲ. ಖನಿಜಭರಿತ ಭೂಮಿಯಾದರೂ ಫಲವತ್ತತೆ ಬಳಕೆಯಾಗುತ್ತಿಲ್ಲ.
ಹತ್ತು ಹಲವು ಪ್ರೇಕ್ಷಣೀಯ ಕ್ಷೇತ್ರಗಳನ್ನು ಹೊಸದುರ್ಗ ಹೊಂದಿದೆ. ಈ ಪೈಕಿ ಹಾಲು ರಾಮೇಶ್ವರದ ಉದ್ಭವ ಗಂಗೆಯಲ್ಲಿ ಬೇಡಿಕೆ ಸಲ್ಲಿಸಿದರೆ, ಮಕ್ಕಳಿಲ್ಲದವರಿಗೆ ಮಕ್ಕಳಾಗುತ್ತದೆ ಎಂಬ ಪ್ರತೀತಿಯಿದೆ. ರಾಮಾಯಣ ಕಾಲದ ದಶರಥ ರಾಮೇಶ್ವರ, ಜಾನಕಲ್ಲು, ಕೆಲ್ಲೋಡು ಜೈನಕ್ಷೇತ್ರ ಬಾಗೂರು, ಹೆಗ್ಗೆರೆ ಮುಂತಾದ ಕ್ಷೇತ್ರಗಳಿವೆ.
ಇಲ್ಲಿ ಸದ್ಯಕ್ಕೆ ಶಾಸಕರಾಗಿರುವುದು ಕಾಂಗ್ರೆಸ್ ಪಕ್ಷದ ನಾಯಕ ಎಂ. ಗೋವಿಂದಪ್ಪ. ಈ ಹಿಂದೆ ಈ ಕ್ಷೇತ್ರದಲ್ಲಿ ಗೂಳಿಹಟ್ಟಿ ಶೇಖರ್ ಪ್ರಾಬಲ್ಯ ಸಾಧಿಸಿದ್ದರು.

ಬಿಜೆಪಿ-ಜೆಡಿಎಸ್ ನ ಟ್ವೆಂಟಿ-ಟ್ವೆಂಟಿ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ಗೂಳಿಹಟ್ಟಿ ಶೇಖರ್, ಆ ಕ್ಷೇತ್ರದಲ್ಲಿ ಒಂದಿಷ್ಟು ಒಳ್ಳೆ ಕೆಲಸ ಮಾಡಿದ ಉದಾಹರಣೆಗಳಿಗಿಂತ ವೈಯಕ್ತಿಕವಾಗಿ ಹಲವಾರು ಜನರಿಗೆ ನೆರವಾದ ಮಾತುಗಳು ಕೇಳಿಬರುತ್ತವೆ. ಹಾಗಾಗಿ, ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯಲು ಅವರು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಹಾಗಾಗಿ, ಸದ್ಯದ ಪರಿಸ್ಥಿತಿಯಲ್ಲಿ ಭಾರೀ ಪ್ರಾಬಲ್ಯ ಗಳಿಸಿರುವ ಬಿ.ಜಿ ಗೋವಿಂದಪ್ಪ ಅವರಿಗೆ, ಗೂಳಿಹಟ್ಟಿ ಶೇಖರ್ ಅವರು ಮುಂದಿನ ಚುನಾವಣೆಯಲ್ಲಿ ಪೈಪೋಟಿಯೊಡ್ಡುವ ಸಾಧ್ಯತೆಗಳಿವೆ.
ಇವರಿಬ್ಬರಲ್ಲದೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆಎಸ್ ನವೀನ್, ಲಿಂಗಮೂರ್ತಿ ಕೂಡಾ ಟಿಕೆಟ್ ಆಕಾಂಕ್ಷಿಗಳು. ಜೆಡಿಎಸ್ ನಿಂದ ಮೀನಾಕ್ಷಿ ನಂದೀಶ್, ಉಪಾಧ್ಯಕ್ಷ ಶಿವಮೂರ್ತಿ ಅವರು ಸ್ಪರ್ಧೆ ಬಯಸಿದ್ದಾರೆ.
2013ರ ಫಲಿತಾಂಶ: 2013ರಲ್ಲಿ ಶೇ 79.94ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ಸಿನ ಬಿ.ಜಿ ಗೋವಿಂದಪ್ಪ 58,010 ಮತಗಳನ್ನು ಪಡೆದು ಜಯಭೇರಿ ಬಾರಿಸಿದರೆ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗೂಳಿಹಟ್ಟಿ ಶೇಖರ್ 37,993 ಮತಗಳನ್ನು ಗಳಿಸಿ ಸೋಲು ಅನುಭವಿಸಿದ್ದರು. 20, 017 ಮತಗಳ (ಶೇ 14.30ರಷ್ಟು) ಅಂತರದಿಂದ ಗೋವಿಂದಪ್ಪ ಜಯ ಸಾಧಿಸಿದ್ದರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications