ಹುಬ್ಬಳ್ಳಿ -ಧಾರವಾಡ ಪೂರ್ವ: ಮೀಸಲು ಕ್ಷೇತ್ರದಲ್ಲಿ ಗೆಲುವು ಯಾರಿಗೆ?
ಹತ್ತಿ ಮತ್ತು ಶೇಂಗಾ ಬೆಳೆಗೆ ಪ್ರಸಿದ್ಧಿ ಪಡೆದ ಈ ಕ್ಷೇತ್ರ ಎಸ್ ಸಿ(ಪರಿಶಿಷ್ಟ ಜಾತಿ) ವರ್ಗದ ಮೀಸಲು ಕ್ಷೇತ್ರ. ಕೈಮಗ್ಗ ಮತ್ತು ಜವಳಿ ಕೈಗಾರಿಕೆಗೆ ಹೇಳಿ ಮಾಡಿಸಿದ ತಾಣ ಇದು. ವಿಜಯ ನಗರ ಸಾಮ್ರಾಜ್ಯದ ಕಾಲದಲ್ಲೇ ಇದು ಹತ್ತಿ ಮತ್ತು ಕಬ್ಬಿಣ ವ್ಯಾಪಾರದ ಬಹುಮುಖ್ಯ ಕೇಂದ್ರವಾಗಿತ್ತು ಎಂಬ ಕುರಿತು ಮಾಹಿತಿ ಸಿಗುತ್ತದೆ.
ಇಲ್ಲಿನ ರಾಜಕೀಯದ ಬಗ್ಗೆ ಮಾತನಾಡುವುದಾದರೆ ಛಲವಾದಿ ಸಮುದಾಯಕ್ಕೆ ಸೇರಿದ ಪ್ರಸಾದ ಅಬ್ಬಯ್ಯ ಸದ್ಯ ಎಮ್ ಎಲ್ ಸಿ ಆಗಿದ್ದಾರೆ. ಕಳೆದ ಬಾರಿಯ ಎಮ್ ಎಲ್ ಸಿ ಆಗಿದ್ದ ಬಿಜೆಪಿಯ ವೀರಭದ್ರಪ್ಪ ಹಾಲಹರವಿ(ಮಾದಿಗ ಜನಾಂಗ) ಅವರು ಕೆಜಿಪಿಯಿಂದಾಗಿ ಮತ ವಿಭಜನೆಯಾಗಿ ಸೋಲಬೇಕಾಯಿತು.
ಕೆಜೆಪಿಯ ಶಂಕ್ರಪ್ಪ ಬಿಜವಾಣ ಸುಮಾರು 25 ಸಾವಿರ ಮತಗಳನ್ನು ಪಡೆದು ಬಿಜೆಪಿ ಸೋಲಿಗೆ ಮತ್ತು ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದರು. ಜೆಡಿಎಸ್ ಹನುಮಂತಪ್ಪ ಆಲ್ಕೋಡ್(ಮಾದಿಗ) 3 ನೇ ಸ್ಥಾನಕ್ಕೆ ತಳ್ಳಲ್ಪಟ್ಟರು.

ತಮ್ಮ ಗೆಲುವನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಇದುವರೆಗೆ ಸುಮಾರು 150 ಕೋಟಿ ಅನುದಾನವನ್ನು ತಂದು, ಪ್ರಸಾದ್ ಅಬ್ಬಯ್ಯ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಆದರೆ ಕುಟುಂಬ ರಾಜಕಾರಣ ಅವರಿಗೆ ಈ ಬಾರಿ ಹಿನ್ನಡೆ ಮಾಡಬಹುದು. ಅಲ್ಲದೆ ಬೆಟ್ಟಿಂಗ್ ರಿಯಲ್ ಎಸ್ಟೇಟ್ ದಂಧೆಗಳ ಗಲಾಟೆ ಅವುಗಳು ಪ್ರಬಲವಾಗಿರುವುದರಿಂದ ಅಡ್ಡಪರಿಣಾಮ ಪ್ರಸಾದ ಅಬ್ಬಯ್ಯ ಗೆಲುವಿಗೆ ಮಾರಕವಾಗಬಹುದು.
ಮಾದಿಗ ಮತ್ತು ಛಲವಾದಿ ಸಮುದಾಯಗಳಲ್ಲಿ ಟಿಕೇಟ್ ಕಾರಣಕ್ಕಾಗಿ ಪೈಪೋಟಿ ಇದೆ. ಭಿನ್ನಮತದ ಬಿಸಿ ತಟ್ಟುವ ಸಾಧ್ಯತೆ ಇದೆ. ಅಲ್ಲದೆ, ಈ ಬಾರಿ ಬಿಜೆಪಿ ಮತ್ತು ಕೆಜೆಪಿ ಒಂದಾಗಿವೆ. ಮೋದಿ ಅಲೆ ಯಡಿಯೂರಪ್ಪ ಪ್ರಭಾವದಿಂದ ಹಾಲಹರವಿ ಮತ್ತೆ ಗೆದ್ದು ಬರಬಹುದು. ತನ್ನ ಪಕ್ಷದ ಕ್ಷೇತ್ರವಾದ ಇದನ್ನು ಶೆಟ್ಟರ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದ್ದಾರೆ.
ಸಾವಜಿ ಜನಾಂಗದ ಮತಗಳನ್ನು ಒಗ್ಗೂಡಿಸುವಲ್ಲಿ ಅವರು ರಾಜಕೀಯ ತಂತ್ರಗಾರಿಕೆಯನ್ನು ರೂಪಿಸಿದ್ದಾರೆ. ಹೀಗಾಗಿ ಕಮಲ ಅರಳುವ ಸಾಧ್ಯತೆ ಇದೆ.
2013 ರ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ ಅಬ್ಬಯ್ಯ 42353 ಮತ ಪಡೆದಿದ್ದರೆ, ಬಿಜೆಪಿಯ ವೀರಭದ್ರಪ್ಪ ಹಾಲಹರವಿ 28831 ಮತ ಪಡೆದಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications