ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಷೇತ್ರ ಪರಿಚಯ : ಕಿತ್ತೂರಿನಲ್ಲಿ ಯಾರಿಗೆ ಒಲಿಯಲಿದೆ ಜಯ?

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ ಜಿಲ್ಲೆಯ ಒಂದು ತಾಲೂಕು ಕೇಂದ್ರ ಕಿತ್ತೂರು. ಕನ್ನಡ ನಾಡಿನ ವೀರ ಮಹಿಳೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮ ಅವರಿಂದ ಕಿತ್ತೂರು ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ.

ವಿಧಾನಸಭಾ ಕ್ಷೇತ್ರವಾಗಿದ್ದ ಕಿತ್ತೂರನ್ನು ತಾಲೂಕು ಕೇಂದ್ರವಾಗಿ ಮಾಡಬೇಕು ಎಂದು ಒತ್ತಾಯಿಸಿ ಸುಮಾರು 5 ದಶಕಗಳ ಕಾಲ ಹೋರಾಟ ನಡೆದಿತ್ತು. ಅಂತಿಮವಾಗಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಕಿತ್ತೂರನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದರು.

ರಾಮದುರ್ಗ ಕ್ಷೇತ್ರ ಪರಿಚಯ : ಗೊಡಚಿ ವೀರಭದ್ರೇಶ್ವರ ಕೃಪೆ ಯಾರಿಗೆ?ರಾಮದುರ್ಗ ಕ್ಷೇತ್ರ ಪರಿಚಯ : ಗೊಡಚಿ ವೀರಭದ್ರೇಶ್ವರ ಕೃಪೆ ಯಾರಿಗೆ?

30ಕ್ಕೂ ಹೆಚ್ಚು ಹಳ್ಳಿಗಳಿಗೆ ಕಿತ್ತೂರು ವಹಿವಾಟು ಕೇಂದ್ರ. ನೂರಕ್ಕೂ ಅಧಿಕ ಹಳ್ಳಿಗಳನ್ನು ಒಳಗೊಂಡಿರುವ ಕಿತ್ತೂರಿನಲ್ಲಿ 1.50 ಲಕ್ಷಕ್ಕೂ ಅಧಿಕ ಮತದಾರರು ಇದ್ದಾರೆ.

Karnataka assembly election 2018 : Kiittur constituency profile

ಕಿತ್ತೂರು ಕ್ಷೇತ್ರದ ಹಾಲಿ ಶಾಸಕರು ಡಿ.ಬಿ.ಇನಾಮದಾರ. ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಹಾಲಿ ಶಾಸಕರಾದ ಇವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಅವರು ಕ್ಷೇತ್ರದಲ್ಲಿ ಯಾವದೇ ಕೆಲಸ ಕಾರ್ಯಗಳನ್ನು ಮಾಡುತ್ತಿಲ್ಲ.

ಕ್ಷೇತ್ರ ಪರಿಚಯ : ಸವದತ್ತಿ ಯಲ್ಲಮ್ಮ ಕೃಪೆಯಿಂದ ಯಾರಿಗೆ ಗೆಲುವು?ಕ್ಷೇತ್ರ ಪರಿಚಯ : ಸವದತ್ತಿ ಯಲ್ಲಮ್ಮ ಕೃಪೆಯಿಂದ ಯಾರಿಗೆ ಗೆಲುವು?

ಇನಾಮದಾರ ಅವರ ಬಲಗೈ ಬಂಟರಾಗಿದ್ದ ಬಾಬಾಸಾಹೇಬ ಪಾಟೀಲ ಕ್ಷೇತ್ರದಲ್ಲಿಯ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ, ಬಿಜೆಪಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ. ಇದರಿಂದಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತಡೆ ಬಿದ್ದಿದೆ.

2013ರ ಚುನಾವಣೆಯಲ್ಲಿ ಡಿ.ಬಿ.ಇನಾಮದಾರ ಅವರು 53,924 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಸುರೇಶ್ ಶಿವರುದ್ರಪ್ಪ 35,634 ಮತ, ಜೆಡಿಎಸ್‌ನ ಆನಂದ್ ಅಪ್ಪುಗೋಳ್ ಅವರು 20,657 ಮತಗಳನ್ನು ಪಡೆದಿದ್ದರು.

English summary
Karnataka Assembly Election 2018 : Read all about Kiittur assembly constituency of Belagavi district. Get election news from Kiittur. Know about candidates list, election results during Karnataka elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X