ಕ್ಷೇತ್ರ ಪರಿಚಯ : ಕಿತ್ತೂರಿನಲ್ಲಿ ಯಾರಿಗೆ ಒಲಿಯಲಿದೆ ಜಯ?
ಬೆಳಗಾವಿ ಜಿಲ್ಲೆಯ ಒಂದು ತಾಲೂಕು ಕೇಂದ್ರ ಕಿತ್ತೂರು. ಕನ್ನಡ ನಾಡಿನ ವೀರ ಮಹಿಳೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮ ಅವರಿಂದ ಕಿತ್ತೂರು ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ.
ವಿಧಾನಸಭಾ ಕ್ಷೇತ್ರವಾಗಿದ್ದ ಕಿತ್ತೂರನ್ನು ತಾಲೂಕು ಕೇಂದ್ರವಾಗಿ ಮಾಡಬೇಕು ಎಂದು ಒತ್ತಾಯಿಸಿ ಸುಮಾರು 5 ದಶಕಗಳ ಕಾಲ ಹೋರಾಟ ನಡೆದಿತ್ತು. ಅಂತಿಮವಾಗಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಕಿತ್ತೂರನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದರು.
30ಕ್ಕೂ ಹೆಚ್ಚು ಹಳ್ಳಿಗಳಿಗೆ ಕಿತ್ತೂರು ವಹಿವಾಟು ಕೇಂದ್ರ. ನೂರಕ್ಕೂ ಅಧಿಕ ಹಳ್ಳಿಗಳನ್ನು ಒಳಗೊಂಡಿರುವ ಕಿತ್ತೂರಿನಲ್ಲಿ 1.50 ಲಕ್ಷಕ್ಕೂ ಅಧಿಕ ಮತದಾರರು ಇದ್ದಾರೆ.

ಕಿತ್ತೂರು ಕ್ಷೇತ್ರದ ಹಾಲಿ ಶಾಸಕರು ಡಿ.ಬಿ.ಇನಾಮದಾರ. ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಹಾಲಿ ಶಾಸಕರಾದ ಇವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಅವರು ಕ್ಷೇತ್ರದಲ್ಲಿ ಯಾವದೇ ಕೆಲಸ ಕಾರ್ಯಗಳನ್ನು ಮಾಡುತ್ತಿಲ್ಲ.
ಇನಾಮದಾರ ಅವರ ಬಲಗೈ ಬಂಟರಾಗಿದ್ದ ಬಾಬಾಸಾಹೇಬ ಪಾಟೀಲ ಕ್ಷೇತ್ರದಲ್ಲಿಯ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ, ಬಿಜೆಪಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ. ಇದರಿಂದಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತಡೆ ಬಿದ್ದಿದೆ.
2013ರ ಚುನಾವಣೆಯಲ್ಲಿ ಡಿ.ಬಿ.ಇನಾಮದಾರ ಅವರು 53,924 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಸುರೇಶ್ ಶಿವರುದ್ರಪ್ಪ 35,634 ಮತ, ಜೆಡಿಎಸ್ನ ಆನಂದ್ ಅಪ್ಪುಗೋಳ್ ಅವರು 20,657 ಮತಗಳನ್ನು ಪಡೆದಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications