ಕ್ಷೇತ್ರ ಪರಿಚಯ: ಕಾರ್ಕಳದಲ್ಲಿ ಸುನಿಲ್ ಕುಮಾರ್ ಗೆ ಸಿಗುತ್ತಾ 3ನೇ ಗೆಲುವು?
ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಉಡುಪಿ ಜಿಲ್ಲೆಯ ತಕ್ಕಮಟ್ಟಿಗೆ ದೊಡ್ಡ ಪಟ್ಟಣ ಕಾರ್ಕಳ. ಮಂಗಳೂರಿನಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ. ಇಲ್ಲಿನ ಗೋಮೇಟೇಶ್ವರ ಮೂರ್ತಿ ಪ್ರಸಿದ್ಧಿಯನ್ನು ಪಡೆದಿದೆ.
18ನೇ ಶತಮಾನದ ಸೈಂಟ್ ಲಾರೆನ್ಸ್ ಚರ್ಚ್, ಚತುರ್ಮುಖ ಬಸದಿ, ಪಡುತಿರುಪತಿ, ಅನಂತ ಪದ್ಮನಾಭ ದೇವಸ್ಥಾನ, ಆನೆಕರೆ ಸೇರಿದಂತೆ ಹಲವು ಕೆರೆಗಳನ್ನು ಇಲ್ಲಿ ಕಾಣಬಹುದು.
ಕಾಂಗ್ರೆಸ್ ಹಿರಿಯ ರಾಜಕಾರಣಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಇದೇ ಕಾರ್ಕಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

1967ರಲ್ಲಿ ಇಲ್ಲಿ ಬಿಜೆಪಿ (ಹಿಂದಿನ ಭಾರತೀಯ ಜನ ಸಂಘ) ಗೆಲುವು ಸಾಧಿಸಿತ್ತು ಎಂದರೆ ಇವತ್ತಿಗೂ ಅಚ್ಚರಿಯಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಅಂದರೆ 1972ರಲ್ಲಿ ಇಲ್ಲಿ ಕಾಂಗ್ರೆಸ್ ನ ವೀರಪ್ಪ ಮೋಯ್ಲಿ ಗೆಲುವು ಸಾಧಿಸಿದ್ದರು. ನಂತರ ಅವರನ್ನು ಸೋಲಿಸುವವರೇ ಇಲ್ಲಿ ಹುಟ್ಟಲಿಲ್ಲ. 1978, 83, 85, 89, 94 ರಲ್ಲಿ ಇಲ್ಲಿ ಮೋಯ್ಲಿ ಗೆದ್ದರು. ಹೀಗೆ ಸತತ ಆರು ಚುನಾವಣೆಗಳಲ್ಲಿ ಗೆದ್ದಿದ್ದಲ್ಲದೆ 1992-94ರ ವರೆಗೆ ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೂ ಅವರು ಏರಿದ್ದರು.
1999ರಲ್ಲಿ ಮೋಯ್ಲಿ ಇಲ್ಲಿ ಕಣಕ್ಕಿಳಿಯಲಿಲ್ಲ. ಮುಂದೆ ಅವರು ಕೇಂದ್ರ ರಾಜಕಾರಣದತ್ತ ತಮ್ಮ ಚಿತ್ತ ಹರಿಸಿದರು. ಇಲ್ಲಿ 1999ರಲ್ಲಿ ಕಾಂಗ್ರೆಸ್ ನ ಎಚ್. ಗೋಪಾಲ ಭಂಡಾರಿ ಕಣಕ್ಕಿಳಿದು ಗೆಲುವು ಸಾಧಿಸಿದರು.
2004ರಲ್ಲಿ ಚುನಾವಣೆ ನಡೆದಾಗ ಕಾಂಗ್ರೆಸ್ ಭದ್ರಕೋಟೆ ಮೊದಲ ಬಾರಿಗೆ ಇಲ್ಲಿ ಬಿರುಕು ಬಿಟ್ಟಿತು. ದತ್ತಪೀಠ ಹೋರಾಟದ ಮೂಸೆಯಿಂದ ಹೊರಬಂದ ಯುವ ರಾಜಕಾರಣಿ ವಿ. ಸುನಿಲ್ ಕುಮಾರ್ ಗೋಪಾಲ್ ಭಂಡಾರಿಗೆ ಸೋಲುಣಿಸಿ ಬಹು ದೀರ್ಘಕಾಲದ ನಂತರ ಕ್ಷೇತ್ರವನ್ನು ಮತ್ತೆ ಬಿಜೆಪಿ ತೆಕ್ಕೆಗೆ ಎಳೆದು ತಂದರು.
ಆದರೆ 2008ರಲ್ಲಿ ಮತ್ತೆ ಗೋಪಾಲ್ ಭಂಡಾರಿ ಎದ್ದು ನಿಂತರು. ಸುಮಾರು ಒಂದು ಸಾವಿರ ಮತಗಳಿಂದ ಸುನಿಲ್ ಕುಮಾರ್ ರನ್ನು ಸೋಲಿಸಿ ಮತ್ತೆ ವಿಧಾನಸಭೆಗೆ ಪ್ರವೇಶ ಗಿಟ್ಟಿಸಿದರು.
2013ರ ಚುನಾವಣೆಯಲ್ಲಿ ಫಲಿತಾಂಶ ಪುನಃ ಅದಲು ಬದಲಾಯಿತು. ಈ ಚುನಾವಣೆಯಲ್ಲಿ ಇಡೀ ಉಡುಪಿಯಲ್ಲಿ ಬಿಜೆಪಿ ಸೋತಾಗ ಗೆದ್ದ ಏಕೈಕ ಶಾಸಕರೆಂದರೆ ಸುನಿಲ್ ಕುಮಾರ್ ಮಾತ್ರ. ಸದ್ಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಸುನಿಲ್ ಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಕ್ಷೇತ್ರದ ಇತಿಹಾಸ ನೋಡಿದರೆ ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಳೆದ ನಾಲ್ಕು ಚುನಾವಣೆಗಳಲ್ಲಿ ಸಮಬಲದ ಹೋರಾಟ ನಡೆದಿದ್ದನ್ನು ಗಮನಿಸಬಹುದು. 2013ರಲ್ಲಿ ಕಾಂಗ್ರೆಸಿನ ಎಚ್. ಗೋಪಾಲ್ ಭಂಡಾರಿ ಇಲ್ಲಿ ಸೋಲು ಕಂಡರೂ ಸೋಲಿನ ಅಂತರ ಮಾತ್ರ ಕೇವಲ 4,254 ಮತಗಳಷ್ಟೇ ಆಗಿತ್ತು. ಹೀಗಾಗಿ ಈ ಬಾರಿಯೂ ಇಲ್ಲಿ ಕಾಂಗ್ರೆಸ್ ಅವಕಾಶವಿದೆ. ಕ್ಷೇತ್ರದ ಮೇಲೆ ಜೆಡಿಎಸ್ ಗೆ ಯಾವುದೇ ಹಿಡಿತವಿಲ್ಲ.
ಒಂದೊಮ್ಮೆ ಇಲ್ಲಿ ಕಾಂಗ್ರೆಸ್ ಗೋಪಾಲ್ ಪೂಜಾರಿಯವರಿಗೆ ಟಿಕೆಟ್ ನೀಡಿದ್ದೇ ಆದಲ್ಲಿ ಮತ್ತೆ ಯುವ ರಾಜಕಾರಣಿಗಳಾದ ಗೋಪಾಲ ಭಂಡಾರಿ ಮತ್ತು ಸುನಿಲ್ ಕುಮಾರ್ ಮಧ್ಯೆ ತುರುಸಿನ ಸ್ಪರ್ಧೆ ನಡೆಯಲಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications