ಕ್ಷೇತ್ರ ಪರಿಚಯ : ಕಿತ್ತೂರಿನಲ್ಲಿ ಯಾರಿಗೆ ಒಲಿಯಲಿದೆ ಜಯ?
ಬೆಳಗಾವಿ ಜಿಲ್ಲೆಯ ಒಂದು ತಾಲೂಕು ಕೇಂದ್ರ ಕಿತ್ತೂರು. ಕನ್ನಡ ನಾಡಿನ ವೀರ ಮಹಿಳೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮ ಅವರಿಂದ ಕಿತ್ತೂರು ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ.
ವಿಧಾನಸಭಾ ಕ್ಷೇತ್ರವಾಗಿದ್ದ ಕಿತ್ತೂರನ್ನು ತಾಲೂಕು ಕೇಂದ್ರವಾಗಿ ಮಾಡಬೇಕು ಎಂದು ಒತ್ತಾಯಿಸಿ ಸುಮಾರು 5 ದಶಕಗಳ ಕಾಲ ಹೋರಾಟ ನಡೆದಿತ್ತು. ಅಂತಿಮವಾಗಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಕಿತ್ತೂರನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದರು.
30ಕ್ಕೂ ಹೆಚ್ಚು ಹಳ್ಳಿಗಳಿಗೆ ಕಿತ್ತೂರು ವಹಿವಾಟು ಕೇಂದ್ರ. ನೂರಕ್ಕೂ ಅಧಿಕ ಹಳ್ಳಿಗಳನ್ನು ಒಳಗೊಂಡಿರುವ ಕಿತ್ತೂರಿನಲ್ಲಿ 1.50 ಲಕ್ಷಕ್ಕೂ ಅಧಿಕ ಮತದಾರರು ಇದ್ದಾರೆ.

ಕಿತ್ತೂರು ಕ್ಷೇತ್ರದ ಹಾಲಿ ಶಾಸಕರು ಡಿ.ಬಿ.ಇನಾಮದಾರ. ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಹಾಲಿ ಶಾಸಕರಾದ ಇವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಅವರು ಕ್ಷೇತ್ರದಲ್ಲಿ ಯಾವದೇ ಕೆಲಸ ಕಾರ್ಯಗಳನ್ನು ಮಾಡುತ್ತಿಲ್ಲ.
ಇನಾಮದಾರ ಅವರ ಬಲಗೈ ಬಂಟರಾಗಿದ್ದ ಬಾಬಾಸಾಹೇಬ ಪಾಟೀಲ ಕ್ಷೇತ್ರದಲ್ಲಿಯ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ, ಬಿಜೆಪಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ. ಇದರಿಂದಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತಡೆ ಬಿದ್ದಿದೆ.
2013ರ ಚುನಾವಣೆಯಲ್ಲಿ ಡಿ.ಬಿ.ಇನಾಮದಾರ ಅವರು 53,924 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಸುರೇಶ್ ಶಿವರುದ್ರಪ್ಪ 35,634 ಮತ, ಜೆಡಿಎಸ್ನ ಆನಂದ್ ಅಪ್ಪುಗೋಳ್ ಅವರು 20,657 ಮತಗಳನ್ನು ಪಡೆದಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications