ಹುಕ್ಕೇರಿ ಕ್ಷೇತ್ರ ಪರಿಚಯ : ಮಾಜಿ ಸಚಿವರುಗಳ ನಡುವೆ ಸಮರ
ಶಾಸಕ ವಿಶ್ವನಾಥ್ ಮಲ್ಲಪ್ಪ ಕತ್ತಿ ಅವರ ಅಕಾಲಿಕ ಮರಣ(1985)ದ ನಂತರ ಅವರ ಪುತ್ರ ಉಮೇಶ್ ಕತ್ತಿ ಅವರು ಚುನಾವಣಾ ರಾಜಕೀಯ ಪ್ರವೇಶಿಸಿ, ವಿವಿಧ ಪಕ್ಷಗಳಿಂದ ಭಾರಿ ಅಂತರದಿಂದ ಗೆದ್ದಿದ್ದಾರೆ.
ಜನತಾದಳ, ಜೆಡಿಎಸ್ ನಿಂದ ಗೆದ್ದು ನಂತರ 2008ರಲ್ಲಿ ಆಪರೇಷನ್ ಕಮಲದ ಫಲವಾಗಿ ರಾಜೀನಾಮೆ ನೀಡಿದ ಕತ್ತಿ ಮತ್ತೊಮ್ಮೆ ಬಿಜೆಪಿಯಿಂದ ಸ್ಪರ್ಧಿಸಿ ಭಾರಿ ಅಂತರದಿಂದ ಗೆದ್ದಿದ್ದರು. ಸಂಕೇಶ್ವರ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದ ಮಾಜಿ ಸಚಿವ ಎ.ಬಿ ಪಾಟೀಲ್ ಅವರು 2018ರಲ್ಲಿ ಹುಕ್ಕೇರಿಯಿಂದ ಸ್ಪರ್ಧಿಸಿ ಸೋಲು ಕಂಡರು.
ಈ ಮತ್ತೊಮ್ಮೆ ಮಾಜಿ ಸಚಿವರಾದ ಉಮೇಶ್ ಕತ್ತಿ ಹಾಗೂ ಎ.ಬಿ ಪಾಟೀಲರ ನಡುವೆ ಪೈಪೋಟಿ ಕಾಣಬಹುದು. ಕತ್ತಿ ಅವರ ಬೆಂಬಲಕ್ಕೆ ಅವರ ಒಡೆತನದ ಸಕ್ಕರೆ ಕಾರ್ಖಾನೆ, ಸಹಕಾರಿ ಸಂಸ್ಥೆಗಳಿದ್ದರೆ, ಎ.ಬಿ ಪಾಟೀಲರ ಬೆಂಬಲಕ್ಕೆ ಶಿಕ್ಷಣ ಹಾಗೂ ಸಹಕಾರಿ ಸಂಘಗಳಿವೆ.

ಲಿಂಗಾಯತ, ಮುಸ್ಲಿಮ್, ಮರಾಠ, ಎಸ್ ಸಿ, ಎಸ್ಟಿ ಮತಗಳೇ ಇಲ್ಲಿ ನಿರ್ಣಾಯಕ. ಈ ಬಾರಿ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಪ್ರತ್ಯೇಕ ರಾಜ್ಯಕ್ಕೆ ಸಿಎಂ ಆಗುವ ಕನಸು ಹೊತ್ತುಕೊಂಡಿದ್ದಾರೆ ಉಮೇಶ್ ಕತ್ತಿ.
2013ರ ಫಲಿತಾಂಶ:
ಹುಕ್ಕೇರಿಯಲ್ಲಿ 2013ರಲ್ಲಿ ಒಟ್ಟು 10 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಒಬ್ಬರ ನಾಮಪತ್ರ ತಿರಸ್ಕೃತಗೊಂಡಿತ್ತು. 2 ನಾಮಪತ್ರ ಹಿಂಪಡೆದಿದ್ದರು. 7 ಮಂದಿ ಸ್ಪರ್ಧಿಗಳ ಪೈಕಿ 5 ಮಂದಿ ಠೇವಣಿ ಕಳೆದುಕೊಂಡಿದ್ದರು.
ಒಟ್ಟು ಶೇ 75.87 ರಷ್ಟು ಮತದಾನವಾಗಿದ್ದು, 132961 ಮತಗಳ ಪೈಕಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಉಮೇಶ್ ವಿಶ್ವನಾಥ್ ಕತ್ತಿ ಅವರು 81810 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದರು. ಕಾಂಗ್ರೆಸ್ ಸ್ಪರ್ಧಿ ರವಿ ಬಸವರಾಜ್ ಕರಾಳೆ ಅವರು 24484 ಮತಗಳನ್ನು ಗಳಿಸಿ, ಸೋಲು ಕಂಡರು. 57326ಮತಗಳ (ಶೇ 43.11) ಅಂತರದಿಂದ ಉಮೇಶ್ ಕತ್ತಿ ಜಯ ದಾಖಲಿಸಿದ್ದರು.
ಈ ಬಾರಿ ಕಣದಲ್ಲಿ ಬಿಜೆಪಿಯಿಂದ ಉಮೇಶ್ ಕತ್ತಿ, ಕಾಂಗ್ರೆಸ್ಸಿನಿಂದ ಎ.ಬಿ ಪಾಟೀಲ್ ಹಾಗೂ ಜೆಡಿಎಸ್ ನಿಂದ ಎಂಬಿ ಪಾಟೀಲ ಸ್ಪರ್ಧಿಸುತ್ತಿದ್ದಾರೆ.
ಕಳೆದ ಬಾರಿ ಉಮೇಶ್ ಕತ್ತಿ 81810 ಮತಗಳು (ಶೇ 61.53), ರವಿ ಬಸವರಾಜ್ ಕರಾಳೆ 24484 ಮತಗಳು (ಶೇ 18.41) ಹಾಗೂ ಜೆಡಿಎಸ್ ನ ಬಸವರಾಜ್ ಕಾಶಪ್ಪ ಮಟಗಾರ್ 19501 ಮತಗಳು (ಶೇ 14.67) ಪಡೆದಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications