ಇಂಡಿ ಕ್ಷೇತ್ರ: ಸೌಹಾರ್ದ ಕ್ಷೇತ್ರದ ಹೊಣೆ ಯಾರ ಹೆಗಲಿಗೆ?
ಪುಣ್ಯಕ್ಷೇತ್ರವಾಗಿಯೂ ಪ್ರಸಿದ್ಧಿ ಪಡೆದ ಇಂಡಿ ವಿಜಯಪುರ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ.
ಕರ್ನಾಟಕದ ಉತ್ತರದ ಗಡಿಯಲ್ಲಿರುವ ಇಂಡಿಯ ಉತ್ತರಕ್ಕೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ, ಪಶ್ಚಿಮಕ್ಕೆ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ , ದಕ್ಷಿಣಕ್ಕೆ ವಿಜಯಪುರ ತಾಲ್ಲೂಕು ಮತ್ತು ಪೂರ್ವಕ್ಕೆ ಸಿಂದಗಿ ತಾಲ್ಲೂಕುಗಳಿವೆ.
ತೀರಾ ಬಿಸಿಲೂ ಇಲ್ಲದ ಹಿತಕರ ವಾರಾವರಣ ಇಲ್ಲಿರುತ್ತದೆ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ, ಮೆಕ್ಕೆ ಜೋಳ ಬೇಳೆಕಾಳುಗಳನ್ನು ಸಹ ಬೆಳೆಯುತ್ತಾರೆ. ಇಲ್ಲಿನ ಜೋಳದ ರೊಟ್ಟಿ , ಶೇಂಗಾ ಚಟ್ನಿ, ಎಣ್ಣೆ ಬದನೆಕಾಯಿ ಪಲ್ಯ, ಕೆನೆಮೊಸರುಗಳು ಕರ್ನಾಟಕದ ಮೂಲೆ ಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ಇಲ್ಲಿನ ಜನಸಂಖ್ಯೆ 50000. ಅದರಲ್ಲಿ 27000 ಪುರುಷರು ಮತ್ತು 23000 ಮಹಿಳೆಯರು.
ಹಿಂದು ಮತ್ತು ಮುಸ್ಲಿಂ ಮತೀಯರು ಹೆಚ್ಚಿದ್ದಾರೆ. ನಗರದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ. ಶ್ರೀ ಬಂಥನಾಳ ಶಿವಯೋಗಿಗಳು ಮಹಾಸ್ವಾಮಿಜಿಗಳು, ಶಿಂಪಿ ಲಿಂಗಣ್ಣ, ಮಧುರಚೆನ್ನರಂಥ ಕವಿಗಳ ನೆಲೆ ಈ ಇಂಡಿ.

ಪ್ರತಿವರ್ಷ ಇಲ್ಲಿ ನಡೆಯುವ ಶ್ರೀ ಶಾಂತೇಶ್ವರ ಜಾತ್ರಾ ಮಹೋತ್ಸವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳು ಪ್ರಸಿದ್ಧಿ ಪಡೆದಿವೆ. ಜಾತಿ-ಮತದ ಹಂಗಿಲ್ಲದೆ ಈ ಹಬ್ಬಗಳನ್ನು ಸೌಹಅರ್ದ ಭಾವದಿಂದ ಆಚರಿಸಲಾಗುತ್ತದೆ. 2011 ವರ್ಷದ ಪ್ರಕಾರ ಇಲ್ಲಿನ ಸಾಕ್ಷರತೆಯು 67%.
ಕಾಂಗ್ರೆಸ್ ನ ಯಶವಂತ ಗೌಡ ಪಾಟೀಲ ಇಲ್ಲಿನ ಹಾಲಿ ಶಾಸಕರು. ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಪೂರ್ಣಗೊಳಿಸಿದ್ದು ಇವರ ಹೆಗ್ಗಳಿಕೆ. ಇದನ್ನೇ ಈ ಚುನಾವಣೆಗೆ ಪ್ರಚಾರದ ಅಸ್ತ್ರವನ್ನಾಗಿ ಅವರು ಬದಲಿಸಿಕೊಳ್ಳಬಹುದು.
2013 ರ ವಿಧಾನಸಭೆ ಚುನಾವಣೆಯಲ್ಲಿ ಯಶವಂತ ಗೌಡ ಪಾಟೀಲ 58562 ಮತಗಳನ್ನು ಪಡೆದಿದ್ದರೆ, ಕೆಜೆಪಿಯಿಂದ ಸ್ಪರ್ಧಿಸಿದ್ದ ರವಿಕಾಂತ ಗೌಡ ಪಾಟೀಲ 25260 ಮತ ಪಡೆದಿದ್ದರು. ಕಳೆದ ಬಾರಿ ಕೆಜೆಪಿಯಿಂದ ಪ್ರಬಲ ಸ್ಪರ್ಧೆ ನೀಡಿದ್ದ ರವಿಕಾಂತ ಗೌಡ ಪಾಟೀಲ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications