ಕ್ಷೇತ್ರ ಪರಿಚಯ: ಕಲಬುರಗಿ ಉತ್ತರದಲ್ಲಿ ಕೈ-ಕಮಲ ಪೈಪೋಟಿ
ಕಲಬುರಗಿ ನಗರ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರವಿದು. ನಗರ ಪ್ರದೇಶಗಳನ್ನೇ ಇದು ಒಳಗೊಂಡಿದೆ.
ಖಮರುಲ್ ಇಸ್ಲಾಂ ಕಲಬುರಗಿ ಉತ್ತರ ಕ್ಷೇತ್ರದ ಶಾಸಕರಾಗಿದ್ದರು. ಸದ್ಯ ಅವರ ನಿಧನದಿಂದ ಕಲಬುರಗಿ ಉತ್ತರದಲ್ಲಿ ಶಾಸಕರಿಲ್ಲ.
1978ರಿಂದ ಕಲಬುರಗಿ (ಈಗಿನ ಕಲಬುರಗಿ ಉತ್ತರ ಕ್ಷೇತ್ರವಿರಲಿಲ್ಲ) ಯಲ್ಲಿ ಚುನಾವಣೆಗೆ ನಿಲ್ಲುತ್ತಾ ಬಂದಿದ್ದ ಖಮರುಲ್ ಇಸ್ಲಾಂ ಕ್ಷೇತ್ರದ ಮೇಲೆ ತಮ್ಮ ಪಾರಮ್ಯ ಮೆರೆಯುತ್ತಾ ಬಂದಿದ್ದರು.
1978ರಲ್ಲೇ ಆಗಿನ ಗುಲ್ಬರ್ಗಾ ಕ್ಷೇತ್ರದಲ್ಲಿ ಖಮರುಲ್ ಇಸ್ಲಾಂ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆಲುವು ಸಾಧಿಸಿದ್ದರು. ಮುಂದೆ 1983 ಮತ್ತು 1985ರಲ್ಲಿ ಜನತಾ ಪಕ್ಷದಿಂದ ಕಣಕ್ಕಿಳಿದಿದ್ದ ಎಸ್.ಕೆ ಕಾಂತಾ ವಿರುದ್ಧ ಸೋಲು ಕಂಡಿದ್ದರು. ನಂತರ 1989ರಲ್ಲಿ ಜನತಾದಳದಿಂದ ಕಣಕ್ಕಿಳಿದಿದ್ದ ಎಸ್.ಕೆ ಕಾಂತಾರನ್ನು ಖಮರುಲ್ ಇಸ್ಲಾಂ ಸೋಲಿಸಿ ಮತ್ತೆ ವಿಧಾನಸಭೆ ಪ್ರವೇಶಿಸಿದ್ದರು. ಈ ಬಾರಿ ಅವರು ಮುಸ್ಲಿಂ ಲೀಗ್ ನಿಂದ ಕಣಕ್ಕಿಳಿದಿದ್ದರು.

ಮುಂದೆ 1994ರಲ್ಲಿ ಇಂಡಿಯನ್ ನ್ಯಾಷನಲ್ ಲೀಗ್, 1999ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಖಮರುಲ್ ಶಾಸಕರಾದರು. ಆದರೆ ಆ ವೇಳೆಗಾಗಲೇ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬೇರುಗಳನ್ನು ಇಳಿ ಬಿಟ್ಟಿತ್ತು. ಹೀಗಾಗಿ 2004ರಲ್ಲಿ ಬಿಜೆಪಿಯ ಚಂದ್ರಶೇಖರ್ ಪಾಟೀಲ್ ರೇವೂರ ಎದುರು ಸೋಲು ಕಂಡರು.
2008ರಲ್ಲಿ ಕ್ಷೇತ್ರ ಮರು ವಿಂಗಡಣೆಯಾದ ನಂತರ ಕಲಬುರಗಿ ಉತ್ತರ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಈ ವೇಳೆ ಮತ್ತೆ ಖಮರುಲ್ ಇಸ್ಲಾಂಗೆ ಮತ್ತೆ ವಿಧಾನಸಭೆ ಪ್ರವೇಶಿಸುವ ಭಾಗ್ಯ ಒಲಿದು ಬಂತು. 2013ರಲ್ಲೂ ಖಮರುಲ್ ಇಸ್ಲಾಂ ಮತ್ತೆ ಜಯಶಾಲಿಯಾಗುವುದರೊಂದಿಗೆ ಆರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಈ ಬಾರಿ ಅವರು ಕೆಜೆಪಿ ಅಭ್ಯರ್ಥಿಯನ್ನು 20 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದರು.
ಒಮ್ಮೆ ಲೋಕಸಭೆಗೂ ಪ್ರವೇಶಿಸಿರುವ ಅನುಭವಿ ರಾಜಕಾರಣಿ, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 2016ರಲ್ಲಿಅವರನ್ನು ಸಂಪುಟದಿಂದ ಕೈ ಬಿಡಲಾಯಿತು. ಹಿರಿಯ ಖಮರುಲ್ ಇಸ್ಲಾಂ ನಿಧನದಿಂದ ಕಲಬುರಗಿಯಲ್ಲಿ ಕಾಂಗ್ರೆಸ್ ತನ್ನ ನಾಯಕನನ್ನು ಕಳೆದುಕೊಂಡಿದೆ. ಹೀಗಾಗಿ ಯಾರನ್ನು ಈ ಬಾರಿ ಕಣಕ್ಕಿಳಿಸಲಿದೆ ಎಂಬುದು ಕುತೂಹಲ ಹುಟ್ಟಿಸಿದೆ.
ಇಲ್ಲಿ ವರ್ಷದಿಂದ ವರ್ಷಕ್ಕೆ ಬಿಜೆಪಿ ತನ್ನ ಮತಗಳಿಕೆ ಹೆಚ್ಚಿಸುತ್ತಾ ಬಂದಿರುವುದನ್ನು ಕಾಣಬಹುದು. ಕ್ಷೇತ್ರದಲ್ಲಿ ಜೆಡಿಎಸ್ ಗೆ ನೆಲೆ ಇಲ್ಲ. ಹಾಗಾಗಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಇಲ್ಲಿ ಮುಸ್ಲಿಂ ಮತದಾರರು ಹೆಚ್ಚಿದ್ದು, ಅವರ ಮತಗಳೇ ನಿರ್ಣಾಯಕವಾಗಿವೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications