ಕಾಗವಾಡ ಕ್ಷೇತ್ರ ಪರಿಚಯ: ವಲಸಿಗರದ್ದೇ ಇಲ್ಲಿ ದರ್ಬಾರು!
ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದಲ್ಲಿ ವಲಸಿಗರದ್ದೇ ಮೊದಲಿನಿಂದಲೂ ದರ್ಬಾರು. ಜನತಾದಳದಲ್ಲಿದ್ದು ಬಿಜೆಪಿಗೆ ಬಂದಿರುವ ಕಾಗೆ ಅವರು ನಾಲ್ಕನೆ ಬಾರಿಗೆ ಅದೃಷ್ಟ ಪರೀಕ್ಷೆ ನಡೆಸಿದ್ದಾರೆ.
2000ರಲ್ಲಿ ಜೆಡಿಯುನಿಂದ ಸ್ಪರ್ಧಿಸಿದ್ದ ರಾಜು ಕಾಗೆ ಅವರು ಕಾಂಗ್ರೆಸ್ಸಿನ ವಿಜಯಾ ಪಾಸಗೌಡ ವಿರುದ್ಧ 1019 ಮತಗಳಿಂದ ಅಚ್ಚರಿಯ ಜಯ ದಾಖಲಿಸಿದ್ದರು. 2004ರಲ್ಲಿ ಕಾಂಗ್ರೆಸ್ಸಿನ ಕಿರಣ್ ಕುಮಾರ್ ಪಾಟೀಲ್ ವಿರುದ್ಧ 9895 ಮತಗಳ ಅಂತರದಿಂದ ಜಯ ಗಳಿಸಿದ್ದರು. 2008ರಲ್ಲಿ ಕಾಂಗ್ರೆಸ್ಸಿನ ದಿಗ್ವಿಜಯ್ ಪವಾರ್ ದೇಸಾಯಿ ಅವರನ್ನು 8982 ಅಂತರದಿಂದ ಸೋಲಿಸಿ ಹ್ಯಾಟ್ರಿಕ್ ಸಾಧಿಸಿದರು.
ಸಮಸ್ಯೆಗಳ ಆಗರ: ಜೀವನದಿ ಕೃಷ್ಣೆ ಬತ್ತಿ ಹೋಗುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ, ವಿದ್ಯುತ್ ಕ್ಷಾಮಕ್ಕೆ ಪರಿಹಾರ ಸಿಕ್ಕಿಲ್ಲ. ಭೀಕರ ಬರಗಾಲಕ್ಕೆ ತುತ್ತಾಗಿರುವ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಗಳು ಮಂಜೂರಾದರೂ ಸಂಪೂರ್ಣ ಅನುಷ್ಠಾನಗೊಂಡಿಲ್ಲ. ಖಿಳೇಗಾಂವದ ಬಸವೇಶ್ವರ ಏತ ನೀರಾವರಿ, ಕೆರೆಗಳ ಅಭಿವೃದ್ಧಿ, ಉಚಿತ ವಿದ್ಯುತ್ ಯೋಜನೆ ಅನುಷ್ಠಾನ ಆಗದಿರುವುದು, ಅಕ್ಕ ಪಕ್ಕದ ತಾಲೂಕುಗಳ ಹಲವು ಗ್ರಾಮಗಳಿಗೆ ಸರಿಯಾದ ಸಾರಿಗೆ ಸಂಪರ್ಕ ಇಲ್ಲದಿರುವುದು ಕ್ಷೇತ್ರದ ಜನತೆಯನ್ನು ಕಾಡುತ್ತಿದೆ.

2013ರ ಫಲಿತಾಂಶ:
ಕಾಗವಾಡದಲ್ಲಿ 2013ರಲ್ಲಿ 14 ಮಂದಿ ನಾಮಪತ್ರ ಸಲ್ಲಿಸಿದ್ದರು. 3 ಮಂದಿ ನಾಮಪತ್ರ ಹಿಂಪಡೆದರು. 11 ಮಂದಿ ಸ್ಪರ್ಧಿಗಳ ಪೈಕಿ 8 ಮಂದಿ ಠೇವಣಿ ಕಳೆದುಕೊಂಡರು.
ಒಟ್ಟು 78.69 ಮತದಾನವಾಗಿದ್ದು, 129200 ಮತಗಳ ಪೈಕಿ ಬಿಜೆಪಿಯ ಅಭ್ಯರ್ಥಿ ಭರಮಗೌಡ ಅಳಗೌಡ ಕಾಗೆ ಅವರು 41784 ಮತಗಳನ್ನು ಗಳಿಸಿ ಜಯ ಸಾಧಿಸಿದರು. ಜೆಡಿಎಸ್ ನ ಶ್ರೀಮಂತ ಬಾಳಾಸಾಹೇಬ್ ಪಾಟೀಲ್ ಅವರು 38897 ಮತಗಳನ್ನು ಗಳಿಸಿ ಸೋಲು ಕಂಡಿದ್ದರು. ಕೇವಲ 2887 ಮತಗಳ (ಶೇ2.23) ಅಂತರದಿಂದ ಜಯ ದಾಖಲಿಸಿದ್ದರು.
ತ್ರಿಕೋನ ಸ್ಪರ್ಧೆ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಂಡು ಬಂದಿದ್ದ ತೀವ್ರ ಪೈಪೋಟಿ ಈ ಬಾರಿ ಕೂಡಾ ರಿಪೀಟ್ ಆಗುವ ಲಕ್ಷಣಗಳು ಕಂಡು ಬಂದಿದೆ. ಲಿಂಗಾಯತ, ಜೈನ, ಮರಾಠಾ ಅಭ್ಯರ್ಥಿಗಳ ಹಣೆಬರಹವನ್ನು ಕುರುಬ, ಮುಸ್ಲಿಮ್, ಪರಿಶಿಷ್ಟ ಜಾತಿ ಹಾಗೂ ಪಂಗಡವರು ನಿರ್ಧರಿಸಲಿದ್ದಾರೆ.
ಬಿಜೆಪಿಯ ಭರಮಗೌಡ ಕಾಗೆ 41784 ಮತಗಳು(ಶೇ 32.34), ಜೆಡಿಎಸ್ ನ ಶ್ರೀಮಂತ ಬಾಳಾಸಾಹೇಬ್ ಪಾಟೀಲ್ 38897 ಮತಗಳು (ಶೇ 30.11) ಹಾಗೂ ಕಾಂಗ್ರೆಸ್ಸಿನ ಕಿರಣ್ ಕುಮಾರ್ ತಾತ್ಯಾಗೌಡ ಪಾಟೀಲ್ 33057 (ಶೇ25.59) ಮತಗಳನ್ನು ಗಳಿಸಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications