ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ: ಸೋಲು-ಗೆಲುವಿನ ಭೀತಿ
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ ಹತ್ತು ಹಲವು ಐತಿಹಾಸಿಕ ಪ್ರಸಿದ್ಧ ಸ್ಥಳಗಳನ್ನು ಹೊಂದಿದೆ. ಇದರ ಇತಿಹಾ ರಾಷ್ಟ್ರಕೂಟರ ಕಾಲದಷ್ಟು ಹಿಂದಿನದೆಂದು ಹೇಳಬಹುದು. ಹುಬ್ಬಳ್ಳಿಯ ಸುತ್ತಮುತ್ತಲಿನ ಪುರಾತನ ಜಿನಾಲಯಗಳಲ್ಲಿ ಅನಂತನಾಥ ತೀರ್ಥಂಕರ, ಬ್ರಹ್ಮದೇವ, ಪದ್ಮಾವತಿಯರ ಮೂರ್ತಿಗಳಿವೆ.
ಬಿಜೆಪಿಯ ಅರವಿಂದ ಬೆಲ್ಲದ ತಂದೆ ಚಂದ್ರಕಾಂತ ಬೆಲ್ಲದ ಅವರ ವಾರಸುದಾರ. ಅವರಂತೆ ಸಜ್ಜನ ಮತ್ತು ಸುಸಂಸ್ಕೃತ ರಾಜಕಾರಣಿ. ಭ್ರಷ್ಟಾಚಾರದ ಕಳಂಕ ಹಚ್ಚಿಕೊಂಡವರಲ್ಲಿ. ತಮ್ಮ ಕ್ಷೇತ್ರದಲ್ಲಿ ನಡೆಯುವ ಎಲ್ಲ್ ಸಾಹಿತ್ಯ, ಸಾಂಸ್ಕೃತಿಕ, ಧಾರ್ಮಿಕ ಕಅರ್ಯಕ್ರಮಗಳಲ್ಲಿ ತನುಮನಧನದ ನೆರವು ನೀಡುವ ಮೂಲಕ ಅವರು ಒಂದು ವರ್ಗದ, ಅದರಲ್ಲೂ ಲಿಂಗಾಯತ, ಬ್ರಾಹ್ಮಣರ ಮತಗಳನ್ನು ಸೆಳೆಯಬಲ್ಲರು.
ಧಾರ್ಮಿಕ ಸಂಸ್ಥೆಗಳ ಮತ್ತು ಸಂಘಗಳ ಪ್ರಬಲ ಬೆಂಬಲ ಇರುವ ಬಿಜೆಪಿಯು ಈ ಕ್ಷೇತ್ರದಲ್ಲಿ ಆರ್ ಎಸ್ ಎಸ್ ತನ್ನ ಹಿಡಿತವನ್ನು ಹೊಂದಿದೆ. ಕಳೆದ ಬಾರಿ ಕಾಂಗ್ರೆಸ್ ನ ಎಸ್ ಆರ್ ಮೋರೆಯವರ ಕಾರಣದಿಂದ ಮರಾಠ ಮತಗಳು ಇವರ ಕೈತಪ್ಪಿದ್ದವು. ಜೆಡಿಎಸ್ ನ ಇಸ್ಮಾಯಿಲ್ ತಮಾಟಗಾರ ಹೆಚ್ಚು ಪೈಪೋಟಿ ನೀಡಿ ಕಡಿಮೆ ಅಂತರದಿಂದ ಸೋತಿದ್ದರು.

ನಗರ ಮತ್ತು ಗ್ರಾಮೀಣ ಭಾಗದ ಮುಸ್ಲಿಂ ಮತಗಳ ಮೇಲೆ ಹಿಡಿತ ಹೊಂದಿರುವ ಇವರು ಈ ಬಾರಿ ಕಾಂಗ್ರೆಸ್ಸಿನಲ್ಲಿದ್ದಾರೆ. ಕಾಂಗ್ರೆಸ್ ಅವರಿಗೆ ಟಿಕೇಟ್ ನೀಡಿದಲ್ಲಿ ಅರವಿಂದ್ ಬೆಲ್ಲದರ ಗೆಲುವು ಕಠಿಣವಾಗಲಿದೆ. ಅಲ್ಲದೆ ವಿನಯ ಕುಲಕರ್ಣಿ ತಾವು ಗೆಲ್ಲಬೇಕಾದರೆ ತಮಾಟಗಾರಗೆ ಟಿಕೇಟ್ ಕೊಡಿಸಬೇಕಾಗಿದೆ.
ಆ ಮೂಲಕ ಗ್ರಾಮೀಣ ಭಾಗದ ಮುಸ್ಲಿಂ ಮತಗಳನ್ನು ತಮಟಗಾರ ವಿನಯ್ ಗೆ ತಂದುಕೊಡಬಹುದು. ಜೆಡಿಎಸ್ ನಿಂದ ಈ ಬಾರಿ ಕುರುಬ ಸಮುದಾಯದ ರಾಜಣ್ಣ ಕೊರವಿ ಟಿಕೇಟ್ ಆಕಾಂಕ್ಷಿ. ಮೋದಿ ಅಲೆ ಇದ್ದರೂ ಬಿಜೆಪಿಗೆ ಗೆಲುವು ಅಷ್ಟೊಂದು ಸುಲಭದ ಮಾತಲ್ಲ. ಆಗತರಿಕ ಭಿನ್ನಮತ ಇರುವುದರಿಂದ ಬೆಲ್ಲದ ಅವರನ್ನು ಸೋಲಿನ ಭೀತಿ ಕಾಡಬಹುದು.
2013 ರಲ್ಲಿ ಗೆದ್ದ ಬಿಜೆಪಿಯ ಅರವಿಂದ ಬೆಲ್ಲದ ಪಡೆದ ಮತಗಳು 42003, ಇವರ ವಿರುದ್ಧ ಸೋಲನುಭವಿಸಿದ ಎಸ್ ಆರ್ ಮೋರೆ ಗಳಿಸಿದ ಮತಗಳು 30821.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications