ಹುಬ್ಬಳ್ಳಿ -ಧಾರವಾಡ ಪೂರ್ವ: ಮೀಸಲು ಕ್ಷೇತ್ರದಲ್ಲಿ ಗೆಲುವು ಯಾರಿಗೆ?
ಹತ್ತಿ ಮತ್ತು ಶೇಂಗಾ ಬೆಳೆಗೆ ಪ್ರಸಿದ್ಧಿ ಪಡೆದ ಈ ಕ್ಷೇತ್ರ ಎಸ್ ಸಿ(ಪರಿಶಿಷ್ಟ ಜಾತಿ) ವರ್ಗದ ಮೀಸಲು ಕ್ಷೇತ್ರ. ಕೈಮಗ್ಗ ಮತ್ತು ಜವಳಿ ಕೈಗಾರಿಕೆಗೆ ಹೇಳಿ ಮಾಡಿಸಿದ ತಾಣ ಇದು. ವಿಜಯ ನಗರ ಸಾಮ್ರಾಜ್ಯದ ಕಾಲದಲ್ಲೇ ಇದು ಹತ್ತಿ ಮತ್ತು ಕಬ್ಬಿಣ ವ್ಯಾಪಾರದ ಬಹುಮುಖ್ಯ ಕೇಂದ್ರವಾಗಿತ್ತು ಎಂಬ ಕುರಿತು ಮಾಹಿತಿ ಸಿಗುತ್ತದೆ.
ಇಲ್ಲಿನ ರಾಜಕೀಯದ ಬಗ್ಗೆ ಮಾತನಾಡುವುದಾದರೆ ಛಲವಾದಿ ಸಮುದಾಯಕ್ಕೆ ಸೇರಿದ ಪ್ರಸಾದ ಅಬ್ಬಯ್ಯ ಸದ್ಯ ಎಮ್ ಎಲ್ ಸಿ ಆಗಿದ್ದಾರೆ. ಕಳೆದ ಬಾರಿಯ ಎಮ್ ಎಲ್ ಸಿ ಆಗಿದ್ದ ಬಿಜೆಪಿಯ ವೀರಭದ್ರಪ್ಪ ಹಾಲಹರವಿ(ಮಾದಿಗ ಜನಾಂಗ) ಅವರು ಕೆಜಿಪಿಯಿಂದಾಗಿ ಮತ ವಿಭಜನೆಯಾಗಿ ಸೋಲಬೇಕಾಯಿತು.
ಕೆಜೆಪಿಯ ಶಂಕ್ರಪ್ಪ ಬಿಜವಾಣ ಸುಮಾರು 25 ಸಾವಿರ ಮತಗಳನ್ನು ಪಡೆದು ಬಿಜೆಪಿ ಸೋಲಿಗೆ ಮತ್ತು ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದರು. ಜೆಡಿಎಸ್ ಹನುಮಂತಪ್ಪ ಆಲ್ಕೋಡ್(ಮಾದಿಗ) 3 ನೇ ಸ್ಥಾನಕ್ಕೆ ತಳ್ಳಲ್ಪಟ್ಟರು.

ತಮ್ಮ ಗೆಲುವನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಇದುವರೆಗೆ ಸುಮಾರು 150 ಕೋಟಿ ಅನುದಾನವನ್ನು ತಂದು, ಪ್ರಸಾದ್ ಅಬ್ಬಯ್ಯ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಆದರೆ ಕುಟುಂಬ ರಾಜಕಾರಣ ಅವರಿಗೆ ಈ ಬಾರಿ ಹಿನ್ನಡೆ ಮಾಡಬಹುದು. ಅಲ್ಲದೆ ಬೆಟ್ಟಿಂಗ್ ರಿಯಲ್ ಎಸ್ಟೇಟ್ ದಂಧೆಗಳ ಗಲಾಟೆ ಅವುಗಳು ಪ್ರಬಲವಾಗಿರುವುದರಿಂದ ಅಡ್ಡಪರಿಣಾಮ ಪ್ರಸಾದ ಅಬ್ಬಯ್ಯ ಗೆಲುವಿಗೆ ಮಾರಕವಾಗಬಹುದು.
ಮಾದಿಗ ಮತ್ತು ಛಲವಾದಿ ಸಮುದಾಯಗಳಲ್ಲಿ ಟಿಕೇಟ್ ಕಾರಣಕ್ಕಾಗಿ ಪೈಪೋಟಿ ಇದೆ. ಭಿನ್ನಮತದ ಬಿಸಿ ತಟ್ಟುವ ಸಾಧ್ಯತೆ ಇದೆ. ಅಲ್ಲದೆ, ಈ ಬಾರಿ ಬಿಜೆಪಿ ಮತ್ತು ಕೆಜೆಪಿ ಒಂದಾಗಿವೆ. ಮೋದಿ ಅಲೆ ಯಡಿಯೂರಪ್ಪ ಪ್ರಭಾವದಿಂದ ಹಾಲಹರವಿ ಮತ್ತೆ ಗೆದ್ದು ಬರಬಹುದು. ತನ್ನ ಪಕ್ಷದ ಕ್ಷೇತ್ರವಾದ ಇದನ್ನು ಶೆಟ್ಟರ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದ್ದಾರೆ.
ಸಾವಜಿ ಜನಾಂಗದ ಮತಗಳನ್ನು ಒಗ್ಗೂಡಿಸುವಲ್ಲಿ ಅವರು ರಾಜಕೀಯ ತಂತ್ರಗಾರಿಕೆಯನ್ನು ರೂಪಿಸಿದ್ದಾರೆ. ಹೀಗಾಗಿ ಕಮಲ ಅರಳುವ ಸಾಧ್ಯತೆ ಇದೆ.
2013 ರ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ ಅಬ್ಬಯ್ಯ 42353 ಮತ ಪಡೆದಿದ್ದರೆ, ಬಿಜೆಪಿಯ ವೀರಭದ್ರಪ್ಪ ಹಾಲಹರವಿ 28831 ಮತ ಪಡೆದಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications