ಕ್ಷೇತ್ರ ಪರಿಚಯ: ಕಲಬುರಗಿ ದಕ್ಷಿಣದಲ್ಲಿ ಬಿಜೆಪಿ ಗೆಲುವು ನಿಚ್ಛಳ
2008ರಲ್ಲಿ ಈ ಕ್ಷೇತ್ರವನ್ನು ಹೊಸದಾಗಿ ಸೃಷ್ಟಿ ಮಾಡಲಾಯಿತು. ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಹಳೆಯ ಗುಲ್ಬರ್ಗಾ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತಿದ್ದ ಬಿಜೆಪಿಯ ಚಂದ್ರಶೇಖರ್ ಪಾಟೀಲ್ ರೇವೂರ ಕಲಬುರಗಿ ದಕ್ಷಿಣ ಕ್ಷೇತ್ರಕ್ಕೆ ಬಂದು ಬಿಜೆಪಿಯಿಂದ ಸ್ಪರ್ಧಿಸಿ ಜಯ ಸಾಧಿಸಿದರು.
2010ರಲ್ಲಿ ಅವರು ಸಾವನ್ನಪ್ಪಿದ್ದರಿಂದ ಮರು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಬಿಜೆಪಿಯ ಶಶೀಲ್ ಜಿ. ನಮೋಜಿಯವರಿಗೆ ಟಿಕೆಟ್ ನೀಡಿದರೆ ಜೆಡಿಎಸ್ ಚಂದ್ರಶೇಖರ್ ಪಾಟೀಲ್ ಪತ್ನಿ ಅರುಣಾ ಪಾಟೀಲ್ ಗೆ ಟಿಕೆಟ್ ನೀಡಿ ಅನುಕಂಪದ ಅಲೆಯಲ್ಲಿ ಗೆಲುವಿನ ಬಾವುಟ ಹಾರಿಸಿತು.
2013ರ ಹೊತ್ತಿಗೆ ರಾಜ್ಯವ್ಯಾಪಿ ಆಡಳಿತ ವಿರೋಧಿ ಅಲೆ ಬಲವಾಗಿ ಬೀಸುತ್ತಿದ್ದರೂ ಮರಳಿ ಕಲಬುರಗಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.

ಈ ಚುನಾವಣೆಯಲ್ಲಿ ಜೆಡಿಎಸ್ ಅರುಣಾ ಪಾಟೀಲ್ ಪುತ್ರ ದತ್ತಾತ್ರೇಯ ಪಾಟೀಲ್ ರೇವೂರಗೆ ಟಿಕೆಟ್ ನೀಡಿತ್ತು. ಆದರೆ ಕೊನೆಯ ಕ್ಷಣದಲ್ಲಿ ಜೆಡಿಎಸ್ ಗೆ ಕೈ ಕೊಟ್ಟು ದತ್ತಾತ್ರೇಯ ಪಾಟೀಲ್ ರೇವೂರ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿಯ ಹಳೆ ಹುಲಿ ಶಶೀಲ್ ಜಿ. ನಮೋಶಿ ಜೆಡಿಎಸ್ ನಿಂದ ಕಣಕ್ಕಿಳಿದಿದ್ದರು. ಆದರೆ ಅವರು 10 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಕಾಣಬೇಕಾಯಿತು.
ಹಾಗೆ ನೋಡಿದರೆ ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿ ಹಿಡಿತ ಹೊಂದಿರುವ ಏಕೈಕ ಕ್ಷೇತ್ರ ಕಲಬುರಗಿ ದಕ್ಷಿಣ. ಕಳೆದ ಬಾರಿ ಇಲ್ಲಿ ಹಿರಿಯ ರಾಜಕಾರಣಿ ಎಸ್.ಕೆ ಕಾಂತ ಕೆಜೆಪಿಯಿಂದ ಕಣಕ್ಕಿಳಿದು 22 ಸಾವಿರ ಮತ ಪಡೆದಾಗಲೂ ಬಿಜೆಪಿ ಅಭ್ಯರ್ಥಿ ಇಲ್ಲಿ ಗೆದ್ದಿದ್ದೇ ಇದಕ್ಕೆ ಸಾಕ್ಷಿ.
ಜತೆಗೆ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ರಾಜಕಾರಣಿಗಳಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ದಿವಂಗತ ಧರಂ ಸಿಂಗ್ ಇಮೇಜ್ ನ ಮಧ್ಯೆಯೂ ಕಾಂಗ್ರೆಸ್ ಗೆ ಇಲ್ಲಿ ಒಮ್ಮೆಯೂ ಗೆದ್ದಿಲ್ಲ ಎನ್ನುವುದೂ ಅಷ್ಟೇ ಸತ್ಯ.
ಸದ್ಯ ಶಶೀಲ್ ಜಿ. ನಮೋಜಿ ಬಿಜೆಪಿಗೆ ಮರಳಿದ್ದಾರೆ. ಕೆಜೆಪಿ-ಬಿಜೆಪಿ ಒಂದಾಗಿದೆ. ಇನ್ನೊಂದು ಕಡೆ ಶಶೀಲ್ ಜಿ. ನಮೋಶಿ ನಿರ್ಗಮನದಿಂದ ಜೆಡಿಎಸ್ ಕೂಡ ಅಭ್ಯರ್ಥಿ ಕಳೆದುಕೊಂಡು ಇಲ್ಲಿ ದುರ್ಬಲವಾಗಿದೆ.
ಹೀಗೆ ಎಲ್ಲಾ ಕೋನಗಳಿಂದ ನೋಡಿದರೂ ಇಲ್ಲಿ ಈ ಬಾರಿಯೂ ಬಿಜೆಪಿ ಗೆಲುವಿನ ಬಾವುಟ ಹಾರಿಸುವ ಸಾಧ್ಯತೆಗಳೇ ಹೆಚ್ಚಾಗಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications