ಹುಣಸೂರು ಕ್ಷೇತ್ರ ಪರಿಚಯ : ಕಾಂಗ್ರೆಸ್ ತಿಕ್ಕಾಟ, ಜೆಡಿಎಸ್ಸಿಗೆ ಲಾಭ
ಈ ಕ್ಷೇತ್ರದಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿಯಿದ್ದು, ಬಿಜೆಪಿ ಮೂರನೇ ಸ್ಥಾನದಲ್ಲಿದೆ. ಇಲ್ಲಿ ಬಿಜೆಪಿ ಲೆಕ್ಕಕ್ಕುಂಟು ಆಟಕ್ಕಿಲ್ಲ ಎಂಬುವುದರಲ್ಲಿ ಎರಡು ಮಾತಿಲ್ಲ.
ಹಾಲಿ ಶಾಸಕರ ಬಗ್ಗೆ ಇಲ್ಲಿ ಉತ್ತಮ ಅಭಿಪ್ರಾಯವಿದೆ. ಒಕ್ಕಲಿಗ, ದಲಿತರ ಮತಗಳು ಹೆಚ್ಚಿರುವ ಈ ಕ್ಷೇತ್ರದಲ್ಲಿ ತಮ್ಮ ಪುತ್ರನನ್ನು ಕಣಕ್ಕಿಳಿಸಲು ಜಿ.ಟಿ. ದೇವೇಗೌಡ ಪ್ರಯತ್ನ ನಡೆಸಿದ್ದಾರೆ.
ಆದರೆ, ಬಿಜೆಪಿಯು ವಿಜಯ ಶಂಕರ್ ಅವರಿಗೆ ಪಿರಿಯಾ ಪಟ್ಟಣದ ಬದಲಿಗೆ ಇಲ್ಲಿ ಅವಕಾಶ ನೀಡಬಹುದೇ ಎಂಬ ಲೆಕ್ಕಾಚಾರವಿದೆ. ಜತೆಗೆ ಒಂದು ಕಾಲದಲ್ಲಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡು ಈಗ ಜೆಡಿಎಸ್ ನಲ್ಲಿರುವ ಕುರುಬ ಸಮುದಾಯದ ಪ್ರಭಾವಿ ನಾಯಕ ಎಚ್ ವಿಶ್ವನಾಥ್ ಅವರು ಕೂಡಾ ಟಿಕೆಟ್ ಆಕಾಂಕ್ಷಿ.

ಅತ್ತ, ಎಚ್.ಡಿ. ಕೋಟೆಯ ಶಾಸಕ ದಿವಂಗತ ಚಿಕ್ಕಮಾದುಗೂ ತಮ್ಮ ಪುತ್ರನನ್ನು ಇದೇ ಕ್ಷೇತ್ರದಲ್ಲೇ ಕಣಕ್ಕಿಳಿಸಬೇಕು ಎಂದು ಆಶಿಸಿದ್ದರು. ಇದೇ ಕಾರಣಕ್ಕಾಗಿಯೇ ಜಿ.ಟಿ. ದೇವೇಗೌಡ ಹಾಗೂ ಚಿಕ್ಕಮಾದು ಅವರಿಗೂ ಕೊಂಚ ಇರುಸು ಮುರುಸು ಉಂಟಾಗಿತ್ತು ಎಂದು ಹೇಳಲಾಗಿದೆ. ಈಗ ಚಿಕ್ಕಮಾದು ಅವರ ಕುಟುಂಬದಿಂದ ವಿರೋಧ ವ್ಯಕ್ತವಾಗದ ಹಿನ್ನೆಲಯಲ್ಲಿ ಇಲ್ಲಿ ಜೆಡಿಎಸ್ ಜಯಭೇರಿ ಗ್ಯಾರಂಟಿ. ಇದಕ್ಕೆ ಸ.ರಾ. ಮಹೇಶ್ (ಪಕ್ಕದ ಕೆ.ಆರ್. ನಗರ ಕ್ಷೇತ್ರದ ಶಾಸಕ) ಸಾಥ್ ಕೊಟ್ಟರೆ ಅದಿನ್ನೂ ಸುಲಭ ಎನ್ನಲಾಗುತ್ತಿದೆ.
2013ರ ಫಲಿತಾಂಶ: 2013ರಲ್ಲಿ ಶೇ 79.35ರಷ್ಟು ಮತದಾನವಾಗಿತ್ತು. ಇಲ್ಲಿ ಇರುವ ಒಟ್ಟು ಮತದಾರರ ಸಂಖ್ಯೆ 2,07,362. ಪುರುಷ ಮತದಾರರ ಸಂಖ್ಯೆ 1,05,511. ಇನ್ನು, ಮಹಿಳಾ ಮತದಾರರ ಸಂಖ್ಯೆ 1,01,846. ಈ ಕ್ಷೇತ್ರದಲ್ಲಿ 2013ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಎಚ್ .ಪಿ. ಮಂಜುನಾಥ್, 83,930 ಮತಗಳನ್ನು ಗಳಿಸಿದ್ದರು. ಅವರ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ನ ಕುಮಾರಸ್ವಾಮಿ 43,723 ಮತಗಳನ್ನು ಪಡೆದು ಸೋಲು ಕಂಡಿದ್ದರು. ಸುಮಾರು 40, 207(ಶೇ 24.90) ಅಂತರದಿಂದ ಮಂಜುನಾಥ್ ಗೆಲುವು ಸಾಧಿಸಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications