ಹುಬ್ಬಳ್ಳಿ -ಧಾರವಾಡ ಮಧ್ಯ ಕ್ಷೇತ್ರ: ಮತ್ತೆ ಶೆಟ್ಟರ್ ಮ್ಯಾಜಿಕ್ ಗೆಲ್ಲುತ್ತಾ?
ಹುಬ್ಬಳ್ಳಿ-ಧಾರವಾಡ ಮಧ್ಯಕ್ಷೇತ್ತರ ಹಲವು ಹೆಗ್ಗಳಿಕೆಗಳಿಗೆ ಪಾತ್ರವಾಗಿದೆ. ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪಡೆದ ಹಿಂದು ಸ್ಥಾನಿ ಗಾಯಕ ಭೀಮಸೇನ ಜೋಶಿ ಇಲ್ಲಿಯವರೇ.
ಕೈಮಗ್ಗದ ಕಾರ್ಖಾನೆಗಳಿಂದಾಗಿ ಹಲವು ಜನರ ನಿರುದ್ಯೋಗ ಸಮಸ್ಯೆ ಈಡೇರಿಸಿದ ಕ್ಷೇತ್ರ ಇದು.
ಸಜ್ಜನ ರಾಜಕಾರಣಿ, ಸೋಲಿಲ್ಲದ ಸರದಾರ ಎಂದೇ ಪ್ರಸಿದ್ಧರಾಗಿರುವ ಬಿಜೆಪಿಯ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರ ಇದು. ಆರ್ ಎಸ್ ಎಸ್ ನ ಗರಡಿ ಮನೆಯಾಗಿರುವ ಹುಬ್ಬಳ್ಳಿಯಲ್ಲಿ ಅವರ ಗೆಲುವಿನ ನಾಗಾಲೋಟ ನಿರಾಯಾಸವಾಗಿ ನಡೆದುಕೊಂಡು ಬಂದಿದೆ. ಚುನಾವಣಾ ತಂತ್ರಗಾರಿಕೆ ಮತ್ತು ಗೆಲುವಿನ ಪಟ್ಟುಗಳನ್ನು ಕರತಲಾಮಲಕ ಮಾಡಿಕೊಂದಡಿರುವ ಅವರ ಗೆಲುವಿಗೆ ಕಾಂಗ್ರೆಸ್ ಸಹ ಪರೋಕ್ಷವಾಗಿ ಕಾರಣವಾಗಿದೆ.

ಕಳೆದ ಹಲವು ಚುನಾವಣೆಗಳಲ್ಲಿ ಇಲ್ಲಿ ಕಾಂಗ್ರೆಸ್ ಒಬ್ಬ ಪ್ರಬಲ ಮತ್ತು ನಿಶ್ಚಿತ ಅಭ್ಯರ್ಥಿಯನ್ನು ನಿಲ್ಲಿಸುವಲ್ಲಿ ಎಡವಿದೆ. ಚುನಾವಣೆ ಕೊನೆ ಗಳಿಗೆಯಲ್ಲಿ ಜನರಿಗೆ ಪರಿಚಯವೇ ಇಲ್ಲದ ಅಭ್ಯರ್ಥಿಯೊಬ್ಬರನ್ನು ತಂದು ನಿಲ್ಲಿಸಿದರೆ ಬಿಜೆಪಿ ಗೆಲ್ಲುವುದು ಕಷ್ಟದ ವಿಷಯವೇ ಅಲ್ಲ. ಇಲ್ಲಿ ಮುಸ್ಲಿಂ ಸಂಖ್ಯೆಯಿದ್ದರೂ, ಹಿಂದು ಮತಗಳೇ ನಿರ್ಣಾಯಕ.
ಅಭಿವೃದ್ಧಿಯ ದೃಷ್ಟಿಯಿಂದಲೂ ಈ ಕ್ಷೇತ್ರದ ಶ್ರೀಮಂತವಾಗಿದ್ದು, ರಸ್ತೆ, ಚರಂಡಿ, ನೀರು ಮುಂತಾದ ಮೂಲಭೂತ ಸೌಲಭ್ಯಗಳ ಕೊರತೆ ಇಲ್ಲಿಲ್ಲ. ಯಾವುದೇ ಹಗರಣ, ಗದ್ದಲ, ವಿವಾದಗಳಲ್ಲಿ ನಗರಹಾಕಿಕೊಳ್ಳದ ಮುತ್ಸದ್ಧಿ ಶೆಟ್ಟರ್ ತಮ್ಮ ಕ್ಷೇತ್ರದ ಜನರ ಪ್ರೀತಿ ಗಳಿಸಿದ್ದಾರೆ.
ಕಾಂಗ್ರೆಸ್ ನ ಕಳೆದ ಸಲ ಪರಾಜಿತ ಅಭ್ಯರ್ಥಿ ಡಾ.ಮಹೇಶ್ ನಾಲ್ವಾಡ ಮತ್ತು ನಾಗರಾಜ ಚಬ್ಬಿ ಈ ಸಲ ಟಿಕೇಟ್ ನ ಪ್ರಬಲ ಆಕಾಂಕ್ಷಿಗಳು. 2013 ರಲ್ಲಿ ಗೆದ್ದ ಜಗದೀಶ್ ಶೆಟ್ಟರ್ 58201 ಮತಗಳಿಸಿದ್ದರೆ, ಕಾಂಗ್ರೆಸ್ ನ ಡಾ.ಮಹೇಶ್ ನಾಲ್ವಾಡ 40447 ಮತ ಗಳಿಸಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications