ಕ್ಷೇತ್ರ ಪರಿಚಯ : ಜಗಳೂರಿನ ಜನರು ಯಾರನ್ನು ಆಯ್ಕೆ ಮಾಡಲಿದ್ದಾರೆ?
ಸಣ್ಣ ಬೆಟ್ಟ ಗುಡ್ಡಗಳಿಂದ ಆವೃತವಾಗಿರುವ ಕ್ಷೇತ್ರ ದಾವಣಗೆರೆ ಜಿಲ್ಲೆಯ ಜಗಳೂರು. ಕುಡಿಯುವ ನೀರಿಗಾಗಿ ಜನರು ಇಲ್ಲಿ ಪರದಾಡುವುದು ತಪ್ಪಿಲ್ಲ. ಕ್ಷೇತ್ರದಲ್ಲಿ ಮಳೆ ಕಡಿಮೆ, 7 ರಿಂದ 8 ಕೆರೆಗಳು ಜನರಿಗೆ ಜೀವನಾಧಾರ.
ಮೂಲ ಸೌಕರ್ಯಗಳು ಇನ್ನೂ ಅಭಿವೃದ್ಧಿಯಾಗಬೇಕಿದೆ. ಈ ಕ್ಷೇತ್ರ ದಾವಣಗೆರೆ ಜಿಲ್ಲೆಗೆ ಸೇರಿದ್ದರೂ ಜನರು ಹೆಚ್ಚಾಗಿ ಅವಲಂಬಿಸಿರುವುದು ಚಿತ್ರದುರ್ಗವನ್ನು.
ಕ್ಷೇತ್ರದ ಕಪ್ಪು ಬಣ್ಣದ ಒಂದಷ್ಟು ಭೂಮಿ ಫಲವತ್ತಾಗಿದೆ. ಜೋಳ. ಹತ್ತಿ, ರಾಗಿ ಮುಂತಾದ ಬೆಳೆ ಬೆಳೆಯಲಾಗುತ್ತದೆ. ಉಳಿದ ಭಾಗ ಕೃಷಿಗೆ ಯೋಗ್ಯವಲ್ಲ.

ರಾಜಕೀಯವಾಗಿ ಕಾಂಗ್ರೆಸ್ ವಶದಲ್ಲಿರುವ ಕ್ಷೇತ್ರ ಜಗಳೂರು. ಎಚ್.ಬಿ.ರಾಜೇಶ್ ಹಾಲಿ ಶಾಸಕರು. ಜೆಡಿಎಸ್ನ ಜಿ.ರಂಗಯ್ಯ, ಬಿಜೆಪಿಯ ಅರುಣ್ ಕುಮಾರ್, ಎಸ್.ವಿ.ರಾಮಚಂದ್ರ ಪ್ರಮುಖ ನಾಯಕರುಗಳು.
2013ರ ಚುನಾವಣೆಯಲ್ಲಿ ಯಡಿಯೂರಪ್ಪ ಆಪ್ತರಾಗಿರುವ ಎಸ್.ವಿ.ರಾಮಚಂದ್ರ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರಿಂದಾಗಿ ಬಿಜೆಪಿ ಅಭ್ಯರ್ಥಿ ಡಾ.ಅರುಣ್ ಕುಮಾರ್ ಠೇವಣಿ ಕಳೆದುಕೊಂಡಿದ್ದರು.
ಈ ಬಾರಿಯ ಚುನಾವಣೆಯಲ್ಲಿಯೂ ಜೆಡಿಎಸ್ನ ಜಿ.ರಂಗಯ್ಯ, ಕಾಂಗ್ರೆಸ್ನಿಂದ ಎಚ್.ಬಿ.ರಾಜೇಶ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಆದರೆ, ಬಿಜೆಪಿಯಿಂದ ಅರುಣ್ ಕುಮಾರ್, ಎಸ್.ವಿ.ರಾಮಚಂದ್ರ ಯಾರು ಅಭ್ಯರ್ಥಿ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಆಂಜನೇಯ ಅವರು ಪಕ್ಕದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಪ್ರಯತ್ನ ನಡೆಸಬಹುದು. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಪಕ್ಷ ಗೆಲ್ಲಿಸಲು ತಂತ್ರ ರೂಪಿಸಬಹುದು.
2013ರ ಚುನಾವಣೆಯಲ್ಲಿ ಎಚ್.ಪಿ.ರಾಜೇಶ್ 77,805 ಮತ, ಕೆಜೆಪಿಯ ಎಸ್.ವಿ.ರಾಮಚಂದ್ರ 40,915 ಮತ, ಜೆಡಿಎಸ್ನ ಡಾ.ಜಿ.ರಂಗಯ್ಯ 4,325 ಮತಗಳನ್ನು ಪಡೆದಿದ್ದರು. ಬಿಜೆಪಿಯ ಡಾ.ಅರುಣ್ ಕುಮಾರ್ ಪಡೆದಿದ್ದ ಮತಗಳು ಕೇವಲ 1,845.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications