ಕ್ಷೇತ್ರ ಪರಿಚಯ : ಜಮಖಂಡಿ ಗೆಲ್ಲಲು ಮೂರು ಪಕ್ಷಗಳ ತಯಾರಿ
ಬಾಗಲಕೋಟೆ ಜಿಲ್ಲೆಯ ತಾಲೂಕು ಕೇಂದ್ರ ಜಮಖಂಡಿ. ಕ್ಷೇತ್ರದಲ್ಲಿರುವ ಪುರಾತನ ಜಂಬುಕೇಶ್ವರ ದೇವಾಲಯಕ್ಕೂ ಜಮಖಂಡಿ ಎಂಬ ಹೆಸರಿಗೂ ನಂಟಿದೆ. ಟಿಪ್ಪು ಸುಲ್ತಾನನ್ನು ಯುದ್ಧದಲ್ಲಿ ಸೋಲಿಸಿದ ಬಳಿಕ ಜಮಖಂಡಿ ಸಂಸ್ಥಾನ ಪ್ರಸಿದ್ಧಿಗೆ ಬಂತು ಎಂದು ಇತಿಹಾಸ ಹೇಳುತ್ತದೆ.
ರಾಜಕೀಯವಾಗಿ ಜಮಖಂಡಿ ಕ್ಷೇತ್ರದ ಶಾಸಕ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಿದ್ದುನ್ಯಾಮಗೌಡ. 'ಬ್ಯಾರೇಜ ಸಿದ್ದು' ಎಂದೆ ಪ್ರಖ್ಯಾತಿ ಪಡೆದವರು. ರೈತರಿಗಾಗಿ ರೈತರಿಂದ ಹಣ ಸಂಗ್ರಹಿಸಿ ದೇಶದಲ್ಲೇ ಮಾದರಿ ಬ್ಯಾರೇಜ್ ನಿರ್ಮಿಸಿ ರೈತರ ಪರವಾಗಿ ನಿಂತವರು.
ಶಾಸಕರು ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಆದರೆ, ಈ ಬಾರಿಯೂ ಸಿದ್ದು ನ್ಯಾಮಗೌಡರೇ ಅಭ್ಯರ್ಥಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿಯಾಗಿದೆ.

ಸಿದ್ದು ನ್ಯಾಮಗೌಡ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಬ್ಯಾರೇಜ್ ನಿರ್ಮಾಣದ ವರ್ಚಸ್ಸು ಇವರನ್ನು ಮತ್ತೆ ಗೆಲುವಿನ ನಗೆ ಬೀರುವಂತೆ ಮಾಡಲಿದೆ ಎಂಬುದು ಲೆಕ್ಕಾಚಾರ. ಜೊತೆಗೆ ಇಅವರು ಪ್ರಬಲ ಲಿಂಗಾಯತ ಸಮುದಾಯದ ಮುಖಂಡರು ಹೌದು.
ಕಳೆದ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡ ಅವರಿಗೆ ಬಿಜೆಪಿಗಿಂತ ದೊಡ್ಡ ಸ್ಪರ್ಧೆ ಕೊಟ್ಟವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜಗದೀಶ ಗುಡಗುಂಟಿ. ಅವರು 27,993 ಮತಗಳನ್ನು ಪಡೆದಿದ್ದರು. ಬಿಜೆಪಿಯ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು.
ಈ ಬಾರಿ ಬಿಜೆಪಿ ಟಿಕೆಟ್ಗೆ ಹಲವು ಆಕಾಂಕ್ಷಿಗಳಿದ್ದಾರೆ. ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಸಹೋದರ ಸಂಗಮೇಶ ನಿರಾಣಿ ಟಿಕೆಟ್ ಆಕಾಂಕ್ಷಿ. ಚುನಾವಣೆಗಳು ಬರುವ ಒಂದು ವರ್ಷದ ಮೊದಲೇ ನಿರಾಣಿ ಫೌಂಡೇಶನ್ ಮೂಲಕ ಸಂಘಟನೆ ಆರಂಭಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಆದರೆ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹಿರಿಯ ಮುಖಂಡ, ಬಿಜೆಪಿ ಹೈಕಮಾಂಡ್ ವರೆಗೂ ವರ್ಚಸ್ಸು ಇಟ್ಟು ಕೊಂಡಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಈ ಭಾಗದಲ್ಲಿ ಬ್ರಾಹ್ಮಣ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ ಒಬ್ಬರೇ. ಆದ್ದರಿಂದ, ಈ ಬಾರಿ ಅವರೇ ಅಭ್ಯರ್ಥಿ ಎಂಬ ಸುದ್ದಿ ಹಬ್ಬಿದೆ. ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸಲು ಸಂಗಮೇಶ ನಿರಾಣಿ ತಯಾರಿ ನಡೆಸಿದ್ದಾರೆ.
ಕಳೆದ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದ ಜಗದೀಶ ಗುಡಗುಂಟಿ ಅವರಿಗೆ ಜೆಡಿಎಸ್ ಗಾಳ ಹಾಕುತ್ತಿದೆ. ಈ ಬಾರಿ ಬಿಜೆಪಿಯಲ್ಲಿನ ಟಿಕೆಟ್ ಗೊಂದಲದಿಂದ ಕಾಂಗ್ರೆಸ್ ಮತ್ತೆ ಜಯಭೇರಿ ಬಾರಿಸಲಿದೆ ಎಂಬುದು ಸದ್ಯದ ಲೆಕ್ಕಾಚಾರ.
2013ರ ವಿಧಾನಸಭೆ ಚುನಾವಣೆ ಫಲಿತಾಂಶ
* ಸಿದ್ದು ನ್ಯಾಮಗೌಡ : 49,145 ಮತ
* ಜಗದೀಶ ಗುಡಗುಂಟಿ (ಪಕ್ಷೇತರ) : 27,993
* ಶ್ರೀಕಾಂತ ಕುಲಕರ್ಣಿ (ಬಿಜೆಪಿ) : 20,982
ಗೆಲುವಿನ ಅಂತರ : 21,152
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications