ಕ್ಷೇತ್ರ ಪರಿಚಯ: ಕಲಬುರಗಿ ದಕ್ಷಿಣದಲ್ಲಿ ಬಿಜೆಪಿ ಗೆಲುವು ನಿಚ್ಛಳ
2008ರಲ್ಲಿ ಈ ಕ್ಷೇತ್ರವನ್ನು ಹೊಸದಾಗಿ ಸೃಷ್ಟಿ ಮಾಡಲಾಯಿತು. ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಹಳೆಯ ಗುಲ್ಬರ್ಗಾ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತಿದ್ದ ಬಿಜೆಪಿಯ ಚಂದ್ರಶೇಖರ್ ಪಾಟೀಲ್ ರೇವೂರ ಕಲಬುರಗಿ ದಕ್ಷಿಣ ಕ್ಷೇತ್ರಕ್ಕೆ ಬಂದು ಬಿಜೆಪಿಯಿಂದ ಸ್ಪರ್ಧಿಸಿ ಜಯ ಸಾಧಿಸಿದರು.
2010ರಲ್ಲಿ ಅವರು ಸಾವನ್ನಪ್ಪಿದ್ದರಿಂದ ಮರು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಬಿಜೆಪಿಯ ಶಶೀಲ್ ಜಿ. ನಮೋಜಿಯವರಿಗೆ ಟಿಕೆಟ್ ನೀಡಿದರೆ ಜೆಡಿಎಸ್ ಚಂದ್ರಶೇಖರ್ ಪಾಟೀಲ್ ಪತ್ನಿ ಅರುಣಾ ಪಾಟೀಲ್ ಗೆ ಟಿಕೆಟ್ ನೀಡಿ ಅನುಕಂಪದ ಅಲೆಯಲ್ಲಿ ಗೆಲುವಿನ ಬಾವುಟ ಹಾರಿಸಿತು.
2013ರ ಹೊತ್ತಿಗೆ ರಾಜ್ಯವ್ಯಾಪಿ ಆಡಳಿತ ವಿರೋಧಿ ಅಲೆ ಬಲವಾಗಿ ಬೀಸುತ್ತಿದ್ದರೂ ಮರಳಿ ಕಲಬುರಗಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.

ಈ ಚುನಾವಣೆಯಲ್ಲಿ ಜೆಡಿಎಸ್ ಅರುಣಾ ಪಾಟೀಲ್ ಪುತ್ರ ದತ್ತಾತ್ರೇಯ ಪಾಟೀಲ್ ರೇವೂರಗೆ ಟಿಕೆಟ್ ನೀಡಿತ್ತು. ಆದರೆ ಕೊನೆಯ ಕ್ಷಣದಲ್ಲಿ ಜೆಡಿಎಸ್ ಗೆ ಕೈ ಕೊಟ್ಟು ದತ್ತಾತ್ರೇಯ ಪಾಟೀಲ್ ರೇವೂರ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿಯ ಹಳೆ ಹುಲಿ ಶಶೀಲ್ ಜಿ. ನಮೋಶಿ ಜೆಡಿಎಸ್ ನಿಂದ ಕಣಕ್ಕಿಳಿದಿದ್ದರು. ಆದರೆ ಅವರು 10 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಕಾಣಬೇಕಾಯಿತು.
ಹಾಗೆ ನೋಡಿದರೆ ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿ ಹಿಡಿತ ಹೊಂದಿರುವ ಏಕೈಕ ಕ್ಷೇತ್ರ ಕಲಬುರಗಿ ದಕ್ಷಿಣ. ಕಳೆದ ಬಾರಿ ಇಲ್ಲಿ ಹಿರಿಯ ರಾಜಕಾರಣಿ ಎಸ್.ಕೆ ಕಾಂತ ಕೆಜೆಪಿಯಿಂದ ಕಣಕ್ಕಿಳಿದು 22 ಸಾವಿರ ಮತ ಪಡೆದಾಗಲೂ ಬಿಜೆಪಿ ಅಭ್ಯರ್ಥಿ ಇಲ್ಲಿ ಗೆದ್ದಿದ್ದೇ ಇದಕ್ಕೆ ಸಾಕ್ಷಿ.
ಜತೆಗೆ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ರಾಜಕಾರಣಿಗಳಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ದಿವಂಗತ ಧರಂ ಸಿಂಗ್ ಇಮೇಜ್ ನ ಮಧ್ಯೆಯೂ ಕಾಂಗ್ರೆಸ್ ಗೆ ಇಲ್ಲಿ ಒಮ್ಮೆಯೂ ಗೆದ್ದಿಲ್ಲ ಎನ್ನುವುದೂ ಅಷ್ಟೇ ಸತ್ಯ.
ಸದ್ಯ ಶಶೀಲ್ ಜಿ. ನಮೋಜಿ ಬಿಜೆಪಿಗೆ ಮರಳಿದ್ದಾರೆ. ಕೆಜೆಪಿ-ಬಿಜೆಪಿ ಒಂದಾಗಿದೆ. ಇನ್ನೊಂದು ಕಡೆ ಶಶೀಲ್ ಜಿ. ನಮೋಶಿ ನಿರ್ಗಮನದಿಂದ ಜೆಡಿಎಸ್ ಕೂಡ ಅಭ್ಯರ್ಥಿ ಕಳೆದುಕೊಂಡು ಇಲ್ಲಿ ದುರ್ಬಲವಾಗಿದೆ.
ಹೀಗೆ ಎಲ್ಲಾ ಕೋನಗಳಿಂದ ನೋಡಿದರೂ ಇಲ್ಲಿ ಈ ಬಾರಿಯೂ ಬಿಜೆಪಿ ಗೆಲುವಿನ ಬಾವುಟ ಹಾರಿಸುವ ಸಾಧ್ಯತೆಗಳೇ ಹೆಚ್ಚಾಗಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications