ಕಲಘಟಗಿ ಕ್ಷೇತ್ರ: ಸಂತೋಷ್ ಲಾಡ್ ಗೆ ಸೆಡ್ಡು ಹೊಡೆಯಬಲ್ಲವರ್ಯಾರು?
ಅಕ್ಕಿ ಅಂದ್ರೆ ಕಲಘಟಗಿ ಅಕ್ಕಿ ಎಂಬ ಖ್ಯಾತಿಗೆ ಪಾತ್ರವಾದ ಕಲಘಟಗಿ ವಿಧಾನಸಭಾ ಕ್ಷೇತ್ರ ಧಾರವಾಡ ಜಿಲ್ಲೆಯ ಪ್ರಮುಖ ತಾಲೂಕು ಕೇಂದ್ರ.
ಸಾಕ್ಷರರ ಸಂಖ್ಯೆ ಇಲ್ಲಿ ಶೇ.62 ಇದ್ದರೂ, ಮಹಿಳಾ ಸಾಕ್ಷರತೆಯ ವಿಷಯದಲ್ಲಿ ಸಾಕಷ್ಟು ಹಿಂದಿದೆ.
ಕೃಷಿಯನ್ನೇ ಮುಖ್ಯ ಕಸುಬನ್ನಾಗಿ ನಂಬಿರುವ ಇಲ್ಲಿ ಕಂದು ಬಣ್ಣ ಮಿಶ್ರಿತ ಮಸಾರಿ ಭೂಮಿಯಿದೆ. ಬತ್ತ ಇಲ್ಲಿಯ ಮುಖ್ಯ ಬೆಳೆ. ಕೃಷಿ ಬಿಟ್ಟರೆ ಕೈಗಾರಿಗೆಗಳನ್ನೆಲ್ಲ ನಂಬಿಕೊಂಡವರ ಸಮಖ್ಯೆ ಕಡಿಮೆಯೇ.
ಇಲ್ಲಿನ ಅವಲಕ್ಕಿ ಚುರಮುರಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಇಲ್ಲಿನ ಮರದ ಬಣ್ಣದ ತೊಟ್ಟಿಲುಗಳು ಒಂದು ಕಾಲಕ್ಕೆ ತುಂಬ ಪ್ರಸಿದ್ಧಿ ಪಡೆದಿದ್ದವು.

ಇಲ್ಲಿ ಲಿ೦ಗಾಯತ (ವೀರಶೈವ), ಜೈನ್, ಮುಸ್ಲಿಮ್, ಕ್ರೈಸ್ತ್, ಮರಾಠಾ, ಬ್ರಾಹ್ಮಣ ಮುಂತಾದ ಎಲ್ಲ ಜಾತಿ-ಮತದ ಜನರೂ ಇಲ್ಲಿ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಇಲ್ಲಿನ ಮುಖ್ಯ ಭಾಷೆ ಕನ್ನಡ.
ಇಲ್ಲಿನ ರಾಜಕೀಯದ ಬಗ್ಗೆ ಯೋಚಿಸುವುದಾದರೆ, ಗಣಿ ಉದ್ಯಮಿ ಕಾಂಗ್ರೆಸ್ ನ ಸಂತೋಷ್ ಲಾಡ್ ಇಲ್ಲಿ ತಮ್ಮ ಸಾಮ್ರಾಜ್ಯ ಸ್ಥಾಪಿಸಿದ್ದಾರೆ. ಮರಾಠಾ ಸಮುದಾಯಕ್ಕೆ ಸೇರಿರುವ ಸಂತೋಷ್ ಲಾಡ್ ಈ ಕ್ಷೇತ್ರದಲ್ಲಿ ತಮ್ಮ ಸ್ವಂತ ಹಣದಿಂದ ಹಲವಾರು ಸಾಮಾಜಿಕ, ಶೈಕ್ಷಣಿಕ, ಮತ್ತು ಧಾರ್ಮಿಕ ಕೆಲಸಗಳನ್ನು ಮಾಡಿದ್ದಾರೆ ಎಂದು ಇಲ್ಲಿನ ಜನರೇ ಹೇಳುತ್ತಾರೆ.
ಬಡವರಿಗೆ ಉಚಿತ ಬೋರ್ವೆಲ್, ವೈದ್ಯಕೀಯ ವೆಚ್ಚ, ಉನ್ನತ ಶಿಕ್ಷಣಕ್ಕೆ ಧನಸಹಾಯ, ಕಪ್ಯೂಟರ್ ತರಬೇತಿ ಕೇಂದ್ರಗಳ ಸ್ಥಾಪನೆ, ಸಮುದಾಯ ಭವನಗಳ ನಿರ್ಮಾಣ ಮಾಡಿದ್ದಾರೆ. ಮಂತ್ರಿಯಾಗಿರುವುದರಿಂದ ಅನುದಾನಗಳನ್ನು ತಂದು ಅಭಿವೃದ್ಧಿಪರ ಕೆಲಸಗಳನ್ನು ಶೀಘ್ರವಾಗಿ ಮಾಡಿಸುತ್ತಿದ್ದಾರೆ. ಅವರ ಗೆಲುವನ್ನು ತಪ್ಪಿಸಬಲ್ಲ ಪ್ರಬಲ ಅಭ್ಯರ್ಥಿ ಈ ಕ್ಷೇತ್ರದಲ್ಲಿ ಯಾರೂ ಇಲ್ಲ ಎಂಬುದು ಇವರಿಗೊಂದು ಪ್ಲಸ್ ಪಾಯಿಂಟ್.
2013 ರ ಚುನಾವಣೆಯಲ್ಲಿ ಕಾಂಗ್ರೆಸ್ ನ ಸಂತೋಷ್ ಲಾಡ್ 76802 ಮತಗಳಿಸಿದ್ದರೆ, ಕೆಜೆಪಿಯ ಎನ್ ಸಿ ಮಲ್ಲಪ್ಪ 31141 ಮತ ಪಡೆದಿದ್ದರು. ಈ ಬಾರಿ ಕೆಜೆಪಿ. ಬಿಜೆಪಿ ವಿಲೀನವಾಗಿರುವುದರಿಂದ ಈ ಕ್ಷೇತ್ರದಲ್ಲಿ ಲಾಡ್ ಅವರನ್ನು ಎದುರಿಸುವ ಸಮರ್ಥ ಅಭಯರ್ಥಿಯನ್ನಾಗಿ ಬಿಜೆಪಿ ಯಾರನ್ನು ಆರಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications